<p><strong>ಭೋಪಾಲ್:</strong> ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ಕುರಿತು ಅಮೆರಿಕದಲ್ಲಿ ಹೇಳಿಕೆ ನೀಡುವ ಮೂಲಕ ದೇಶವನ್ನು ಅವಮಾನಿಸಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಅವರು ವಿದೇಶಿ ನೆಲದಲ್ಲಿ ದೇಶದ ಮಾನ ಹಾಳು ಮಾಡಿದ್ದಾರೆ. ಕಳೆದ ಬಾರಿಯು ಅವರು ಹೀಗೆ ಮಾಡಿದ್ದರು. ಈ ಬಾರಿ ಅವರು ದೇಶಕ್ಕೆ ಅವಮಾನ ಮಾಡಬಾರದು, ಭಗವಾನ್ ಮಹಾಕಾಲ ಅವರಿಗೆ ಸರಿಯಾದ ಬುದ್ಧಿ ನೀಡಲಿ ಎಂದು ನಾನು ನಿನ್ನೆ ಹೇಳಿದ್ದೆ’ ಎಂದು ಅವರು ಹೇಳಿದ್ದಾರೆ.</p><p>ಬೇರೆ ಯಾವುದೇ ದೇಶದ ನಾಯಕರು ತಮ್ಮ ದೇಶದ ಕುರಿತು ವಿದೇಶಿ ನೆಲದಲ್ಲಿ ಈ ರೀತಿಯ ವಾತಾವರಣವನ್ನು ಸೃಷ್ಟಿಸುವುದಿಲ್ಲ. ಇದು ಕಾಂಗ್ರೆಸ್ನ ಗುಣವಾಗಿದೆ. ಕಾಂಗ್ರೆಸ್ ತಮ್ಮ ನಾಯಕನನ್ನು ನಿಯಂತ್ರಿಸಬೇಕಾಗಿದೆ. ನಾವು ದೇಶದ ಮಾನ ಹಾಳು ಮಾಡಬಾರದು ಮತ್ತು ಅದರ ನಾಗರಿಕರನ್ನು ದೂಷಿಸಬಾರದು ಎಂದು ಮೋಹನ್ ತಿಳಿಸಿದ್ದಾರೆ.</p><p>ಭಾನುವಾರ ಅಮೆರಿಕದ ಬೋಸ್ಟನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ಕುರಿತು ಅಮೆರಿಕದಲ್ಲಿ ಹೇಳಿಕೆ ನೀಡುವ ಮೂಲಕ ದೇಶವನ್ನು ಅವಮಾನಿಸಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಅವರು ವಿದೇಶಿ ನೆಲದಲ್ಲಿ ದೇಶದ ಮಾನ ಹಾಳು ಮಾಡಿದ್ದಾರೆ. ಕಳೆದ ಬಾರಿಯು ಅವರು ಹೀಗೆ ಮಾಡಿದ್ದರು. ಈ ಬಾರಿ ಅವರು ದೇಶಕ್ಕೆ ಅವಮಾನ ಮಾಡಬಾರದು, ಭಗವಾನ್ ಮಹಾಕಾಲ ಅವರಿಗೆ ಸರಿಯಾದ ಬುದ್ಧಿ ನೀಡಲಿ ಎಂದು ನಾನು ನಿನ್ನೆ ಹೇಳಿದ್ದೆ’ ಎಂದು ಅವರು ಹೇಳಿದ್ದಾರೆ.</p><p>ಬೇರೆ ಯಾವುದೇ ದೇಶದ ನಾಯಕರು ತಮ್ಮ ದೇಶದ ಕುರಿತು ವಿದೇಶಿ ನೆಲದಲ್ಲಿ ಈ ರೀತಿಯ ವಾತಾವರಣವನ್ನು ಸೃಷ್ಟಿಸುವುದಿಲ್ಲ. ಇದು ಕಾಂಗ್ರೆಸ್ನ ಗುಣವಾಗಿದೆ. ಕಾಂಗ್ರೆಸ್ ತಮ್ಮ ನಾಯಕನನ್ನು ನಿಯಂತ್ರಿಸಬೇಕಾಗಿದೆ. ನಾವು ದೇಶದ ಮಾನ ಹಾಳು ಮಾಡಬಾರದು ಮತ್ತು ಅದರ ನಾಗರಿಕರನ್ನು ದೂಷಿಸಬಾರದು ಎಂದು ಮೋಹನ್ ತಿಳಿಸಿದ್ದಾರೆ.</p><p>ಭಾನುವಾರ ಅಮೆರಿಕದ ಬೋಸ್ಟನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>