ಕಳೆದ 24 ಗಂಟೆಗಳಲ್ಲಿ ಮಿಜೋರಾಂ ಮತ್ತು ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.
ಮಿಜೋರಾಂನ ಐಜ್ವಾಲ್ ಜಿಲ್ಲೆಯ ಮೆಲ್ತುಮ್ನಲ್ಲಿ ಕಲ್ಲಿನ ಕ್ವಾರಿ ಕುಸಿದ ಪರಿಣಾಮ 15 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಸ್ಸಾಂನ ಮೋರಿಗಾಂವ್ ಮತ್ತು ಲಖಿಂಪುರದಲ್ಲಿ 17 ವರ್ಷದ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಸೋನಿತ್ಪುರದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ ಮೇಲೆ ಮರ ಉರುಳಿದೆ. ಈ ವೇಳೆ ಬಸ್ನಲ್ಲಿದ್ದ 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.