<p><strong>ನವದೆಹಲಿ:</strong> ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.</p>.<p>ಜುಲೈ 12 ರಂದು ಎಲ್ಲಾ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ್ ನಿರ್ದೇಶಿಸಿದರು.</p>.<p><strong>ಓದಿ:</strong><a href="https://www.prajavani.net/india-news/police-files-supplementary-charge-sheet-in-republic-day-violence-case-against-sidhu-others-839707.html" itemprop="url">ಟ್ರ್ಯಾಕ್ಟರ್ ರ್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್ಶೀಟ್</a></p>.<p>ಈ ಹಿಂದೆ ನ್ಯಾಯಾಲಯವು ಆರೋಪಿಗಳಿಗೆ ಮಂಗಳವಾರ (ಜೂನ್ 29) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಕೇವಲ ಹರ್ಜೊತ್ ಸಿಂಗ್ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.</p>.<p>‘ನ್ಯಾಯಾಲಯ ಜಾರಿಗೊಳಿಸಿದ ಸಮನ್ಸ್ ಆರೋಪಿಗಳಿಗೆ ಸಿಕ್ಕಿಲ್ಲ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿಲ್ಲ’ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಮತ್ತೊಮ್ಮೆ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.</p>.<p>ಜುಲೈ 12 ರಂದು ಎಲ್ಲಾ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ್ ನಿರ್ದೇಶಿಸಿದರು.</p>.<p><strong>ಓದಿ:</strong><a href="https://www.prajavani.net/india-news/police-files-supplementary-charge-sheet-in-republic-day-violence-case-against-sidhu-others-839707.html" itemprop="url">ಟ್ರ್ಯಾಕ್ಟರ್ ರ್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್ಶೀಟ್</a></p>.<p>ಈ ಹಿಂದೆ ನ್ಯಾಯಾಲಯವು ಆರೋಪಿಗಳಿಗೆ ಮಂಗಳವಾರ (ಜೂನ್ 29) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಕೇವಲ ಹರ್ಜೊತ್ ಸಿಂಗ್ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.</p>.<p>‘ನ್ಯಾಯಾಲಯ ಜಾರಿಗೊಳಿಸಿದ ಸಮನ್ಸ್ ಆರೋಪಿಗಳಿಗೆ ಸಿಕ್ಕಿಲ್ಲ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿಲ್ಲ’ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಮತ್ತೊಮ್ಮೆ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>