ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಲೇಖನ: ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ ನಿಧನ

Published 18 ಫೆಬ್ರುವರಿ 2024, 15:29 IST
Last Updated 18 ಫೆಬ್ರುವರಿ 2024, 15:29 IST
ಅಕ್ಷರ ಗಾತ್ರ

ರಾಯಪುರ: ಸಲ್ಲೇಖನ ವ್ರತ ಕೈಗೊಂಡಿದ್ದ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ ಅವರು ಭಾನುವಾರ ಛತ್ತಿಸಗಢದ ಚಂದ್ರಗಿರಿ ತೀರ್ಥದಲ್ಲಿ ನಿಧನರಾಗಿದ್ದಾರೆ.

‘ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಮುನಿಗಳು ಮೂರು ದಿನಗಳಿಂದ ಸಲ್ಲೇಖನ ವ್ರತದಲ್ಲಿದ್ದರು. ತಡರಾತ್ರಿ 2:35ರ ವೇಳೆಗೆ ನಿಧನರಾದರು ಎಂದು’ ಅಧಿಕೃತ ಪ್ರಕಟಣೆ ತಿಳಿಸಿದೆ.

‘ಜೈನ ಪರಂಪರೆಯ ಶ್ರೇಷ್ಠ ದಿಗಂಬರರಾಗಿದ್ದ, ವರ್ಧಮಾನರೆಂದೇ ಹೆಸರಾಗಿದ್ದ ಆಚಾರ್ಯ ವಿದ್ಯಾಸಾಗರ ಮಹಾರಾಜರು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾನುವಾರ ಅರ್ಧ ದಿನದ ಶೋಕಾಚರಣೆಯನ್ನು ಘೋಷಿಸಲಾಗಿದೆ’ ಎಂದು ಛತ್ತಿಸಗಢ ಸರ್ಕಾರ ಹೇಳಿದೆ. 

ಸಲ್ಲೇಖನ ವ್ರತವು ಸ್ವಯಂಪ್ರೇರಿತವಾಗಿ ಉಪವಾಸವನ್ನು ಕೈಗೊಂಡು ಸಮಾಧಿ ಸ್ಥಿತಿಗೆ ತಲುಪುವ ಆಚರಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT