<p><strong>ನವದೆಹಲಿ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p><p>2019ರ ಲೋಕಸಭಾ ಚುನಾವಣೆಗೂ ಮುನ್ನ ಜಾರ್ಖಂಡ್ನ ಚಾಯ್ಬಾಸಾದಲ್ಲಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಅವರು ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.</p><p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ರಾಹುಲ್ ಅವರ ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ಸೂಚಿಸಿ ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿತು.</p><p>‘ನೋಟಿಸ್ ಜಾರಿಗೊಳಿಸಿ. ಈ ಪ್ರಕರಣದ ವಿಚಾರಣೆಗೆ ಮುಂದಿನ ಆದೇಶದವರೆಗೂ ತಡೆ ನೀಡಲಾಗಿದೆ’ ಎಂದು ಪೀಠವು ಹೇಳಿತು.</p><p>‘ಸಂತ್ರಸ್ತ ವ್ಯಕ್ತಿ ಮಾತ್ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು ಎಂದು ಹಲವಾರು ತೀರ್ಪುಗಳು ಹೇಳಿವೆ. ಮೂರನೇ ವ್ಯಕ್ತಿಯಿಂದ ಮಾನನಷ್ಟ ಮೊಕದ್ದಮೆ ಹೂಡಲು ಸಾಧ್ಯವಿಲ್ಲ’ ಎಂದು ರಾಹುಲ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಪೀಠಕ್ಕೆ ತಿಳಿಸಿದರು.</p><p>ನವೀನ್ ಝಾ ಪರ ಹಿರಿಯ ವಕೀಲರಾದ ಮಹೇಶ್ ಜೇಠ್ಮಲಾನಿ ವಾದ ಮಂಡಿಸಿದರು.</p><p>ದೂರಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.</p>.ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p><p>2019ರ ಲೋಕಸಭಾ ಚುನಾವಣೆಗೂ ಮುನ್ನ ಜಾರ್ಖಂಡ್ನ ಚಾಯ್ಬಾಸಾದಲ್ಲಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಅವರು ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.</p><p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ರಾಹುಲ್ ಅವರ ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಂತೆ ಸೂಚಿಸಿ ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿತು.</p><p>‘ನೋಟಿಸ್ ಜಾರಿಗೊಳಿಸಿ. ಈ ಪ್ರಕರಣದ ವಿಚಾರಣೆಗೆ ಮುಂದಿನ ಆದೇಶದವರೆಗೂ ತಡೆ ನೀಡಲಾಗಿದೆ’ ಎಂದು ಪೀಠವು ಹೇಳಿತು.</p><p>‘ಸಂತ್ರಸ್ತ ವ್ಯಕ್ತಿ ಮಾತ್ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು ಎಂದು ಹಲವಾರು ತೀರ್ಪುಗಳು ಹೇಳಿವೆ. ಮೂರನೇ ವ್ಯಕ್ತಿಯಿಂದ ಮಾನನಷ್ಟ ಮೊಕದ್ದಮೆ ಹೂಡಲು ಸಾಧ್ಯವಿಲ್ಲ’ ಎಂದು ರಾಹುಲ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಪೀಠಕ್ಕೆ ತಿಳಿಸಿದರು.</p><p>ನವೀನ್ ಝಾ ಪರ ಹಿರಿಯ ವಕೀಲರಾದ ಮಹೇಶ್ ಜೇಠ್ಮಲಾನಿ ವಾದ ಮಂಡಿಸಿದರು.</p><p>ದೂರಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಕಾನೂನು ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ರಾಹುಲ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.</p>.ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>