<p><strong>ನವದೆಹಲಿ:</strong> ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮೋಟಾರ್ಸೈಕಲ್ ಕಸರತ್ತು ಪ್ರಮುಖ ಆಕರ್ಷಣೆಯಾಗಿರುತ್ತದೆ. ಆದರೆ ಈ ಬಾರಿ ಕೋವಿಡ್-19 ಸುರಕ್ಷತಾ ನಿಯಮಗಳು ಕಟ್ಟುನಿಟ್ಟಿನಿಂದ ಪಾಲನೆಯಾಗಲಿರುವುದರಿಂದ ದೇಶಪ್ರೇಮಿಗಳಿಗೆ ಬೈಕ್ ಅಭ್ಯಾಸ ನೋಡುವ ಸೌಭಾಗ್ಯ ಇರುವುದಿಲ್ಲ.</p>.<p>ಅಲ್ಲದೆ ಪ್ರೇಕ್ಷಕರ ಸಂಖ್ಯೆಯನ್ನು 25,000ಕ್ಕೆ ಇಳಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, 72ನೇ ಗಣರಾಜ್ಯೋತ್ಸದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವೀರ ಶೌರ್ಯ ಪ್ರಶಸ್ತಿ ಪುರಸ್ಕೃತರ ಹಾಗೂ ಮಕ್ಕಳ ಮೆರವಣಿಗೆ ಕೂಡಾ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಮೊದಲೇ ತಿಳಿಸಿರುವಂತೆಯೇ ಗಣರಾಜೋತ್ಸವ ದಿನದಂದು ಯಾವುದೇ ಮುಖ್ಯ ಆತಿಥಿಗಳು ಭಾಗವಹಿಸುವುದಿಲ್ಲ. ಅಲ್ಲದೆ ಸೀಮಿತ ಸಂಖ್ಯೆಯ ಮಾಧ್ಯಮ ಮಿತ್ರರು ಭಾಗವಹಿಸಲಿದ್ದಾರೆ.</p>.<p>ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾಲಘಟ್ಟದಲ್ಲಿ ನಡೆಯುತ್ತಿರುವುದರಿಂದ ಈ ಬಾರಿಯ ಗಣರಾಜ್ಯೋತ್ಸವ ತುಂಬಾ ವಿಭಿನ್ನವಾಗಿರಲಿದೆ. ಸ್ವಾತಂತ್ರ್ಯ ದಿನಾಚರಣೆಯಂತೆ ಸಾಮಾಜಿಕ ಅಂತರದೊಂದಿಗೆ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಪ್ರೇಕ್ಷಕರ ಸಂಖ್ಯೆಯು 1.25 ಲಕ್ಷದಿಂದ 25,000ಕ್ಕೆ ಇಳಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-at-singhu-border-on-friday-presented-a-person-who-alleged-a-plot-to-shoot-four-farmer-798823.html" itemprop="url">ರೈತರಿಗೆ ಗುಂಡಿಕ್ಕಿ, ಜ.26ರ ಟ್ರಾಕ್ಟರ್ ರ್ಯಾಲಿ ಅಡ್ಡಿಗೆ ಸಂಚು: ಒಬ್ಬನ ಸೆರೆ </a></p>.<p>ಕೋವಿಡ್-19 ಸುರಕ್ಷತಾ ಮಾನದಂಡಗಳು ಜಾರಿಯಲ್ಲಿರುವುದರಿಂದ ಸೈನಿಕ ಪಡೆ ಹಾಗೂ ಅರೆಸೈನಿಕ ಪಡೆಯಿಂದ ನಡೆಯಲಿರುವ ಜನಪ್ರಿಯ ಮೋಟಾರ್ಸೈಕಲ್ ಕಸರತ್ತು ಕೂಡಾ ನಡೆಯುದಿಲ್ಲ. ಬೈಕ್ ಕಸರತ್ತು ಮಾಡುವಾಗ ಸಾಮಾಜಿಕ ಅಂತರ ಪಾಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಒಟ್ಟು 32 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಇದರಲ್ಲಿ 17 ರಾಜ್ಯ/ಕೇಂದ್ರಾಡಳಿತ ಪ್ರದೇಶ, 9 ಸಚಿವಾಲಯಗಳು ಮತ್ತು 6 ರಕ್ಷಣಾ ವಿಭಾಗದಿಂದ ಆಯೋಜನೆಯಾಗಲಿದೆ. ವಾಡಿಕೆಯಂತೆ ಕೆಂಪುಕೋಟೆಗೆ ಹೋಗುವ ಬದಲು ಈ ಬಾರಿ ಪಥಸಂಚಲನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ.</p>.<p>ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸೈನಿಕ ತುಕಡಿಯಲ್ಲಿ ಯೋಧರ ಸಂಖ್ಯೆಯನ್ನು 144ರಿಂದ 96ಕ್ಕೆ ಇಳಿಸಲಾಗಿದೆ.</p>.<p>ರಾಜಪಥದಲ್ಲಿ ಗಣರಾಜೋತ್ಸವ ಪರೇಡ್ನಲ್ಲಿ ಕೋವಿಡ್-19 ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತಿದ್ದು, ಎಲ್ಲರೂ ಕೋವಿಡ್-19 ಪರೀಕ್ಷೆ ಒಳಪಟ್ಟಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<p>ಇದೇ ವರ್ಷ 50ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಿಸುತ್ತಿರುವ ನೆರೆಯ ಬಾಂಗ್ಲಾದೇಶದ ಮಿಲಿಟರಿ ಬ್ಯಾಂಡ್ ಕೂಡಾ ಗಣರಾಜ್ಯೋತ್ಸವ ಪರೇಡ್ನ ಭಾಗವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮೋಟಾರ್ಸೈಕಲ್ ಕಸರತ್ತು ಪ್ರಮುಖ ಆಕರ್ಷಣೆಯಾಗಿರುತ್ತದೆ. ಆದರೆ ಈ ಬಾರಿ ಕೋವಿಡ್-19 ಸುರಕ್ಷತಾ ನಿಯಮಗಳು ಕಟ್ಟುನಿಟ್ಟಿನಿಂದ ಪಾಲನೆಯಾಗಲಿರುವುದರಿಂದ ದೇಶಪ್ರೇಮಿಗಳಿಗೆ ಬೈಕ್ ಅಭ್ಯಾಸ ನೋಡುವ ಸೌಭಾಗ್ಯ ಇರುವುದಿಲ್ಲ.