<p><strong>ಚೆನ್ನೈ: </strong>ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದಕ್ಕೆ ₹500 ಕೋಟಿ ಮಾನನಷ್ಟ ಪರಿಹಾರ ನೀಡುವಂತೆ ಆಡಳಿತಾರೂಢ ಡಿಎಂಕೆ ನ್ಯಾಯಾಂಗ ನೋಟಿಸ್ ಜಾರಿ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ,‘ಕಾನೂನು ಕ್ರಮ ಎದುರಿಸಲು ಸಿದ್ಧನಿದ್ದೇನೆ’ ಎಂದಿದ್ದಾರೆ.</p>.<p>ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿರುವುದಕ್ಕೆ ಸಮಾನ ಮೊತ್ತ ಪರಿಹಾರ ನೀಡುವಂತೆ ಡಿಎಂಕೆಗೆ ನ್ಯಾಯಾಂಗ ನೋಟಿಸ್ ನೀಡುವುದಾಗಿಯೂ ಅವರು ಸೋಮವಾರ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅಣ್ಣಾಮಲೈ, ‘ಡಿಎಂಕೆ ಈ ಹಿಂದೆ ಆಡಳಿತದಲ್ಲಿದ್ದಾಗ ನಡೆದಿರುವ ಮೆಟ್ರೊ ರೈಲು ಯೋಜನೆ ಹಗರಣದ ಕುರಿತು ದಾಖಲೆಗಳಿವೆ. ನಾವು ಅದನ್ನು ಸಿಬಿಐಗೆ ಸಲ್ಲಿಸುತ್ತೇವೆ’ ಎಂದಿದ್ದಾರೆ.</p>.<p>ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ವಿರುದ್ಧ ಹರಿಹಾಯ್ದ ಅಣ್ಣಾಮಲೈ ಅವರು, ‘ನಿಮ್ಮ ಪಕ್ಷದ ಅಧ್ಯಕ್ಷರಿಗೆ ಮತ್ತು ಇತರರಿಗೆ ಸಿಬಿಐ ಸಮನ್ಸ್ ಜಾರಿಯಾಗುವವರೆಗೆ ಸುಮ್ಮನಿರಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದಕ್ಕೆ ₹500 ಕೋಟಿ ಮಾನನಷ್ಟ ಪರಿಹಾರ ನೀಡುವಂತೆ ಆಡಳಿತಾರೂಢ ಡಿಎಂಕೆ ನ್ಯಾಯಾಂಗ ನೋಟಿಸ್ ಜಾರಿ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ,‘ಕಾನೂನು ಕ್ರಮ ಎದುರಿಸಲು ಸಿದ್ಧನಿದ್ದೇನೆ’ ಎಂದಿದ್ದಾರೆ.</p>.<p>ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿರುವುದಕ್ಕೆ ಸಮಾನ ಮೊತ್ತ ಪರಿಹಾರ ನೀಡುವಂತೆ ಡಿಎಂಕೆಗೆ ನ್ಯಾಯಾಂಗ ನೋಟಿಸ್ ನೀಡುವುದಾಗಿಯೂ ಅವರು ಸೋಮವಾರ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅಣ್ಣಾಮಲೈ, ‘ಡಿಎಂಕೆ ಈ ಹಿಂದೆ ಆಡಳಿತದಲ್ಲಿದ್ದಾಗ ನಡೆದಿರುವ ಮೆಟ್ರೊ ರೈಲು ಯೋಜನೆ ಹಗರಣದ ಕುರಿತು ದಾಖಲೆಗಳಿವೆ. ನಾವು ಅದನ್ನು ಸಿಬಿಐಗೆ ಸಲ್ಲಿಸುತ್ತೇವೆ’ ಎಂದಿದ್ದಾರೆ.</p>.<p>ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ವಿರುದ್ಧ ಹರಿಹಾಯ್ದ ಅಣ್ಣಾಮಲೈ ಅವರು, ‘ನಿಮ್ಮ ಪಕ್ಷದ ಅಧ್ಯಕ್ಷರಿಗೆ ಮತ್ತು ಇತರರಿಗೆ ಸಿಬಿಐ ಸಮನ್ಸ್ ಜಾರಿಯಾಗುವವರೆಗೆ ಸುಮ್ಮನಿರಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>