<p><strong>ಗೋರಖಪುರ</strong>: ಬಡವರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಲ್ಲಿ ಅದನ್ನು ತೆರವುಗೊಳಿಸಿ, ಅತಿಕ್ರಮಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಭೂ ಒತ್ತುವರಿ ಪ್ರಕರಣಗಳ ಬಗ್ಗೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಬಡವರನ್ನು ಶೋಷಿಸುವ ಭೂ ಮಾಫಿಯಾಗಳು ಹಾಗೂ ಗೂಂಡಾಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು’ ಎಂದು ಸೂಚನೆ ನೀಡಿದ್ದಾರೆ.</p>.<p>‘ದುರ್ಬಲರ ಮೇಲೆ ದಬ್ಬಾಳಿಕೆ ನಡೆಸುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಸರ್ಕಾರ ಕಟಿಬದ್ಧವಾಗಿದೆ’ ಎಂದು ಆದಿತ್ಯನಾಥ ಅವರು ಗೋರಕನಾಥ್ ದೇವಸ್ಥಾನದಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಹೇಳಿದರು.</p>.<p>ಭೂ ಮಾಫಿಯಾ ಹಾಗೂ ಅತಿಕ್ರಮಣಕಾರರಿಗೆ ತಕ್ಕ ಪಾಠ ಕಲಿಸಲು ಬದ್ಧರಾಗಿದ್ದು, ತಾವು ಅಧಿಕಾರದಲ್ಲಿರುವವರೆಗೆ, ಯಾವೊಬ್ಬ ಬಡವರೂ ಅತಿಕ್ರಮಣಕ್ಕೆ ಹೆದರಿ ಪಲಾಯನ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖಪುರ</strong>: ಬಡವರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಲ್ಲಿ ಅದನ್ನು ತೆರವುಗೊಳಿಸಿ, ಅತಿಕ್ರಮಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಭೂ ಒತ್ತುವರಿ ಪ್ರಕರಣಗಳ ಬಗ್ಗೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಬಡವರನ್ನು ಶೋಷಿಸುವ ಭೂ ಮಾಫಿಯಾಗಳು ಹಾಗೂ ಗೂಂಡಾಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು’ ಎಂದು ಸೂಚನೆ ನೀಡಿದ್ದಾರೆ.</p>.<p>‘ದುರ್ಬಲರ ಮೇಲೆ ದಬ್ಬಾಳಿಕೆ ನಡೆಸುವ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಸರ್ಕಾರ ಕಟಿಬದ್ಧವಾಗಿದೆ’ ಎಂದು ಆದಿತ್ಯನಾಥ ಅವರು ಗೋರಕನಾಥ್ ದೇವಸ್ಥಾನದಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಹೇಳಿದರು.</p>.<p>ಭೂ ಮಾಫಿಯಾ ಹಾಗೂ ಅತಿಕ್ರಮಣಕಾರರಿಗೆ ತಕ್ಕ ಪಾಠ ಕಲಿಸಲು ಬದ್ಧರಾಗಿದ್ದು, ತಾವು ಅಧಿಕಾರದಲ್ಲಿರುವವರೆಗೆ, ಯಾವೊಬ್ಬ ಬಡವರೂ ಅತಿಕ್ರಮಣಕ್ಕೆ ಹೆದರಿ ಪಲಾಯನ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>