ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿ ಸ್ಥಳದಲ್ಲಿ ನಡೆಸಿದ ಉತ್ಖನನದ ಸಮಯದಲ್ಲಿ ಪ್ರಾಚೀನ ದೇವಾಲಯದ ಹಲವು ಅವಶೇಷಗಳು ದೊರೆತಿವೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರೈ ಅವರು ‘ಶ್ರೀರಾಮ ಜನ್ಮಭೂಮಿಯಲ್ಲಿ ಉತ್ಖನನದ ಸಮಯದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳು ದೊರೆತಿವೆ. ಇದರಲ್ಲಿ ಅನೇಕ ಪ್ರತಿಮೆಗಳು ಮತ್ತು ಕಂಬಗಳನ್ನು ಒಳಗೊಂಡಿದೆ’ ಎಂದು ಬರೆದುಕೊಂಡಿದ್ದಾರೆ.
ಸೆ.5ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಯೋಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.