<p><strong>ನವದೆಹಲಿ: </strong>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಣವಾಗುತ್ತಿರುವ ಈ ಸಂದರ್ಭದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಆಚರಣೆಯನ್ನು ವಿಶಿಷ್ಟವಾಗಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.</p>.<p>ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ, ರಾಮ ದೇವಾಲಯದ ಪ್ರತಿರೂಪ, 'ದೀಪೋತ್ಸವ'ದ ದರ್ಶನ ಮತ್ತು ರಾಮಾಯಣ ಮಹಾಕಾವ್ಯದ ವಿವಿಧ ಕಥೆಗಳನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ.</p>.<p>ಸ್ತಬ್ಧಚಿತ್ರದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಕುಳಿತಿರುವ ಪ್ರತಿಕೃತಿ ಇರಲಿದ್ದು, ಹಿಂಭಾಗದಲ್ಲಿ ದೇವಾಲಯದ ಪ್ರತಿಕೃತಿ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>"ಅಯೋಧ್ಯೆ ನಮಗೆ ಧಾರ್ಮಿಕ ಪವಿತ್ರ ಸ್ಥಳವಾಗಿದೆ. ರಾಮ ದೇವಾಲಯದ ವಿಷಯವು ಒಂದು ಭಾವನಾತ್ಮಕ ಸಂಗತಿಯಾಗಿದೆ. ದೇಶದಾದ್ಯಂತ ಅಸಂಖ್ಯಾತ ಜನರಿಂದ ಪೂಜಿಸಲ್ಪಡುವ ಅಯೋಧ್ಯೆ ನಗರದ ಕುರಿತಾದ ನಮ್ಮ ಸ್ತಬ್ಧ ಚಿತ್ರವು ಪ್ರಾಚೀನ ಪರಂಪರೆಯನ್ನು ಬಿಂಬಿಸುತ್ತದೆ," ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಇಬ್ಬರು ನೃತ್ಯಗಾರ್ತಿಯರು ಸೇರಿ ಕಲಾವಿದರ ಗುಂಪು ಸ್ತಬ್ಧಚಿತ್ರದ ಭಾಗವಾಗಲಿದ್ದು, ಒಬ್ಬ ಕಲಾವಿದ ಭಗವಾನ್ ರಾಮನ ವೇಷ ಧರಿಸಿರುತ್ತಾರೆ.</p>.<p>ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ 17 ರಾಜ್ಯಗಳ ಸಂಸ್ಕೃತಿ, ಪರಂಪರೆ ಬಿಂಬಿಸುವ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಣವಾಗುತ್ತಿರುವ ಈ ಸಂದರ್ಭದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಆಚರಣೆಯನ್ನು ವಿಶಿಷ್ಟವಾಗಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.</p>.<p>ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಪ್ರಾಚೀನ ನಗರ ಅಯೋಧ್ಯೆಯ ಪರಂಪರೆ, ರಾಮ ದೇವಾಲಯದ ಪ್ರತಿರೂಪ, 'ದೀಪೋತ್ಸವ'ದ ದರ್ಶನ ಮತ್ತು ರಾಮಾಯಣ ಮಹಾಕಾವ್ಯದ ವಿವಿಧ ಕಥೆಗಳನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ.</p>.<p>ಸ್ತಬ್ಧಚಿತ್ರದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಕುಳಿತಿರುವ ಪ್ರತಿಕೃತಿ ಇರಲಿದ್ದು, ಹಿಂಭಾಗದಲ್ಲಿ ದೇವಾಲಯದ ಪ್ರತಿಕೃತಿ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>"ಅಯೋಧ್ಯೆ ನಮಗೆ ಧಾರ್ಮಿಕ ಪವಿತ್ರ ಸ್ಥಳವಾಗಿದೆ. ರಾಮ ದೇವಾಲಯದ ವಿಷಯವು ಒಂದು ಭಾವನಾತ್ಮಕ ಸಂಗತಿಯಾಗಿದೆ. ದೇಶದಾದ್ಯಂತ ಅಸಂಖ್ಯಾತ ಜನರಿಂದ ಪೂಜಿಸಲ್ಪಡುವ ಅಯೋಧ್ಯೆ ನಗರದ ಕುರಿತಾದ ನಮ್ಮ ಸ್ತಬ್ಧ ಚಿತ್ರವು ಪ್ರಾಚೀನ ಪರಂಪರೆಯನ್ನು ಬಿಂಬಿಸುತ್ತದೆ," ಎಂದು ಉತ್ತರ ಪ್ರದೇಶದ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಇಬ್ಬರು ನೃತ್ಯಗಾರ್ತಿಯರು ಸೇರಿ ಕಲಾವಿದರ ಗುಂಪು ಸ್ತಬ್ಧಚಿತ್ರದ ಭಾಗವಾಗಲಿದ್ದು, ಒಬ್ಬ ಕಲಾವಿದ ಭಗವಾನ್ ರಾಮನ ವೇಷ ಧರಿಸಿರುತ್ತಾರೆ.</p>.<p>ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ 17 ರಾಜ್ಯಗಳ ಸಂಸ್ಕೃತಿ, ಪರಂಪರೆ ಬಿಂಬಿಸುವ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>