<p><strong>ಜಮ್ಮು:</strong> ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಶೋಧ ಕಾರ್ಯಾಚರಣೆ ಆರಂಭಿಸಿದೆ.</p><p>ರಿಯಾಸಿ ಜಿಲ್ಲೆಯಲ್ಲಿರುವ ಶಿವ ಖೋರಿ ದೇವಾಲಯದಿಂದ ಕತ್ರಾದತ್ತ ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಜೂನ್ 9ರಂದು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಬಸ್ ಕಂದಕಕ್ಕೆ ಉರುಳಿತ್ತು. 7 ಯಾತ್ರಾರ್ಥಿಗಳು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟು, 41 ಜನರು ಗಾಯಗೊಂಡಿದ್ದರು. </p><p>ಕೇಂದ್ರ ಗೃಹ ಸಚಿವಾಲಯ ಈ ಪ್ರಕರಣವನ್ನು ಜೂನ್ 17ರಂದು ಎನ್ಐಎಗೆ ವಹಿಸಿತ್ತು.</p><p>ದಾಳಿಗೂ ಮುನ್ನ ಭಯೋತ್ಪಾದಕರಿಗೆ ನೆರವಾದ ಆರೋಪದಲ್ಲಿ ರಾಜೌರಿಯ ಹಕಮ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ.</p><p>ಉಗ್ರರ ದಾಳಿ ಸಂಬಂಧ ಎನ್ಐಎ ವಿವಿಧ ತಂಡಗಳು ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ಶೋಧ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಜೌರಿಯ ಐದು ಸ್ಥಳಗಳಲ್ಲಿ ಜೂನ್ 30ರಂದು ಕಾರ್ಯಾಚರಣೆ ನಡೆಸಿದ್ದ ಎನ್ಐಎ, ಭಯೋತ್ಪಾದಕರಿಗೆ ಸಂಬಂಧಿಸಿದ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದರು.</p>.ಉಗ್ರರ ದಾಳಿ: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಗೆ ಎನ್ಐಎ ತಂಡ ಭೇಟಿ.ರಿಯಾಸಿ ಭಯೋತ್ಪಾದಕ ದಾಳಿ: ಎನ್ಐಎ ತನಿಖೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಶಿವ ಖೋರಿ ದೇವಾಲಯದಿಂದ ಹಿಂತಿರುಗುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚುರುಕುಗೊಳಿಸಿದೆ. ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಶೋಧ ಕಾರ್ಯಾಚರಣೆ ಆರಂಭಿಸಿದೆ.</p><p>ರಿಯಾಸಿ ಜಿಲ್ಲೆಯಲ್ಲಿರುವ ಶಿವ ಖೋರಿ ದೇವಾಲಯದಿಂದ ಕತ್ರಾದತ್ತ ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಜೂನ್ 9ರಂದು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಬಸ್ ಕಂದಕಕ್ಕೆ ಉರುಳಿತ್ತು. 7 ಯಾತ್ರಾರ್ಥಿಗಳು ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟು, 41 ಜನರು ಗಾಯಗೊಂಡಿದ್ದರು. </p><p>ಕೇಂದ್ರ ಗೃಹ ಸಚಿವಾಲಯ ಈ ಪ್ರಕರಣವನ್ನು ಜೂನ್ 17ರಂದು ಎನ್ಐಎಗೆ ವಹಿಸಿತ್ತು.</p><p>ದಾಳಿಗೂ ಮುನ್ನ ಭಯೋತ್ಪಾದಕರಿಗೆ ನೆರವಾದ ಆರೋಪದಲ್ಲಿ ರಾಜೌರಿಯ ಹಕಮ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ.</p><p>ಉಗ್ರರ ದಾಳಿ ಸಂಬಂಧ ಎನ್ಐಎ ವಿವಿಧ ತಂಡಗಳು ರಾಜೌರಿ ಮತ್ತು ರಿಯಾಸಿ ಜಿಲ್ಲೆಗಳಲ್ಲಿ ಶೋಧ ನಡೆಸುತ್ತಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ರಾಜೌರಿಯ ಐದು ಸ್ಥಳಗಳಲ್ಲಿ ಜೂನ್ 30ರಂದು ಕಾರ್ಯಾಚರಣೆ ನಡೆಸಿದ್ದ ಎನ್ಐಎ, ಭಯೋತ್ಪಾದಕರಿಗೆ ಸಂಬಂಧಿಸಿದ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದರು.</p>.ಉಗ್ರರ ದಾಳಿ: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಗೆ ಎನ್ಐಎ ತಂಡ ಭೇಟಿ.ರಿಯಾಸಿ ಭಯೋತ್ಪಾದಕ ದಾಳಿ: ಎನ್ಐಎ ತನಿಖೆ ಚುರುಕು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>