<p><strong>ನವದೆಹಲಿ</strong>: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಗಣರಾಜ್ಯೋತ್ಸವದ ನಿಮಿತ್ತ ನಿನ್ನೆ (ಭಾನುವಾರ) ಕೇಂದ್ರ ಸರ್ಕಾರದ ವಿವಿಧ ಇಲಾಖೆಯ ಫಲಾನುಭವಿಗಳ ಜೊತೆ ವಿಶೇಷ ಸಂವಾದ ಆಯೋಜಿಸಿತ್ತು.</p><p>ದೆಹಲಿಯ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅತಿಥಿಗಳು ಭಾಗವಹಿಸಿದ್ದರು.</p><p>ಡಿಎನ್ಟಿ ಸಮುದಾಯಗಳ ಆರ್ಥಿಕ ಸಬಲೀಕರಣ ಯೋಜನೆ (ಸೀಡ್) ಅಡಿಯಲ್ಲಿ 151 ಫಲಾನುಭವಿಗಳು. ಸ್ಮೈಲ್ (ಲಿಂಗತ್ವ ಅಲ್ಪಸಂಖ್ಯಾತರು) ಯೋಜನೆ ಅಡಿಯಲ್ಲಿ 42 ಫಲಾನುಭವಿಗಳು ಮತ್ತು ಸ್ಮೈಲ್ (ಕಡು ಬಡತನ ) ಯೋಜನೆ ಅಡಿಯಲ್ಲಿ 51 ಫಲಾನುಭವಿಗಳು ಸೇರಿ ಒಟ್ಟು 244 ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಸಚಿವಾಲಯ ಮಾಹಿತಿ ನೀಡಿದೆ.</p><p>ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸಾಧಿಸಿದ ಪ್ರಗತಿ ಮತ್ತು ಸ್ಪೂರ್ತಿದಾಯಕ ಪ್ರಯಾಣವನ್ನು ಗುರುತಿಸುವ ಉದ್ದೇಶದಿಂದ ವಿಶೇಷ ಅತಿಥಿಗಳ ಸಂವಾದ ಆಯೋಜಿಸಿತ್ತು.</p><p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ವೀರೇಂದ್ರ ಕುಮಾರ್ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ಮಾತ್ರವಲ್ಲ, ಫಲಾನುಭವಿಗಳ ಅನುಭವ ಆಲಿಸಿದರು.</p><p>ಸಭೆಯನ್ನುದ್ದೇಶಿಸಿ ಮಾತನಾಡಿದ ವೀರೇಂದ್ರ ಕುಮಾರ್ ಅವರು, ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಕುರಿತು ಸರ್ಕಾರ ಅಚಲ ಬದ್ಧತೆ ಹೊಂದಿದೆ ಎಂದು ತಿಳಿಸಿದ್ದಾರೆ.</p><p>ರಾಷ್ಟ್ರೀಯ ಆಚರಣೆಗಳ ಸಂದರ್ಭದಲ್ಲಿ ತಳ ಸಮುದಾಯಗಳ ಫಲಾನುಭವಿಗಳ ಉಪಸ್ಥಿತಿಯು ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ಎಂಬ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒತ್ತಿ ಹೇಳಿದರು.</p><p>ಫಲಾನುಭವಿಗಳು ಮಾತನಾಡಿ, ಸರ್ಕಾರದ ಯೋಜನೆಗಳು, ಘನತೆ, ಸಾಮಾಜಿಕ ಸೇರ್ಪಡೆ, ಸ್ವಾವಲಂಬನೆ ಮತ್ತು ಸುಸ್ಥಿರ ಜೀವನೋಪಾಯ ಉತ್ತೇಜಿಸುವ ಮೂಲಕ ತಮ್ಮ ಜೀವನದಲ್ಲಿ ಅರ್ಥಪೂರ್ಣ ಮತ್ತು ಪರಿವರ್ತನಾತ್ಮಕ ಬದಲಾವಣೆಗಳನ್ನು ಹೇಗೆ ತಂದಿವೆ ಎಂಬುದನ್ನು ವಿವರಿಸಿದರು.