<p><strong>ಕಣ್ಣೂರ್: </strong>ಕೇರಳ ಸಚಿವ ರಾಮಚಂದ್ರನ್ ಕಡನಪಲ್ಲಿ ಅವರು ಗಣರಾಜ್ಯೋತ್ಸವದ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.</p><p>ಕಣ್ಣೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಸಚಿವ, ವೇದಿಕೆಯಲ್ಲಿದ್ದಾಗಲೇ ಅಸ್ವಸ್ಥರಾಗಿದ್ದಾರೆ. ಹಿಮ್ಮುಖವಾಗಿ ಬೀಳುತ್ತಿದ್ದ ಅವರನ್ನು ಪಕ್ಕದಲ್ಲೇ ಇದ್ದ ಭದ್ರತಾ ಸಿಬ್ಬಂದಿ ಕೆಳಗೆ ಬೀಳದಂತೆ ಹಿಡಿದುಕೊಂಡಿದ್ದಾರೆ. ಇದರಿಂದಾಗಿ ಅಪಾಯ ತಪ್ಪಿದೆ.</p><p>ತಕ್ಷಣವೇ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಸುಧಾರಿಸಿಕೊಂಡ ಸಚಿವರು ಆ್ಯಂಬುಲೆನ್ಸ್ನತ್ತ ನಡೆದುಕೊಂಡು ಹೋಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿದೆ.</p><p>ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.</p>.<p><strong>ದೇಶದಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ</strong></p><p>ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ಸೇನಾ ಪಡೆಗಳು ಪಥಸಂಚನ ನಡೆಸಿ, ಸಾಮರ್ಥ್ಯವನ್ನು ಅನಾವರಣಗೊಳಿಸಿವೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡು, ದೇಶದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಸಾರ ಮಾಡಿವೆ.</p><p>ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕರ್ಥವ್ಯಪಥದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದೇ ಪರಿಕಲ್ಪನೆಯಲ್ಲಿ ರೂಪಿಸಲಾದ ಸ್ತಬ್ಧ ಚಿತ್ರ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರ್: </strong>ಕೇರಳ ಸಚಿವ ರಾಮಚಂದ್ರನ್ ಕಡನಪಲ್ಲಿ ಅವರು ಗಣರಾಜ್ಯೋತ್ಸವದ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.</p><p>ಕಣ್ಣೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಸಚಿವ, ವೇದಿಕೆಯಲ್ಲಿದ್ದಾಗಲೇ ಅಸ್ವಸ್ಥರಾಗಿದ್ದಾರೆ. ಹಿಮ್ಮುಖವಾಗಿ ಬೀಳುತ್ತಿದ್ದ ಅವರನ್ನು ಪಕ್ಕದಲ್ಲೇ ಇದ್ದ ಭದ್ರತಾ ಸಿಬ್ಬಂದಿ ಕೆಳಗೆ ಬೀಳದಂತೆ ಹಿಡಿದುಕೊಂಡಿದ್ದಾರೆ. ಇದರಿಂದಾಗಿ ಅಪಾಯ ತಪ್ಪಿದೆ.</p><p>ತಕ್ಷಣವೇ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಸುಧಾರಿಸಿಕೊಂಡ ಸಚಿವರು ಆ್ಯಂಬುಲೆನ್ಸ್ನತ್ತ ನಡೆದುಕೊಂಡು ಹೋಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿದೆ.</p><p>ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.</p>.<p><strong>ದೇಶದಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ</strong></p><p>ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ಸೇನಾ ಪಡೆಗಳು ಪಥಸಂಚನ ನಡೆಸಿ, ಸಾಮರ್ಥ್ಯವನ್ನು ಅನಾವರಣಗೊಳಿಸಿವೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡು, ದೇಶದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಸಾರ ಮಾಡಿವೆ.</p><p>ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕರ್ಥವ್ಯಪಥದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದೇ ಪರಿಕಲ್ಪನೆಯಲ್ಲಿ ರೂಪಿಸಲಾದ ಸ್ತಬ್ಧ ಚಿತ್ರ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>