<p><strong>ನವದೆಹಲಿ</strong>: ಯಮುನಾ ನದಿ ನೀರಿಗೆ ಹರಿಯಾಣದ ಬಿಜೆಪಿ ಸರ್ಕಾರ ಅಮೋನಿಯಾ ಬೆರೆಸಿದೆ ಎಂದು ಆರೋಪ ಮಾಡಿದ್ದಕ್ಕೆ ಚುನಾವಣಾ ಆಯೋಗ ಜಾರಿ ಮಾಡಿದ್ದ ಎರಡನೇ ನೋಟಿಸ್ಗೆ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಶುಕ್ರವಾರ ಉತ್ತರ ನೀಡಿದರು.</p>.<p>ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಜತೆಗೆ ಕೇಜ್ರಿವಾಲ್ ಅವರು ಚುನಾವಣಾ ಆಯೋಗದ ಕಚೇರಿಗೆ ಖುದ್ದು ಭೇಟಿ ನೀಡಿ, ಉತ್ತರ ಸಲ್ಲಿಸಿದರು.</p>.<p class="title">ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಲ್ಲಿಸಿರುವ ಆರು ಪುಟಗಳ ಉತ್ತರದಲ್ಲಿ, ‘ದೆಹಲಿಗೆ ಪೂರೈಕೆಯಾಗುತ್ತಿರುವ ಸಂಸ್ಕರಿಸದ ಯಮುನಾ ನದಿ ನೀರಿನಲ್ಲಿ ಅಮೋನಿಯಾ ಮಟ್ಟ ಅತೀ ಹೆಚ್ಚಿನ ಪ್ರಮಾಣದಲ್ಲಿರುವುದನ್ನು ಗಮನಿಸಿ ಈ ಹೇಳಿಕೆ ನೀಡಿದ್ದೇನೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ರಾಷ್ಟ್ರ ರಾಜಧಾನಿಗೆ ಅತೀ ಹೆಚ್ಚು ಮಲೀನಗೊಂಡಿರುವ ನೀರನ್ನು ಹರಿಸುವ ಮೂಲಕ ದೆಹಲಿ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಪಿತೂರಿ ನಡೆಸಿದ್ದಾರೆ’ ಎಂದು ಕೇಜ್ರಿವಾಲ್ ಆರೋಪಿಸಿದರು.</p>.<p class="title">‘ಇದರಲ್ಲಿ ಹರಿಯಾಣ ಮುಖ್ಯಮಂತ್ರಿ ತಪ್ಪೆಸಗಿದ್ದಾರೆ. ರಾಜಧಾನಿಯ ಜನರಿಗೆ ಸಂಕಷ್ಟ ತರಲು ಯತ್ನಿಸಿದ್ದಕ್ಕಾಗಿ ಸೈನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಂತಹ ದುಷ್ಕೃತ್ಯ ಎಸಗಿರುವ ಹರಿಯಾಣ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ. </p>.<p>ಅಮೋನಿಯಾ ಬೆರಕೆಯಾಗಿರುವ ನೀರನ್ನು ಮೂರು ಬಾಟಲಿಗಳಲ್ಲಿ ತುಂಬಿಕೊಂಡು ತಂದಿದ್ದ ಕೇಜ್ರಿವಾಲ್ ಅವರು, ಈ ನೀರನ್ನು ತಮ್ಮ ಮನೆಗೆ ಕೊಂಡೊಯ್ದು ಪರಿಶೀಲಿಸುವಂತೆ ಮನವಿ ಮಾಡಿದರು. </p>.<p class="title">ಮೊದಲ ನೋಟಿಸ್ಗೆ ಕೇಜ್ರಿವಾಲ್ ಅವರು ನೀಡಿದ್ದ ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದ ಆಯೋಗವು, ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳನ್ನು ಶುಕ್ರವಾರದೊಳಗೆ ಒದಗಿಸದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಎರಡನೇ ನೋಟಿಸ್ ಜಾರಿ ಮಾಡಿತ್ತು.</p>.ಯಮುನಾ ನದಿಗೆ ವಿಷ: ಚು.ಆಯೋಗಕ್ಕೆ ಭೇಟಿ ನೀಡಿ ಉತ್ತರ ನೀಡಲಿರುವ ಕೇಜ್ರಿವಾಲ್.‘ಯಮುನಾ ನದಿಗೆ ವಿಷ’: ಕೇಜ್ರಿವಾಲ್ರಿಂದ ದಾಖಲೆ ಕೇಳಿದ ಇ.ಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಯಮುನಾ ನದಿ ನೀರಿಗೆ ಹರಿಯಾಣದ ಬಿಜೆಪಿ ಸರ್ಕಾರ ಅಮೋನಿಯಾ ಬೆರೆಸಿದೆ ಎಂದು ಆರೋಪ ಮಾಡಿದ್ದಕ್ಕೆ ಚುನಾವಣಾ ಆಯೋಗ ಜಾರಿ ಮಾಡಿದ್ದ ಎರಡನೇ ನೋಟಿಸ್ಗೆ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಶುಕ್ರವಾರ ಉತ್ತರ ನೀಡಿದರು.</p>.<p>ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಜತೆಗೆ ಕೇಜ್ರಿವಾಲ್ ಅವರು ಚುನಾವಣಾ ಆಯೋಗದ ಕಚೇರಿಗೆ ಖುದ್ದು ಭೇಟಿ ನೀಡಿ, ಉತ್ತರ ಸಲ್ಲಿಸಿದರು.</p>.<p class="title">ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಲ್ಲಿಸಿರುವ ಆರು ಪುಟಗಳ ಉತ್ತರದಲ್ಲಿ, ‘ದೆಹಲಿಗೆ ಪೂರೈಕೆಯಾಗುತ್ತಿರುವ ಸಂಸ್ಕರಿಸದ ಯಮುನಾ ನದಿ ನೀರಿನಲ್ಲಿ ಅಮೋನಿಯಾ ಮಟ್ಟ ಅತೀ ಹೆಚ್ಚಿನ ಪ್ರಮಾಣದಲ್ಲಿರುವುದನ್ನು ಗಮನಿಸಿ ಈ ಹೇಳಿಕೆ ನೀಡಿದ್ದೇನೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ರಾಷ್ಟ್ರ ರಾಜಧಾನಿಗೆ ಅತೀ ಹೆಚ್ಚು ಮಲೀನಗೊಂಡಿರುವ ನೀರನ್ನು ಹರಿಸುವ ಮೂಲಕ ದೆಹಲಿ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುವ ಪಿತೂರಿ ನಡೆಸಿದ್ದಾರೆ’ ಎಂದು ಕೇಜ್ರಿವಾಲ್ ಆರೋಪಿಸಿದರು.</p>.<p class="title">‘ಇದರಲ್ಲಿ ಹರಿಯಾಣ ಮುಖ್ಯಮಂತ್ರಿ ತಪ್ಪೆಸಗಿದ್ದಾರೆ. ರಾಜಧಾನಿಯ ಜನರಿಗೆ ಸಂಕಷ್ಟ ತರಲು ಯತ್ನಿಸಿದ್ದಕ್ಕಾಗಿ ಸೈನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಂತಹ ದುಷ್ಕೃತ್ಯ ಎಸಗಿರುವ ಹರಿಯಾಣ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ. </p>.<p>ಅಮೋನಿಯಾ ಬೆರಕೆಯಾಗಿರುವ ನೀರನ್ನು ಮೂರು ಬಾಟಲಿಗಳಲ್ಲಿ ತುಂಬಿಕೊಂಡು ತಂದಿದ್ದ ಕೇಜ್ರಿವಾಲ್ ಅವರು, ಈ ನೀರನ್ನು ತಮ್ಮ ಮನೆಗೆ ಕೊಂಡೊಯ್ದು ಪರಿಶೀಲಿಸುವಂತೆ ಮನವಿ ಮಾಡಿದರು. </p>.<p class="title">ಮೊದಲ ನೋಟಿಸ್ಗೆ ಕೇಜ್ರಿವಾಲ್ ಅವರು ನೀಡಿದ್ದ ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದ ಆಯೋಗವು, ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳನ್ನು ಶುಕ್ರವಾರದೊಳಗೆ ಒದಗಿಸದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಎರಡನೇ ನೋಟಿಸ್ ಜಾರಿ ಮಾಡಿತ್ತು.</p>.ಯಮುನಾ ನದಿಗೆ ವಿಷ: ಚು.ಆಯೋಗಕ್ಕೆ ಭೇಟಿ ನೀಡಿ ಉತ್ತರ ನೀಡಲಿರುವ ಕೇಜ್ರಿವಾಲ್.‘ಯಮುನಾ ನದಿಗೆ ವಿಷ’: ಕೇಜ್ರಿವಾಲ್ರಿಂದ ದಾಖಲೆ ಕೇಳಿದ ಇ.ಸಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>