<p><strong>ಪುಣೆ:</strong> ಛತ್ರಪತಿ ಶಿವಾಜಿ ಮಹಾರಾಜ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಪತ್ರಕರ್ತ ಪ್ರಶಾಂತ್ ಕೊರಟಕರ್ ಅವರನ್ನು ಕೊಲ್ಹಾಪುರದ ಸೆಷನ್ಸ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p> <p>ನಾಗ್ಪುರ ನಿವಾಸಿ ಕೊರಟಕರ್ ಅವರನ್ನು ಮಾರ್ಚ್ 24 ರಂದು ಬಂಧಿಸಲಾಗಿತ್ತು.</p>.<p>ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಭಾನುವಾರ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಸುರಕ್ಷತಾ ಕಾರಣಗಳಿಗಾಗಿ ಅವರನ್ನು ಕೊಲ್ಹಾಪುರದ ಕಲಂಬಾ ಜೈಲಿನಲ್ಲಿ ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<h2>ಏನಿದು ಪ್ರಕರಣ?</h2>.<p>ಕೊರಟಕರ್ ಜೊತೆಗಿನ ಸಂಭಾಷಣೆಯನ್ನು ಕೊಲ್ಹಾಪುರ ಮೂಲದ ಇತಿಹಾಸಕಾರ ಇಂದ್ರಜೀತ್ ಸಾವಂತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಸಂಭಾಷಣೆಯಯಲ್ಲಿ ಕೊರಟಕರ್ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.</p> .<p>ಗುಂಪುಗಳ ನಡುವೆ ದ್ವೇಷಭಾವನೆ ಹರಡಿದ ಆರೋಪದಡಿ ಕೊರಟಕರ್ ವಿರುದ್ಧ ಫೆ.26ರಂದು ಪ್ರಕರಣ ದಾಖಲಾಗಿತ್ತು. ಮಾರ್ಚ್ 24ರಂದು ಅವರನ್ನು ತೆಲಂಗಾಣದಲ್ಲಿ ಬಂಧಿಸಲಾಗಿತ್ತು.</p>.<p>ನನ್ನ ಸಂಭಾಷಣೆಯನ್ನು ತಿರುಚಿಲಾಗಿದೆ. ನಾನು ಈ ಬಗ್ಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದೇನೆ ಎಂದು ಕೊರಟಕರ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಕೊಲ್ಹಾಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಮಾರ್ಚ್ 18ರಂದು ವಜಾಗೊಳಿಸಿದ್ದರು.</p> .ಸಂಭಾಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪತ್ರಕರ್ತ ಕೊರಟಕರ್ ಪೊಲೀಸ್ ಕಸ್ಟಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಛತ್ರಪತಿ ಶಿವಾಜಿ ಮಹಾರಾಜ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಪತ್ರಕರ್ತ ಪ್ರಶಾಂತ್ ಕೊರಟಕರ್ ಅವರನ್ನು ಕೊಲ್ಹಾಪುರದ ಸೆಷನ್ಸ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p> <p>ನಾಗ್ಪುರ ನಿವಾಸಿ ಕೊರಟಕರ್ ಅವರನ್ನು ಮಾರ್ಚ್ 24 ರಂದು ಬಂಧಿಸಲಾಗಿತ್ತು.</p>.<p>ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಭಾನುವಾರ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಸುರಕ್ಷತಾ ಕಾರಣಗಳಿಗಾಗಿ ಅವರನ್ನು ಕೊಲ್ಹಾಪುರದ ಕಲಂಬಾ ಜೈಲಿನಲ್ಲಿ ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<h2>ಏನಿದು ಪ್ರಕರಣ?</h2>.<p>ಕೊರಟಕರ್ ಜೊತೆಗಿನ ಸಂಭಾಷಣೆಯನ್ನು ಕೊಲ್ಹಾಪುರ ಮೂಲದ ಇತಿಹಾಸಕಾರ ಇಂದ್ರಜೀತ್ ಸಾವಂತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಸಂಭಾಷಣೆಯಯಲ್ಲಿ ಕೊರಟಕರ್ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.</p> .<p>ಗುಂಪುಗಳ ನಡುವೆ ದ್ವೇಷಭಾವನೆ ಹರಡಿದ ಆರೋಪದಡಿ ಕೊರಟಕರ್ ವಿರುದ್ಧ ಫೆ.26ರಂದು ಪ್ರಕರಣ ದಾಖಲಾಗಿತ್ತು. ಮಾರ್ಚ್ 24ರಂದು ಅವರನ್ನು ತೆಲಂಗಾಣದಲ್ಲಿ ಬಂಧಿಸಲಾಗಿತ್ತು.</p>.<p>ನನ್ನ ಸಂಭಾಷಣೆಯನ್ನು ತಿರುಚಿಲಾಗಿದೆ. ನಾನು ಈ ಬಗ್ಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದೇನೆ ಎಂದು ಕೊರಟಕರ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಕೊಲ್ಹಾಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಮಾರ್ಚ್ 18ರಂದು ವಜಾಗೊಳಿಸಿದ್ದರು.</p> .ಸಂಭಾಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪತ್ರಕರ್ತ ಕೊರಟಕರ್ ಪೊಲೀಸ್ ಕಸ್ಟಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>