ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

Last Updated 4 ಫೆಬ್ರುವರಿ 2022, 10:19 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಇಂಡಿಯಾ ಗೇಟ್‌ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.

ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ರಾಜ್ಯದ ಸ್ತಬ್ಧಚಿತ್ರವು ಕರಕುಶಲ ಕಲೆಯ ವೈಭವವನ್ನು ಬಿಂಬಿಸಿ ಗಮನ ಸೆಳೆದಿತ್ತು.

ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನಕ್ಕೆ ಪಾತ್ರವಾಗಿದೆ.

'ವಂದೇ ಭಾರತಮ್' ನೃತ್ಯ ತಂಡವು ವಿಶೇಷ‌ ಬಹುಮಾನ ಪಡೆದಿದೆ. ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿ ಭಾಗವಹಿಸಿದ್ದರು.

ಕೇಂದ್ರದ ವಿವಿಧ ಇಲಾಖೆಗಳ ವಿಭಾಗದಲ್ಲಿ ಶಿಕ್ಷಣ ಹಾಗೂ ನಾಗರಿಕ ವಿಮಾನಯಾನ ಸಚಿವಸಲಯಗಳ ಸ್ತಬ್ಧಚಿತ್ರಗಳು ವಿಶೇಷ ಬಹುಮಾನ ಪಡೆದಿವೆ.

ಪಥ ಸಂಚಲನದಲ್ಲಿ ಭಾಗವಹಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಹಾಗೂ ನೌಕಾದಳದ ಸಿಬ್ಬಂದಿಗೆ ವಿಶೇಷ‌ ಬಹುಮಾನ ನೀಡಲಾಗಿದೆ.

ಕೇಂದ್ರದ ಲೋಕೋಪಯೋಗಿ ಇಲಾಖೆಯ ಸುಭಾಷ್-125 ಸ್ತಬ್ಧಚಿತ್ರಕ್ಕೂ ವಿಶೇಷ ಬಹುಮಾನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT