ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕರ್ತವ್ಯಪಥದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಈ ವೇಳೆ ಸಶಸ್ತ್ರ ಪಡೆಗಳಿಂದ ಶಕ್ತಿ ಪ್ರದರ್ಶನ ನಡೆಯಿತು. ವಿವಿಧ ರಾಜ್ಯಗಳು ಸ್ತಬ್ಧಚಿತ್ರ ಪ್ರದರ್ಶಿಸಿತು. ರಾಜ್ಯದಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ನೆರವೇರಿತು.