<p><strong>ಲಖನೌ</strong>: ಸಮಾಜದಲ್ಲಿನ ದುರ್ಬಲ ಮತ್ತು ಬಡ ಜನರಿಗೆ ಹಣದ ಆಮಿಷವೊಡ್ಡಿ, ಮತಾಂತರ ದಂಧೆ ನಡೆಸುತ್ತಿರುವ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ. </p><p>ಮತಾಂತರ ಕಾರ್ಯಕ್ಕಾಗಿ ಈ ದಂಧೆಯಲ್ಲಿ ತೊಡಗಿರುವವರಿಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಇ.ಡಿ ಉಲ್ಲೇಖಿಸಿದೆ.</p><p>ಜಾರಿ ನಿರ್ದೇಶನಾಲಯದ ಲಖನೌ ಘಟಕವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮಂಗಳವಾರ ಸಂಜೆ ಪ್ರಕರಣ ದಾಖಲು ಮಾಡಿದೆ.</p><p>ಮತಾಂತರ ದಂಧೆಯ ಸೂತ್ರಧಾರ ಜಮಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನ ಅಕ್ರಮ ಚಟುವಟಿಕೆಗಳು ಮತ್ತು ವಿದೇಶದಿಂದ ವರ್ಗಾವಣೆಯಾಗಿರುವ ಹಣಕಾಸಿನ ಕುರಿತು ಇ.ಡಿ ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. </p><p>ಮತಾಂತರ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಈಗಾಗಲೇ ಬಂಧಿಸಿದೆ. ದೇಶದಲ್ಲಿ ಈ ಕಾರ್ಯಕ್ಕಾಗಿ ವಿದೇಶಗಳಿಂದ ₹100 ಕೋಟಿಗೂ ಹೆಚ್ಚು ಹಣಕಾಸು ಪಡೆದಿರುವ ಆರೋಪ ಅವರ ಮೇಲಿದೆ ಎಂದು ಮೂಲಗಳು ತಿಳಿಸಿವೆ. </p><p>ಚಂಗೂರ್ ಬಾಬಾ ಅವರನ್ನು ಶೀಘ್ರದಲ್ಲಿಯೇ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದೂ ಮೂಲಗಳು ಹೇಳಿವೆ. </p><p>ಈ ಜಾಲದಲ್ಲಿ 18 ಜನರು ಸಕ್ರಿಯವಾಗಿದ್ದು, ಆ ಪೈಕಿ ನಾಲ್ವರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಶೋಧ ನಡೆಯುತ್ತಿದೆ. ಈ ಜಾಲವು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಎಟಿಎಸ್ ಮೂಲಗಳು ತಿಳಿಸಿವೆ. </p><p>ಜಲಾಲುದ್ದೀನ್ ಅವರ ಗುಂಪು ಸಮಾಜ ವಿರೋಧಿ ಅಷ್ಟೇ ಅಲ್ಲ ರಾಷ್ಟ್ರ ವಿರೋಧಿಯೂ ಆಗಿದೆ. ಈ ಜಾಲದಲ್ಲಿ ಇರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಂಗಳವಾರ ಹೇಳಿದ್ದರು. ಇದರ ಬೆನ್ನಲ್ಲೇ ಬಲರಾಂಪುರದ ಉತ್ರೌಲಾದಲ್ಲಿರುವ ಜಲಾಲುದ್ದೀನ್ ಅವರ ಮನೆಯನ್ನು ಜಿಲ್ಲಾಡಳಿತ ಬುಲ್ಡೋಜರ್ಗಳನ್ನು ಬಳಸಿ ನೆಲಸಮಗೊಳಿಸಿತ್ತು. </p>.<p><strong>ಚಂಗೂರ್ ಬಾಬಾ ಪ್ರಕರಣ: ಒತ್ತುವರಿ ತೆರವು </strong></p><p><strong>ಬಾಲರಾಂಪುರ/ಯುಪಿ</strong>: ಅಕ್ರಮ ಮತಾಂತರ ದಂಧೆಯ ಸೂತ್ರಧಾರ ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾ, ಇಲ್ಲಿನ ಮಧ್ಯಾಪುರ ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನನ್ನು ಬಾಲರಾಂಪುರ ಜಿಲ್ಲಾಡಳಿತ ಬುಧವಾರ ತೆರವುಗೊಳಿಸಿದೆ. </p><p>‘ಸರ್ಕಾರಿ ಜಮೀನಿನಲ್ಲಿ ಚಂಗೂರ್ ಬಾಬಾ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಕಟ್ಟಡಗಳನ್ನು 8 ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದ್ದು, ಒತ್ತುವರಿ ತೆರವು ಮಾಡಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಪಾಂಡೆ ತಿಳಿಸಿದ್ದಾರೆ. </p><p>‘ಜಲಾಲುದ್ದೀನ್ ಕೃತ್ಯಗಳು ಸಮಾಜ ವಿರೋಧಿ ಮಾತ್ರವಲ್ಲ, ಅವು ದೇಶ ವಿರೋಧಿಯೂ ಆಗಿವೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. </p><p>ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಜುಲೈ 5ರಂದು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಸಮಾಜದಲ್ಲಿನ ದುರ್ಬಲ ಮತ್ತು ಬಡ ಜನರಿಗೆ ಹಣದ ಆಮಿಷವೊಡ್ಡಿ, ಮತಾಂತರ ದಂಧೆ ನಡೆಸುತ್ತಿರುವ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ. </p><p>ಮತಾಂತರ ಕಾರ್ಯಕ್ಕಾಗಿ ಈ ದಂಧೆಯಲ್ಲಿ ತೊಡಗಿರುವವರಿಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಇ.