ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಲಿತರು, ಬುಡಕಟ್ಟು ಜನಾಂಗ, ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಅತಿಕ್ರಮಿಸಲು ನಾವು ಅವಕಾಶ ನೀಡುವುದಿಲ್ಲ. ಜೂನ್ 4ರಂದು ಪ್ರತಿಪಕ್ಷಗಳ ಸ್ಥಿತಿ ಏನಾಗುತ್ತದೆ ಎಂಬುವುದನ್ನು ನೀವು ನೋಡುತ್ತೀರಿ’ ಎಂದು ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ವಿರೋಧ ಪಕ್ಷಗಳು ಮುಂದಾಗಿವೆ ಎಂದು ಆರೋಪಿಸಿದ ಅವರು, ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ ಎಂದು ಹೇಳಿದ್ದಾರೆ.
ಹಿಂದಿನಿಂದಲೂ ರಾಜಕೀಯ ಎಂದರೆ ಒಡೆದು ಆಳುವುದು ಎಂಬರ್ಥವಿದೆ. ಆದರೆ, ಈಗ ಅಭಿವೃದ್ಧಿಯ ರಾಜಕೀಯ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಕಳೆದ 10 ವರ್ಷಗಳಲ್ಲಿ ದೇಶದ ಅಭಿವೃದ್ಧಿಯ ಬಗ್ಗೆ ಜನರಲ್ಲಿ ನಂಬಿಕೆ ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಜೆ.ಪಿ ನಡ್ಡಾ, ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಕಣಕ್ಕಿಳಿದಿರುವ ಪ್ರಧಾನಿ ಮೋದಿ ಅವರ ಪರ ಮತಯಾಚಿಸಿದರು.
ಜೂನ್ 1ರಂದು ಏಳನೇ ಮತ್ತು ಕೊನೆಯ ಹಂತದಲ್ಲಿ ವಾರಾಣಸಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.