<p><strong>ನವದೆಹಲಿ:</strong> ದೆಹಲಿ ಪೊಲೀಸ್ ವಿಶೇಷ ಕಾರ್ಯ ಪಡೆ ಅಧಿಕಾರಿಗಳು ₹6 ಕೋಟಿ ಮೌಲ್ಯದ 10 ಟನ್ ರಕ್ತಚಂದನವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಹೈದರಾಬಾದ್ನ ಇರ್ಫಾನ್, ಮುಂಬೈನ ಠಾಣೆಯ ಅಮಿತ್ ಸಂಪತ್ ಪವಾರ್ ಬಂಧಿತರು. ಆರೋಪಿಗಳು ಚೀನಾ ಸೇರಿದಂತೆ ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ದೆಹಲಿ ಮೂಲಕ ರಕ್ತಚಂದನವನ್ನು ಅಕ್ರಮ ಸಾಗಣೆ ಮಾಡಲು ಮುಂದಾಗಿದ್ದರು ಎಂದು ಡಿಸಿಪಿ (ಆಗ್ನೇಯ) ಹೇಮಂತ್ ತಿವಾರಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಆಂಧ್ರಪ್ರದೇಶದ ತಿರುಪತಿಯಲ್ಲಿ ರಕ್ತಚಂದನದ ತುಂಡುಗಳ ಕಳವು ಸಂಬಂಧ ಆಗಸ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. ಕೆಲ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದರು. ರಕ್ತಚಂದನದ ತುಂಡುಗಳನ್ನು ದೆಹಲಿಯ ತುಘಲಕಾಬಾದ್ನ ಗೋದಾಮಿನಲ್ಲಿ ಇಟ್ಟಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದರು. ಈ ಮಾಹಿತಿ ಆಧರಿಸಿ, ಆಂಧ್ರಪ್ರದೇಶ ಗುಪ್ತಚರ ಅಧಿಕಾರಿಗಳ ಜತೆಗೂಡಿ ಗೋದಾಮಿನ ಮೇಲೆ ದಾಳಿ ನಡೆಸಿ, ಸುಮಾರು 9,500 ಕೆ.ಜಿ. ರಕ್ತಚಂದನವನ್ನು ವಶಪಡಿಸಿಕೊಳ್ಳಲಾಯಿತು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಪೊಲೀಸ್ ವಿಶೇಷ ಕಾರ್ಯ ಪಡೆ ಅಧಿಕಾರಿಗಳು ₹6 ಕೋಟಿ ಮೌಲ್ಯದ 10 ಟನ್ ರಕ್ತಚಂದನವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಹೈದರಾಬಾದ್ನ ಇರ್ಫಾನ್, ಮುಂಬೈನ ಠಾಣೆಯ ಅಮಿತ್ ಸಂಪತ್ ಪವಾರ್ ಬಂಧಿತರು. ಆರೋಪಿಗಳು ಚೀನಾ ಸೇರಿದಂತೆ ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ದೆಹಲಿ ಮೂಲಕ ರಕ್ತಚಂದನವನ್ನು ಅಕ್ರಮ ಸಾಗಣೆ ಮಾಡಲು ಮುಂದಾಗಿದ್ದರು ಎಂದು ಡಿಸಿಪಿ (ಆಗ್ನೇಯ) ಹೇಮಂತ್ ತಿವಾರಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಆಂಧ್ರಪ್ರದೇಶದ ತಿರುಪತಿಯಲ್ಲಿ ರಕ್ತಚಂದನದ ತುಂಡುಗಳ ಕಳವು ಸಂಬಂಧ ಆಗಸ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. ಕೆಲ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದರು. ರಕ್ತಚಂದನದ ತುಂಡುಗಳನ್ನು ದೆಹಲಿಯ ತುಘಲಕಾಬಾದ್ನ ಗೋದಾಮಿನಲ್ಲಿ ಇಟ್ಟಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದರು. ಈ ಮಾಹಿತಿ ಆಧರಿಸಿ, ಆಂಧ್ರಪ್ರದೇಶ ಗುಪ್ತಚರ ಅಧಿಕಾರಿಗಳ ಜತೆಗೂಡಿ ಗೋದಾಮಿನ ಮೇಲೆ ದಾಳಿ ನಡೆಸಿ, ಸುಮಾರು 9,500 ಕೆ.ಜಿ. ರಕ್ತಚಂದನವನ್ನು ವಶಪಡಿಸಿಕೊಳ್ಳಲಾಯಿತು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>