<p><strong>ಬೀಜಿಂಗ್:</strong> ‘ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಆತಿಥ್ಯವನ್ನು ವಹಿಸಲು ಭಾರತಕ್ಕೆ ಅಗತ್ಯವಿರುವ ಎಲ್ಲ ಬೆಂಬಲ ನೀಡಲಾಗುವುದು’ ಎಂದು ಚೀನಾ ಮಂಗಳವಾರ ಹೇಳಿದೆ.</p>.<p>ಅಲ್ಲದೆ, ಮಹತ್ವದ ಈ ಜಾಗತಿಕ ಸಮ್ಮೇಳನದ ಯಶಸ್ಸಿಗಾಗಿ ಎಲ್ಲ ಭಾಗಿದಾರರ ಜೊತೆಗೂಡಿ ಕಾರ್ಯನಿರ್ವಹಿಸಲು ಸಿದ್ಧ ಎಂದೂ ತಿಳಿಸಿದೆ. </p>.<p>ಶೃಂಗಸಭೆಯಲ್ಲಿ ಚೀನಾ ದೇಶವನ್ನು ಪ್ರಧಾನಿ ಲಿ ಕ್ವಿಯಾಂಗ್ ಅವರು ಪ್ರತಿನಿಧಿಸುವರು. ಅಧ್ಯಕ್ಷ ಷಿ ಜಿನ್ಪಿಂಗ್ ಭಾಗವಹಿಸುತ್ತಿಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರವಷ್ಟೇ ಪ್ರಕಟಿಸಿತ್ತು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು, ‘ಅಂತರರಾಷ್ಟ್ರೀಯ ಆರ್ಥಿಕ ಸಹಕಾರಕ್ಕೆ ಸಂಬಂಧಿಸಿ ಜಿ20 ಶೃಂಗಸಭೆಯು ಪ್ರಮುಖ ಹಾಗೂ ಮುಂಚೂಣಿ ವೇದಿಕೆಯಾಗಿದೆ ಎಂದರು. ಈ ಶೃಂಗಸಭೆಯು ನವದೆಹಲಿಯಲ್ಲಿ ಸೆಪ್ಟೆಂಬರ್ 9–10ರಂದು ನಡೆಯಲಿದೆ.</p>.<p>ಗಡಿ ವಿವಾದವನ್ನು ಉಲ್ಲೇಖಿಸದೆಯೇ ಅವರು, ‘ಭಾರತ –ಚೀನಾ ಬಾಂಧವ್ಯ ಸ್ಥಿರವಾಗಿದೆ. ಉಭಯ ರಾಷ್ಟ್ರಗಳ ನಡುವೆ ವಿವಿಧ ಹಂತಗಳಲ್ಲಿ ಚರ್ಚೆ, ಸಂವಹನಗಳು ನಡೆದಿವೆ ಎಂದರು. ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 2020ರಲ್ಲಿ ನಡೆದಿದ್ದ ಘರ್ಷಣೆಯ ಬಳಿಕ ಉಭಯದ ದೇಶಗಳ ಬಾಂಧವ್ಯದಲ್ಲಿ ಬಿರುಕು ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ‘ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಆತಿಥ್ಯವನ್ನು ವಹಿಸಲು ಭಾರತಕ್ಕೆ ಅಗತ್ಯವಿರುವ ಎಲ್ಲ ಬೆಂಬಲ ನೀಡಲಾಗುವುದು’ ಎಂದು ಚೀನಾ ಮಂಗಳವಾರ ಹೇಳಿದೆ.</p>.<p>ಅಲ್ಲದೆ, ಮಹತ್ವದ ಈ ಜಾಗತಿಕ ಸಮ್ಮೇಳನದ ಯಶಸ್ಸಿಗಾಗಿ ಎಲ್ಲ ಭಾಗಿದಾರರ ಜೊತೆಗೂಡಿ ಕಾರ್ಯನಿರ್ವಹಿಸಲು ಸಿದ್ಧ ಎಂದೂ ತಿಳಿಸಿದೆ. </p>.<p>ಶೃಂಗಸಭೆಯಲ್ಲಿ ಚೀನಾ ದೇಶವನ್ನು ಪ್ರಧಾನಿ ಲಿ ಕ್ವಿಯಾಂಗ್ ಅವರು ಪ್ರತಿನಿಧಿಸುವರು. ಅಧ್ಯಕ್ಷ ಷಿ ಜಿನ್ಪಿಂಗ್ ಭಾಗವಹಿಸುತ್ತಿಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯ ಸೋಮವಾರವಷ್ಟೇ ಪ್ರಕಟಿಸಿತ್ತು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು, ‘ಅಂತರರಾಷ್ಟ್ರೀಯ ಆರ್ಥಿಕ ಸಹಕಾರಕ್ಕೆ ಸಂಬಂಧಿಸಿ ಜಿ20 ಶೃಂಗಸಭೆಯು ಪ್ರಮುಖ ಹಾಗೂ ಮುಂಚೂಣಿ ವೇದಿಕೆಯಾಗಿದೆ ಎಂದರು. ಈ ಶೃಂಗಸಭೆಯು ನವದೆಹಲಿಯಲ್ಲಿ ಸೆಪ್ಟೆಂಬರ್ 9–10ರಂದು ನಡೆಯಲಿದೆ.</p>.<p>ಗಡಿ ವಿವಾದವನ್ನು ಉಲ್ಲೇಖಿಸದೆಯೇ ಅವರು, ‘ಭಾರತ –ಚೀನಾ ಬಾಂಧವ್ಯ ಸ್ಥಿರವಾಗಿದೆ. ಉಭಯ ರಾಷ್ಟ್ರಗಳ ನಡುವೆ ವಿವಿಧ ಹಂತಗಳಲ್ಲಿ ಚರ್ಚೆ, ಸಂವಹನಗಳು ನಡೆದಿವೆ ಎಂದರು. ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 2020ರಲ್ಲಿ ನಡೆದಿದ್ದ ಘರ್ಷಣೆಯ ಬಳಿಕ ಉಭಯದ ದೇಶಗಳ ಬಾಂಧವ್ಯದಲ್ಲಿ ಬಿರುಕು ಮೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>