<p>ಹೈದರಾಬಾದ್ (ಪಿಟಿಐ): ಬಿಆರ್ಎಸ್ ಪಕ್ಷದ ಇಬ್ಬರು ಮುಖಂಡರನ್ನು ತೆಲಂಗಾಣದ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟ ಮಾಡಿದ್ದ ಶಿಫಾರಸನ್ನು ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ತಿರಸ್ಕರಿಸಿದ್ದಾರೆ.</p>.<p>ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ ಹಿಂದುಳಿದ ವರ್ಗಗಳನ್ನು ವಿರೋಧಿಸುವ ಪಕ್ಷ’ ಎಂದು ಟೀಕಿಸಿದ್ದಾರೆ.</p>.<p>ಆಡಳಿತಾರೂಢ ಪಕ್ಷದ ನಾಯಕ ಶ್ರವಣ್ ದಾಸೋಜು ಹಾಗೂ ಮಾಜಿ ಶಾಸಕ ಕುರ್ರಾ ಸತ್ಯನಾರಾಯಣ ಅವರನ್ನು ರಾಜ್ಯಪಾಲರ ಕೋಟಾದಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟವು ತಮಿಳಿಸೈ ಸೌಂದರರಾಜನ್ ಅವರಿಗೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯಪಾಲರು ಇದನ್ನು ತಿರಸ್ಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.</p>.<p>‘ದೇಶದಲ್ಲಿ ಭಾರತದ ಸಂವಿಧಾನವಿದೆಯೋ? ಅಥವಾ ಭಾರತೀಯ ಜನತಾ ಪಕ್ಷದ ಸಂವಿಧಾನವಿದೆಯೋ? ಎಂಬ ಅನುಮಾನ ಕಾಡುತ್ತಿದೆ. ಬಹುತೇಕ ರಾಜ್ಯಗಳಲ್ಲಿನ ರಾಜ್ಯಪಾಲರ ನಡವಳಿಕೆ ಇದೇ ರೀತಿ ಇದೆ. ಜನರು ಇದನ್ನು ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>Cut-off box - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್ (ಪಿಟಿಐ): ಬಿಆರ್ಎಸ್ ಪಕ್ಷದ ಇಬ್ಬರು ಮುಖಂಡರನ್ನು ತೆಲಂಗಾಣದ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟ ಮಾಡಿದ್ದ ಶಿಫಾರಸನ್ನು ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ತಿರಸ್ಕರಿಸಿದ್ದಾರೆ.</p>.<p>ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ ಹಿಂದುಳಿದ ವರ್ಗಗಳನ್ನು ವಿರೋಧಿಸುವ ಪಕ್ಷ’ ಎಂದು ಟೀಕಿಸಿದ್ದಾರೆ.</p>.<p>ಆಡಳಿತಾರೂಢ ಪಕ್ಷದ ನಾಯಕ ಶ್ರವಣ್ ದಾಸೋಜು ಹಾಗೂ ಮಾಜಿ ಶಾಸಕ ಕುರ್ರಾ ಸತ್ಯನಾರಾಯಣ ಅವರನ್ನು ರಾಜ್ಯಪಾಲರ ಕೋಟಾದಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಸಚಿವ ಸಂಪುಟವು ತಮಿಳಿಸೈ ಸೌಂದರರಾಜನ್ ಅವರಿಗೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯಪಾಲರು ಇದನ್ನು ತಿರಸ್ಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.</p>.<p>‘ದೇಶದಲ್ಲಿ ಭಾರತದ ಸಂವಿಧಾನವಿದೆಯೋ? ಅಥವಾ ಭಾರತೀಯ ಜನತಾ ಪಕ್ಷದ ಸಂವಿಧಾನವಿದೆಯೋ? ಎಂಬ ಅನುಮಾನ ಕಾಡುತ್ತಿದೆ. ಬಹುತೇಕ ರಾಜ್ಯಗಳಲ್ಲಿನ ರಾಜ್ಯಪಾಲರ ನಡವಳಿಕೆ ಇದೇ ರೀತಿ ಇದೆ. ಜನರು ಇದನ್ನು ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>Cut-off box - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>