</p><p>ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಸುಧಾಂಶ್ ಪಂತ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಗಣರಾಜ್ಯೋತ್ಸವದ ನಿಮಿತ್ತ ನಿನ್ನೆ (ಭಾನುವಾರ) ಕೇಂದ್ರ ಸರ್ಕಾರದ ವಿವಿಧ ಇಲಾಖೆಯ ಫಲಾನುಭವಿಗಳ ಜೊತೆ ವಿಶೇಷ ಸಂವಾದ ಆಯೋಜಿಸಿತ್ತು.</p><p>ದೆಹಲಿಯ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅತಿಥಿಗಳು ಭಾಗವಹಿಸಿದ್ದರು.</p><p>ಡಿಎನ್ಟಿ ಸಮುದಾಯಗಳ ಆರ್ಥಿಕ ಸಬಲೀಕರಣ ಯೋಜನೆ (ಸೀಡ್) ಅಡಿಯಲ್ಲಿ 151 ಫಲಾನುಭವಿಗಳು. ಸ್ಮೈಲ್ (ಲಿಂಗತ್ವ ಅಲ್ಪಸಂಖ್ಯಾತರು) ಯೋಜನೆ ಅಡಿಯಲ್ಲಿ 42 ಫಲಾನುಭವಿಗಳು ಮತ್ತು ಸ್ಮೈಲ್ (ಕಡು ಬಡತನ ) ಯೋಜನೆ ಅಡಿಯಲ್ಲಿ 51 ಫಲಾನುಭವಿಗಳು ಸೇರಿ ಒಟ್ಟು 244 ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಸಚಿವಾಲಯ ಮಾಹಿತಿ ನೀಡಿದೆ.</p><p>ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸಾಧಿಸಿದ ಪ್ರಗತಿ ಮತ್ತು ಸ್ಪೂರ್ತಿದಾಯಕ ಪ್ರಯಾಣವನ್ನು ಗುರುತಿಸುವ ಉದ್ದೇಶದಿಂದ ವಿಶೇಷ ಅತಿಥಿಗಳ ಸಂವಾದ ಆಯೋಜಿಸಿತ್ತು.</p><p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ವೀರೇಂದ್ರ ಕುಮಾರ್ ಅವರು ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ಮಾತ್ರವಲ್ಲ, ಫಲಾನುಭವಿಗಳ ಅನುಭವ ಆಲಿಸಿದರು.</p><p>ಸಭೆಯನ್ನುದ್ದೇಶಿಸಿ ಮಾತನಾಡಿದ ವೀರೇಂದ್ರ ಕುಮಾರ್ ಅವರು, ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಕುರಿತು ಸರ್ಕಾರ ಅಚಲ ಬದ್ಧತೆ ಹೊಂದಿದೆ ಎಂದು ತಿಳಿಸಿದ್ದಾರೆ.</p><p>ರಾಷ್ಟ್ರೀಯ ಆಚರಣೆಗಳ ಸಂದರ್ಭದಲ್ಲಿ ತಳ ಸಮುದಾಯಗಳ ಫಲಾನುಭವಿಗಳ ಉಪಸ್ಥಿತಿಯು ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ಎಂಬ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಒತ್ತಿ ಹೇಳಿದರು.</p><p>ಫಲಾನುಭವಿಗಳು ಮಾತನಾಡಿ, ಸರ್ಕಾರದ ಯೋಜನೆಗಳು, ಘನತೆ, ಸಾಮಾಜಿಕ ಸೇರ್ಪಡೆ, ಸ್ವಾವಲಂಬನೆ ಮತ್ತು ಸುಸ್ಥಿರ ಜೀವನೋಪಾಯ ಉತ್ತೇಜಿಸುವ ಮೂಲಕ ತಮ್ಮ ಜೀವನದಲ್ಲಿ ಅರ್ಥಪೂರ್ಣ ಮತ್ತು ಪರಿವರ್ತನಾತ್ಮಕ ಬದಲಾವಣೆಗಳನ್ನು ಹೇಗೆ ತಂದಿವೆ ಎಂಬುದನ್ನು ವಿವರಿಸಿದರು.</p><p>ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಸುಧಾಂಶ್ ಪಂತ್ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>