<p><strong>ಥೇಣಿ(ತಮಿಳುನಾಡು):</strong> ಪಕ್ಷದ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಟೀಕಿಸಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕ ಒ. ಪನ್ನೀರ್ಸೆಲ್ವಂ, ‘ಅದನ್ನು ಬದಲಾಯಿಸಲು ಅವರು ಯಾರು?’ ಎಂದು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಹೆಸರು ಉಲ್ಲೇಖಿಸಿದೆ ಕಿಡಿಕಾರಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಂ. ಜಿ. ರಾಮಚಂದ್ರನ್ ಅವರು ಪಕ್ಷವನ್ನು ಕಟ್ಟಿ ಈ ನಿಯಮಗಳನ್ನು ತಂದಿದ್ದಾರೆ. ಅದನ್ನು ಬದಲಾಯಿಸಲು ನೀವು(ಎಡಪ್ಪಾಡಿ ಕೆ ಪಳನಿಸ್ವಾಮಿ) ಯಾರು?’ ಎಂದು ಕೇಳಿದ್ದಾರೆ.</p><p>‘ಎಲ್ಲಾ ಅವಮಾನಗಳನ್ನು ಸಹಿಸಿಕೊಂಡು 46 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ’ ಎಂದೂ ಹೇಳಿದ್ದಾರೆ.</p><p>‘ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿಯಾಗಿದ್ದೇನೆ. ಪಕ್ಷದ ಸಂಯೋಜಕನಾಗಿಯೂ ಕೆಲಸ ಮಾಡಿದ್ದೇನೆ. ನಾನು ಯಾವ ತಪ್ಪು ಮಾಡಿದೆ? ಎಂದಾದರೂ ಒಬ್ಬ ಕಾರ್ಯಕರ್ತನ ವಿರುದ್ಧ ಕೈ ಎತ್ತಿದ್ದೇನೆಯೇ? ನಾನು ಯಾವ ತಪ್ಪು ಮಾಡಿದ್ದೇನೆ ಎಂದು ನೀವು ನನಗೆ ಹೇಳಿದರೆ, ರಾಜಕೀಯವನ್ನು ತೊರೆಯುತ್ತೇನೆ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥೇಣಿ(ತಮಿಳುನಾಡು):</strong> ಪಕ್ಷದ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಟೀಕಿಸಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕ ಒ. ಪನ್ನೀರ್ಸೆಲ್ವಂ, ‘ಅದನ್ನು ಬದಲಾಯಿಸಲು ಅವರು ಯಾರು?’ ಎಂದು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಹೆಸರು ಉಲ್ಲೇಖಿಸಿದೆ ಕಿಡಿಕಾರಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಂ. ಜಿ. ರಾಮಚಂದ್ರನ್ ಅವರು ಪಕ್ಷವನ್ನು ಕಟ್ಟಿ ಈ ನಿಯಮಗಳನ್ನು ತಂದಿದ್ದಾರೆ. ಅದನ್ನು ಬದಲಾಯಿಸಲು ನೀವು(ಎಡಪ್ಪಾಡಿ ಕೆ ಪಳನಿಸ್ವಾಮಿ) ಯಾರು?’ ಎಂದು ಕೇಳಿದ್ದಾರೆ.</p><p>‘ಎಲ್ಲಾ ಅವಮಾನಗಳನ್ನು ಸಹಿಸಿಕೊಂಡು 46 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇನೆ’ ಎಂದೂ ಹೇಳಿದ್ದಾರೆ.</p><p>‘ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿಯಾಗಿದ್ದೇನೆ. ಪಕ್ಷದ ಸಂಯೋಜಕನಾಗಿಯೂ ಕೆಲಸ ಮಾಡಿದ್ದೇನೆ. ನಾನು ಯಾವ ತಪ್ಪು ಮಾಡಿದೆ? ಎಂದಾದರೂ ಒಬ್ಬ ಕಾರ್ಯಕರ್ತನ ವಿರುದ್ಧ ಕೈ ಎತ್ತಿದ್ದೇನೆಯೇ? ನಾನು ಯಾವ ತಪ್ಪು ಮಾಡಿದ್ದೇನೆ ಎಂದು ನೀವು ನನಗೆ ಹೇಳಿದರೆ, ರಾಜಕೀಯವನ್ನು ತೊರೆಯುತ್ತೇನೆ’ ಎಂದು ಸವಾಲು ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>