<p><strong>ನವದೆಹಲಿ</strong>: ಇಲ್ಲಿನ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪ ಸೋಮವಾರ ಸಂಜೆ ಸಂಭವಿಸಿದ ಕಾರು ಸ್ಫೋಟದ ಬಳಿಕ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.</p>.<p>ಪ್ರಮುಖ ಮಹಾನಗರಗಳು, ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ಶಾಪಿಂಗ್ ಮಾಲ್ ಹಾಗೂ ಜನಸಂದಣಿ ಇರುವಂತಹ ಸ್ಥಳಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಗರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗಳಿಗೆ ಆಯಾ ರಾಜ್ಯ ಸರ್ಕಾರಗಳು ಸಹ ಸೂಚಿಸಿವೆ.</p>.<p>ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.ದೆಹಲಿ | ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ.ದೆಹಲಿಯ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ: 8 ಸಾವು, ಹಲವರಿಗೆ ಗಾಯ.<p><strong>ಪರಿಸ್ಥಿತಿ ಅವಲೋಕಿಸಿದ ಮೋದಿ</strong></p>.<p>ಕಾರು ಸ್ಫೋಟ ಪ್ರಕರಣದ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮತ್ತಷ್ಟು ಮಾಹಿತಿ ಪಡೆದರು.</p>.<p>ಅಧಿಕಾರಿಗಳೊಂದಿಗೆ ಶಾ ಚರ್ಚೆ: ದೆಹಲಿ ಪೊಲೀಸ್ ಕಮಿಷನರ್, ಗುಪ್ತಚರ ಬ್ಯೂರೊ ನಿರ್ದೇಶಕರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸುವ ಮೂಲಕ ಕಾರು ಸ್ಫೋಟದ ಬಗ್ಗೆ ಅವಲೋಕಿಸಿದ್ದಾರೆ.</p>.<p><strong>ಆಸ್ಪತ್ರೆಗೆ ಭೇಟಿ ನೀಡಿದ ಶಾ</strong></p>.<p>ನವದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<p>ಘಟನೆ ನಡೆದ ಕೆಲ ಗಂಟೆಗಳ ಬಳಿಕ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಭೇಟಿ ನೀಡಿದ ಸಚಿವರು, ಕೆಲ ವಾರ್ಡ್ಗಳಿಗೆ ತೆರಳಿ ಗಾಯಾಳುಗಳೊಂದಿಗೆ ಚರ್ಚಿಸಿದರು.</p>.<p><strong>ತ್ವರಿತ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹ</strong></p>.<p>‘ಕಾರು ಸ್ಫೋಟವು ದುಃಖಕರ ಸಂಗತಿ. ಪ್ರಕರಣದ ಸಮಗ್ರ ಹಾಗೂ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.</p>.<p>‘ದೆಹಲಿ ಸರ್ಕಾರದ ಭದ್ರತಾ ವೈಫಲ್ಯವನ್ನು ಈ ಘಟನೆಯು ಎತ್ತಿ ತೋರಿಸುತ್ತದೆ. ಗೃಹ ಸಚಿವಾಲಯ ಹೇಳಿಕೊಳ್ಳುವಂತೆ ದೆಹಲಿಯು ಸುರಕ್ಷಿತ ರಾಜಧಾನಿ ಆಗಿದೆಯೇ’ ಎಂದು ಪ್ರಶ್ನಿಸಿದೆ.</p>.<p>‘ಇಂತಹ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಗ್ಗಟ್ಟಾಗಿ ನಿಲ್ಲಬೇಕು’ ಎಂದು ಹೇಳಿದೆ. </p>.<p>‘ನಾವು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇವೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಲ್ಲಿನ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪ ಸೋಮವಾರ ಸಂಜೆ ಸಂಭವಿಸಿದ ಕಾರು ಸ್ಫೋಟದ ಬಳಿಕ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.</p>.<p>ಪ್ರಮುಖ ಮಹಾನಗರಗಳು, ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ಶಾಪಿಂಗ್ ಮಾಲ್ ಹಾಗೂ ಜನಸಂದಣಿ ಇರುವಂತಹ ಸ್ಥಳಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<p>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಗರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗಳಿಗೆ ಆಯಾ ರಾಜ್ಯ ಸರ್ಕಾರಗಳು ಸಹ ಸೂಚಿಸಿವೆ.</p>.<p>ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.ದೆಹಲಿ | ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ: ಕೆಂಪುಕೋಟೆ ಬಳಿ ರಕ್ತದೋಕುಳಿ.ದೆಹಲಿಯ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ: 8 ಸಾವು, ಹಲವರಿಗೆ ಗಾಯ.<p><strong>ಪರಿಸ್ಥಿತಿ ಅವಲೋಕಿಸಿದ ಮೋದಿ</strong></p>.<p>ಕಾರು ಸ್ಫೋಟ ಪ್ರಕರಣದ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮತ್ತಷ್ಟು ಮಾಹಿತಿ ಪಡೆದರು.</p>.<p>ಅಧಿಕಾರಿಗಳೊಂದಿಗೆ ಶಾ ಚರ್ಚೆ: ದೆಹಲಿ ಪೊಲೀಸ್ ಕಮಿಷನರ್, ಗುಪ್ತಚರ ಬ್ಯೂರೊ ನಿರ್ದೇಶಕರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸುವ ಮೂಲಕ ಕಾರು ಸ್ಫೋಟದ ಬಗ್ಗೆ ಅವಲೋಕಿಸಿದ್ದಾರೆ.</p>.<p><strong>ಆಸ್ಪತ್ರೆಗೆ ಭೇಟಿ ನೀಡಿದ ಶಾ</strong></p>.<p>ನವದೆಹಲಿಯ ಎಲ್ಎನ್ಜೆಪಿ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<p>ಘಟನೆ ನಡೆದ ಕೆಲ ಗಂಟೆಗಳ ಬಳಿಕ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಭೇಟಿ ನೀಡಿದ ಸಚಿವರು, ಕೆಲ ವಾರ್ಡ್ಗಳಿಗೆ ತೆರಳಿ ಗಾಯಾಳುಗಳೊಂದಿಗೆ ಚರ್ಚಿಸಿದರು.</p>.<p><strong>ತ್ವರಿತ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹ</strong></p>.<p>‘ಕಾರು ಸ್ಫೋಟವು ದುಃಖಕರ ಸಂಗತಿ. ಪ್ರಕರಣದ ಸಮಗ್ರ ಹಾಗೂ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.</p>.<p>‘ದೆಹಲಿ ಸರ್ಕಾರದ ಭದ್ರತಾ ವೈಫಲ್ಯವನ್ನು ಈ ಘಟನೆಯು ಎತ್ತಿ ತೋರಿಸುತ್ತದೆ. ಗೃಹ ಸಚಿವಾಲಯ ಹೇಳಿಕೊಳ್ಳುವಂತೆ ದೆಹಲಿಯು ಸುರಕ್ಷಿತ ರಾಜಧಾನಿ ಆಗಿದೆಯೇ’ ಎಂದು ಪ್ರಶ್ನಿಸಿದೆ.</p>.<p>‘ಇಂತಹ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಗ್ಗಟ್ಟಾಗಿ ನಿಲ್ಲಬೇಕು’ ಎಂದು ಹೇಳಿದೆ. </p>.<p>‘ನಾವು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇವೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇವೆ’ ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>