ಡಿ ಉಲ್ಲೇಖಿಸಿದೆ.</p><p>ಜಾರಿ ನಿರ್ದೇಶನಾಲಯದ ಲಖನೌ ಘಟಕವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮಂಗಳವಾರ ಸಂಜೆ ಪ್ರಕರಣ ದಾಖಲು ಮಾಡಿದೆ.</p><p>ಮತಾಂತರ ದಂಧೆಯ ಸೂತ್ರಧಾರ ಜಮಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನ ಅಕ್ರಮ ಚಟುವಟಿಕೆಗಳು ಮತ್ತು ವಿದೇಶದಿಂದ ವರ್ಗಾವಣೆಯಾಗಿರುವ ಹಣಕಾಸಿನ ಕುರಿತು ಇ.ಡಿ ತನಿಖೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. </p><p>ಮತಾಂತರ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಈಗಾಗಲೇ ಬಂಧಿಸಿದೆ. ದೇಶದಲ್ಲಿ ಈ ಕಾರ್ಯಕ್ಕಾಗಿ ವಿದೇಶಗಳಿಂದ ₹100 ಕೋಟಿಗೂ ಹೆಚ್ಚು ಹಣಕಾಸು ಪಡೆದಿರುವ ಆರೋಪ ಅವರ ಮೇಲಿದೆ ಎಂದು ಮೂಲಗಳು ತಿಳಿಸಿವೆ. </p><p>ಚಂಗೂರ್ ಬಾಬಾ ಅವರನ್ನು ಶೀಘ್ರದಲ್ಲಿಯೇ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದೂ ಮೂಲಗಳು ಹೇಳಿವೆ. </p><p>ಈ ಜಾಲದಲ್ಲಿ 18 ಜನರು ಸಕ್ರಿಯವಾಗಿದ್ದು, ಆ ಪೈಕಿ ನಾಲ್ವರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಶೋಧ ನಡೆಯುತ್ತಿದೆ. ಈ ಜಾಲವು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಎಟಿಎಸ್ ಮೂಲಗಳು ತಿಳಿಸಿವೆ. </p><p>ಜಲಾಲುದ್ದೀನ್ ಅವರ ಗುಂಪು ಸಮಾಜ ವಿರೋಧಿ ಅಷ್ಟೇ ಅಲ್ಲ ರಾಷ್ಟ್ರ ವಿರೋಧಿಯೂ ಆಗಿದೆ. ಈ ಜಾಲದಲ್ಲಿ ಇರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಂಗಳವಾರ ಹೇಳಿದ್ದರು. ಇದರ ಬೆನ್ನಲ್ಲೇ ಬಲರಾಂಪುರದ ಉತ್ರೌಲಾದಲ್ಲಿರುವ ಜಲಾಲುದ್ದೀನ್ ಅವರ ಮನೆಯನ್ನು ಜಿಲ್ಲಾಡಳಿತ ಬುಲ್ಡೋಜರ್ಗಳನ್ನು ಬಳಸಿ ನೆಲಸಮಗೊಳಿಸಿತ್ತು. </p>.<p><strong>ಚಂಗೂರ್ ಬಾಬಾ ಪ್ರಕರಣ: ಒತ್ತುವರಿ ತೆರವು </strong></p><p><strong>ಬಾಲರಾಂಪುರ/ಯುಪಿ</strong>: ಅಕ್ರಮ ಮತಾಂತರ ದಂಧೆಯ ಸೂತ್ರಧಾರ ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾ, ಇಲ್ಲಿನ ಮಧ್ಯಾಪುರ ಗ್ರಾಮದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನನ್ನು ಬಾಲರಾಂಪುರ ಜಿಲ್ಲಾಡಳಿತ ಬುಧವಾರ ತೆರವುಗೊಳಿಸಿದೆ. </p><p>‘ಸರ್ಕಾರಿ ಜಮೀನಿನಲ್ಲಿ ಚಂಗೂರ್ ಬಾಬಾ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಕಟ್ಟಡಗಳನ್ನು 8 ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದ್ದು, ಒತ್ತುವರಿ ತೆರವು ಮಾಡಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಪಾಂಡೆ ತಿಳಿಸಿದ್ದಾರೆ. </p><p>‘ಜಲಾಲುದ್ದೀನ್ ಕೃತ್ಯಗಳು ಸಮಾಜ ವಿರೋಧಿ ಮಾತ್ರವಲ್ಲ, ಅವು ದೇಶ ವಿರೋಧಿಯೂ ಆಗಿವೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. </p><p>ಜಲಾಲುದ್ದೀನ್ ಅಲಿಯಾಸ್ ಚಂಗೂರ್ ಬಾಬಾನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಜುಲೈ 5ರಂದು ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>