<p><strong>ಚೆನ್ನೈ:</strong> ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ನ ನಿರ್ಧಾರವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸ್ವಾಗತಿಸಿದ್ದಾರೆ.</p>.<p>‘ಆರು ಜನ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ನ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‘ ಎಂದು ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಅವರು ಬಣ್ಣಿಸಿದ್ದಾರೆ.</p>.<p>‘ವಿರೋಧ ಪಕ್ಷದಲ್ಲಿ ಇದ್ದಾಗಲೂ, ಅಧಿಕಾರದಲ್ಲಿ ಇದ್ದಾಗಲೂ ಡಿಎಂಕೆ ಸರ್ಕಾರ ಇವರ ಬಿಡುಗಡೆಗೆ ಧ್ವನಿ ಎತ್ತಿದೆ‘ ಎಂದು ಅವರು ಹೇಳಿದ್ದಾರೆ.</p>.<p>‘ಸರ್ಕಾರ ಹಾಗೂ ಜನರ ನಿರ್ಧಾರವನ್ನು ನೇಮಕಗೊಂಡ ಗವರ್ನರ್ ನಿರುಪಯುಕ್ತಗೊಳಿಸುವಂತಿಲ್ಲ ಎನ್ನುವುದಕ್ಕೆ ಈ ತೀರ್ಪು ಉದಾಹರಣೆ‘ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<p>ರಾಜೀವ್ ಗಾಂಧಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ನಳಿನಿ ಶ್ರೀಹರನ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿ ತೀರ್ಪು ನೀಡಿದೆ.</p>.<p>1991ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿಯವರ ಹತ್ಯೆಯಾಗಿತ್ತು. ಎಲ್ಟಿಟಿಇ ಉಗ್ರ ಸಂಘಟನೆಗೆ ಸೇರಿದ್ದ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಕೊಲೆ ಮಾಡಿದ್ದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ನ ನಿರ್ಧಾರವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸ್ವಾಗತಿಸಿದ್ದಾರೆ.</p>.<p>‘ಆರು ಜನ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್ನ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ‘ ಎಂದು ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಅವರು ಬಣ್ಣಿಸಿದ್ದಾರೆ.</p>.<p>‘ವಿರೋಧ ಪಕ್ಷದಲ್ಲಿ ಇದ್ದಾಗಲೂ, ಅಧಿಕಾರದಲ್ಲಿ ಇದ್ದಾಗಲೂ ಡಿಎಂಕೆ ಸರ್ಕಾರ ಇವರ ಬಿಡುಗಡೆಗೆ ಧ್ವನಿ ಎತ್ತಿದೆ‘ ಎಂದು ಅವರು ಹೇಳಿದ್ದಾರೆ.</p>.<p>‘ಸರ್ಕಾರ ಹಾಗೂ ಜನರ ನಿರ್ಧಾರವನ್ನು ನೇಮಕಗೊಂಡ ಗವರ್ನರ್ ನಿರುಪಯುಕ್ತಗೊಳಿಸುವಂತಿಲ್ಲ ಎನ್ನುವುದಕ್ಕೆ ಈ ತೀರ್ಪು ಉದಾಹರಣೆ‘ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<p>ರಾಜೀವ್ ಗಾಂಧಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ನಳಿನಿ ಶ್ರೀಹರನ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿ ತೀರ್ಪು ನೀಡಿದೆ.</p>.<p>1991ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿಯವರ ಹತ್ಯೆಯಾಗಿತ್ತು. ಎಲ್ಟಿಟಿಇ ಉಗ್ರ ಸಂಘಟನೆಗೆ ಸೇರಿದ್ದ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಕೊಲೆ ಮಾಡಿದ್ದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>