<p><strong>ಲಖನೌ:</strong> ಮದ್ಯ ಸೇವಿಸಲು ನೀರು ತರಲು ನಿರಾಕರಿಸಿದ ಒಂಬತ್ತು ವರ್ಷದ ಬಾಲಕನನ್ನ ಸಂಬಂಧಿಕನೊಬ್ಬ ಗುಂಡಿಕ್ಕಿ ಕೊಂದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯಲ್ಲಿ ನಡೆದಿದೆ.</p><p>ಯಾಕುತ್ಗಂಜ್ ಗ್ರಾಮದಲ್ಲಿ ಶುಕ್ರವಾರ (ಮೇ.1) ನಡೆದ ನಾಮಕರಣ ಶಾಸ್ತ್ರದ ವೇಳೆ ಈ ಘಟನೆ ಸಂಭವಿಸಿದೆ. ಮೃತ ಬಾಲಕನನ್ನು ಯಶ್ಪಾಲ್ ಅಲಿಯಾಸ್ ಯಶ್ (9) ಎಂದು ಗುರುತಿಸಲಾಗಿದೆ.</p><p><strong>ಅಸಲಿಗೆ ನಡೆದದ್ದೇನು? </strong></p><p>‘ಬಾಲಕನ ತಂದೆ ಜಸ್ವೀರ್ ಗೋಲಾ ಅವರ ಸಂಬಂಧಿ ಧನೇಶ್ ಯಾದವ್ ಎಂಬಾತ ನಾಮಕರಣ ಸಮಾರಂಭದ ವೇಳೆ ಮದ್ಯ ಸೇವಿಸುತ್ತಿದ್ದ. ಈ ವೇಳೆ ಯಶ್ಪಾಲ್ಗೆ ನೀರು ತರುವಂತೆ ಪೀಡಿಸಿದ್ದಾನೆ. ಬಾಲಕ ನೀರು ತರಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಧನೇಶ್, ಮದ್ಯದ ಅಮಲಿನಲ್ಲಿ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಬಾಲಕನ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಕಾಸಗಂಜ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲಿಗಢಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.</p><p>‘ಘಟನೆ ನಡೆದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಖಿತೌಲಿ ಕಾಲುವೆ ಸೇತುವೆಯ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಎಸ್ಎಚ್ಒ ಗೋವಿಂದ್ ಬಲ್ಲಭ್ ಶರ್ಮಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮದ್ಯ ಸೇವಿಸಲು ನೀರು ತರಲು ನಿರಾಕರಿಸಿದ ಒಂಬತ್ತು ವರ್ಷದ ಬಾಲಕನನ್ನ ಸಂಬಂಧಿಕನೊಬ್ಬ ಗುಂಡಿಕ್ಕಿ ಕೊಂದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯಲ್ಲಿ ನಡೆದಿದೆ.</p><p>ಯಾಕುತ್ಗಂಜ್ ಗ್ರಾಮದಲ್ಲಿ ಶುಕ್ರವಾರ (ಮೇ.1) ನಡೆದ ನಾಮಕರಣ ಶಾಸ್ತ್ರದ ವೇಳೆ ಈ ಘಟನೆ ಸಂಭವಿಸಿದೆ. ಮೃತ ಬಾಲಕನನ್ನು ಯಶ್ಪಾಲ್ ಅಲಿಯಾಸ್ ಯಶ್ (9) ಎಂದು ಗುರುತಿಸಲಾಗಿದೆ.</p><p><strong>ಅಸಲಿಗೆ ನಡೆದದ್ದೇನು? </strong></p><p>‘ಬಾಲಕನ ತಂದೆ ಜಸ್ವೀರ್ ಗೋಲಾ ಅವರ ಸಂಬಂಧಿ ಧನೇಶ್ ಯಾದವ್ ಎಂಬಾತ ನಾಮಕರಣ ಸಮಾರಂಭದ ವೇಳೆ ಮದ್ಯ ಸೇವಿಸುತ್ತಿದ್ದ. ಈ ವೇಳೆ ಯಶ್ಪಾಲ್ಗೆ ನೀರು ತರುವಂತೆ ಪೀಡಿಸಿದ್ದಾನೆ. ಬಾಲಕ ನೀರು ತರಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಧನೇಶ್, ಮದ್ಯದ ಅಮಲಿನಲ್ಲಿ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಬಾಲಕನ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಕಾಸಗಂಜ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲಿಗಢಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.</p><p>‘ಘಟನೆ ನಡೆದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಖಿತೌಲಿ ಕಾಲುವೆ ಸೇತುವೆಯ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಎಸ್ಎಚ್ಒ ಗೋವಿಂದ್ ಬಲ್ಲಭ್ ಶರ್ಮಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>