</p>.<p>ಅಲ್ಲದೆ ಪ್ರೇಕ್ಷಕರ ಸಂಖ್ಯೆಯನ್ನು 25,000ಕ್ಕೆ ಇಳಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, 72ನೇ ಗಣರಾಜ್ಯೋತ್ಸದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವೀರ ಶೌರ್ಯ ಪ್ರಶಸ್ತಿ ಪುರಸ್ಕೃತರ ಹಾಗೂ ಮಕ್ಕಳ ಮೆರವಣಿಗೆ ಕೂಡಾ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಮೊದಲೇ ತಿಳಿಸಿರುವಂತೆಯೇ ಗಣರಾಜೋತ್ಸವ ದಿನದಂದು ಯಾವುದೇ ಮುಖ್ಯ ಆತಿಥಿಗಳು ಭಾಗವಹಿಸುವುದಿಲ್ಲ. ಅಲ್ಲದೆ ಸೀಮಿತ ಸಂಖ್ಯೆಯ ಮಾಧ್ಯಮ ಮಿತ್ರರು ಭಾಗವಹಿಸಲಿದ್ದಾರೆ.</p>.<p>ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾಲಘಟ್ಟದಲ್ಲಿ ನಡೆಯುತ್ತಿರುವುದರಿಂದ ಈ ಬಾರಿಯ ಗಣರಾಜ್ಯೋತ್ಸವ ತುಂಬಾ ವಿಭಿನ್ನವಾಗಿರಲಿದೆ. ಸ್ವಾತಂತ್ರ್ಯ ದಿನಾಚರಣೆಯಂತೆ ಸಾಮಾಜಿಕ ಅಂತರದೊಂದಿಗೆ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಪ್ರೇಕ್ಷಕರ ಸಂಖ್ಯೆಯು 1.25 ಲಕ್ಷದಿಂದ 25,000ಕ್ಕೆ ಇಳಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-at-singhu-border-on-friday-presented-a-person-who-alleged-a-plot-to-shoot-four-farmer-798823.html" itemprop="url">ರೈತರಿಗೆ ಗುಂಡಿಕ್ಕಿ, ಜ.26ರ ಟ್ರಾಕ್ಟರ್ ರ್ಯಾಲಿ ಅಡ್ಡಿಗೆ ಸಂಚು: ಒಬ್ಬನ ಸೆರೆ </a></p>.<p>ಕೋವಿಡ್-19 ಸುರಕ್ಷತಾ ಮಾನದಂಡಗಳು ಜಾರಿಯಲ್ಲಿರುವುದರಿಂದ ಸೈನಿಕ ಪಡೆ ಹಾಗೂ ಅರೆಸೈನಿಕ ಪಡೆಯಿಂದ ನಡೆಯಲಿರುವ ಜನಪ್ರಿಯ ಮೋಟಾರ್ಸೈಕಲ್ ಕಸರತ್ತು ಕೂಡಾ ನಡೆಯುದಿಲ್ಲ. ಬೈಕ್ ಕಸರತ್ತು ಮಾಡುವಾಗ ಸಾಮಾಜಿಕ ಅಂತರ ಪಾಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಒಟ್ಟು 32 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಇದರಲ್ಲಿ 17 ರಾಜ್ಯ/ಕೇಂದ್ರಾಡಳಿತ ಪ್ರದೇಶ, 9 ಸಚಿವಾಲಯಗಳು ಮತ್ತು 6 ರಕ್ಷಣಾ ವಿಭಾಗದಿಂದ ಆಯೋಜನೆಯಾಗಲಿದೆ. ವಾಡಿಕೆಯಂತೆ ಕೆಂಪುಕೋಟೆಗೆ ಹೋಗುವ ಬದಲು ಈ ಬಾರಿ ಪಥಸಂಚಲನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ.</p>.<p>ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸೈನಿಕ ತುಕಡಿಯಲ್ಲಿ ಯೋಧರ ಸಂಖ್ಯೆಯನ್ನು 144ರಿಂದ 96ಕ್ಕೆ ಇಳಿಸಲಾಗಿದೆ.</p>.<p>ರಾಜಪಥದಲ್ಲಿ ಗಣರಾಜೋತ್ಸವ ಪರೇಡ್ನಲ್ಲಿ ಕೋವಿಡ್-19 ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತಿದ್ದು, ಎಲ್ಲರೂ ಕೋವಿಡ್-19 ಪರೀಕ್ಷೆ ಒಳಪಟ್ಟಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<p>ಇದೇ ವರ್ಷ 50ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಿಸುತ್ತಿರುವ ನೆರೆಯ ಬಾಂಗ್ಲಾದೇಶದ ಮಿಲಿಟರಿ ಬ್ಯಾಂಡ್ ಕೂಡಾ ಗಣರಾಜ್ಯೋತ್ಸವ ಪರೇಡ್ನ ಭಾಗವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>