‘ಅಣಕು ಮತದಾನದ ವೇಳೆ ಒಂದು ಹೆಚ್ಚುವರಿ ಮತವನ್ನು ತೋರಿಸಿದೆ ಎಂಬ ವರದಿ ಸುಳ್ಳು. ಜಿಲ್ಲಾಧಿಕಾರಿ ಅವರೂ ಈ ಬಗ್ಗೆ ಪರಿಶೀಲಿಸಿದ್ದು, ಆರೋಪ ಸುಳ್ಳು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ವಿವರವಾದ ವರದಿಯನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ’ ಎಂದು ಉಪ ಚುನಾವಣಾ ಆಯುಕ್ತ ನಿತೇಶ್ ಕುಮಾರ್ ವ್ಯಾಸ್ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.