<p><strong>ನವದೆಹಲಿ:</strong> ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಸ್ಥಳದಿಂದ ವಶಪಡಿಸಿಕೊಂಡ ಮೂರು ಕಾರ್ಟ್ರಿಡ್ಜ್ಗಳನ್ನು ಭದ್ರತಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಮೂರು ಕಾರ್ಟ್ರಿಡ್ಜ್ಗಳ ಪೈಕಿ ಎರಡು ಜೀವಂತ ಗುಂಡುಗಳಾಗಿದ್ದು, ಒಂದು ಖಾಲಿ ಶೆಲ್ ಆಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮೂಲಗಳ ಪ್ರಕಾರ, 9 ಎಂಎಂ ಗುಂಡುಗಳನ್ನು ಸಾಮಾನ್ಯವಾಗಿ ಸಶಸ್ತ್ರ ಪಡೆಗಳು ಅಥವಾ ವಿಶೇಷ ಅನುಮತಿ ಪಡೆದಿರುವ ವ್ಯಕ್ತಿಗಳಿಗೆ ನೀಡಲಾಗುತ್ತದೆ.</p>.<p>ಈ ಕಾರ್ಟ್ರಿಡ್ಜ್ಗಳು ಘಟನಾ ಸ್ಥಳದಲ್ಲಿ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಗೆ ಸೇರಿದವಲ್ಲ. ಅವರ ಬಳಿ ಇದ್ದ ಗುಂಡುಗಳು ಕಾಣೆಯಾಗಿಲ್ಲ. ಹೀಗಾಗಿ, ಈ ಗುಂಡುಗಳು ಶಂಕಿತನ ಬಳಿ ಇದ್ದವೇ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Delhi Blast: ಸ್ಫೋಟಗೊಂಡ ಕಾರಿನ ಸಮೀಪ ಇದ್ದ ವಾಹನಗಳಿಗೆ ಪೊಲೀಸರ ಹುಡುಕಾಟ.<p>ಆರೋಪಿ ಉಮರ್ ನಬಿ ಫರಿದಾಬಾದ್ನಿಂದ ಹೊರಟು ಹರಿಯಾಣದ ನೂಹ್ಗೆ ಭೇಟಿ ನೀಡಿ ದೆಹಲಿಯಲ್ಲಿ ಚಹಾ ಕುಡಿದ ಸಮಯದಿಂದ ಹಿಡಿದು ಸ್ಫೋಟಕ್ಕೆ ಕಾರಣವಾದ ಸಂಪೂರ್ಣ ಘಟನೆಯನ್ನು ಮರುಸೃಷ್ಟಿಸಲು ಭದ್ರತಾ ಸಂಸ್ಥೆಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಿದ್ದಾರೆ.</p>.<p>ನ.10ರಂದು ಕೆಂಪು ಕೋಟೆ ಬಳಿ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿ 13 ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p>.Delhi Blast | ಕಾರು ಚಲಾಯಿಸುತ್ತಿದ್ದದ್ದು ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಸ್ಥಳದಿಂದ ವಶಪಡಿಸಿಕೊಂಡ ಮೂರು ಕಾರ್ಟ್ರಿಡ್ಜ್ಗಳನ್ನು ಭದ್ರತಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಮೂರು ಕಾರ್ಟ್ರಿಡ್ಜ್ಗಳ ಪೈಕಿ ಎರಡು ಜೀವಂತ ಗುಂಡುಗಳಾಗಿದ್ದು, ಒಂದು ಖಾಲಿ ಶೆಲ್ ಆಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮೂಲಗಳ ಪ್ರಕಾರ, 9 ಎಂಎಂ ಗುಂಡುಗಳನ್ನು ಸಾಮಾನ್ಯವಾಗಿ ಸಶಸ್ತ್ರ ಪಡೆಗಳು ಅಥವಾ ವಿಶೇಷ ಅನುಮತಿ ಪಡೆದಿರುವ ವ್ಯಕ್ತಿಗಳಿಗೆ ನೀಡಲಾಗುತ್ತದೆ.</p>.<p>ಈ ಕಾರ್ಟ್ರಿಡ್ಜ್ಗಳು ಘಟನಾ ಸ್ಥಳದಲ್ಲಿ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಗೆ ಸೇರಿದವಲ್ಲ. ಅವರ ಬಳಿ ಇದ್ದ ಗುಂಡುಗಳು ಕಾಣೆಯಾಗಿಲ್ಲ. ಹೀಗಾಗಿ, ಈ ಗುಂಡುಗಳು ಶಂಕಿತನ ಬಳಿ ಇದ್ದವೇ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Delhi Blast: ಸ್ಫೋಟಗೊಂಡ ಕಾರಿನ ಸಮೀಪ ಇದ್ದ ವಾಹನಗಳಿಗೆ ಪೊಲೀಸರ ಹುಡುಕಾಟ.<p>ಆರೋಪಿ ಉಮರ್ ನಬಿ ಫರಿದಾಬಾದ್ನಿಂದ ಹೊರಟು ಹರಿಯಾಣದ ನೂಹ್ಗೆ ಭೇಟಿ ನೀಡಿ ದೆಹಲಿಯಲ್ಲಿ ಚಹಾ ಕುಡಿದ ಸಮಯದಿಂದ ಹಿಡಿದು ಸ್ಫೋಟಕ್ಕೆ ಕಾರಣವಾದ ಸಂಪೂರ್ಣ ಘಟನೆಯನ್ನು ಮರುಸೃಷ್ಟಿಸಲು ಭದ್ರತಾ ಸಂಸ್ಥೆಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಿದ್ದಾರೆ.</p>.<p>ನ.10ರಂದು ಕೆಂಪು ಕೋಟೆ ಬಳಿ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿ 13 ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p>.Delhi Blast | ಕಾರು ಚಲಾಯಿಸುತ್ತಿದ್ದದ್ದು ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>