<p><strong>ಇಡುಕ್ಕಿ:</strong> ಇಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿದೆ. ಭೂಕುಸಿತದಲ್ಲಿ ಟೀ ಎಸ್ಟೇಟ್ ಕಾರ್ಮಿಕರ 20 ಮನೆಗಳು ನೆಲಸಮವಾಗಿವೆ.</p>.<p>ನಾಪತ್ತೆಯಾದವರ ಹುಡುಕಾಟ ಕಾರ್ಯದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ ಸಿಬ್ಬಂದಿ ಜೊತೆಗೆ ಸ್ಥಳೀಯರೂ ಕೈಜೋಡಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ರಕ್ಷಣಾ ಪಡೆಯ (ಎನ್.ಡಿ.ಆರ್.ಎಫ್) ಎರಡು ತುಕಡಿಗಳನ್ನು ನಿಯೋಜಿಸಲಾಗಿದೆ.</p>.<p>ಭಾನುವಾರ ಮಧ್ಯಾಹ್ನದವರೆಗೂ 15ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ 20 ಹಾಗೂಶುಕ್ರವಾರ 7 ಮೃತದೇಹಗಳನ್ನು ಹೊರತೆಗೆಯಲಾಗಿತ್ತು.ಇನ್ನೂ 20 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಳೆಯ ನಡುವೆಯೂ ಹುಡುಕಾಟ ನಡೆದಿದೆ.</p>.<p>ಶುಕ್ರವಾರ ರಕ್ಷಿಸಲಾಗಿದ್ದ 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಎಂದು ಜಿಲ್ಲಾಧಿಕಾರಿ ಎಚ್.ದಿನೇಶನ್ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾನುವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ.</p>.<p>ಪೆಟ್ಟಿಮುಡಿಯ ಆಕರ್ಷಕ ಭೌಗೋಳಿಕ ಪ್ರದೇಶದ ಚಿತ್ರಣವೇ ಈಗ ಬದಲಾಗಿದ್ದು, ಕುಸಿದಿರುವ ಮಣ್ಣಿನ ನಡುವೆ ಮನೆಯ ಅವಶೇಷಗಳು ಕಾಣಿಸುತ್ತಿವೆ. ಶುಕ್ರವಾರ ಬೆಳಗಿನ ಜಾವ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾಲು ಮನೆಗಳು ಕುಸಿದಿದ್ದವು.</p>.<p>ಎನ್.ಡಿ.ಆರ್.ಎಫ್.ನ ದಕ್ಷಿಣ ಭಾರತದ ಮುಖ್ಯಸ್ಥರಾದ ರೇಖಾ ನಂಬಿಯಾರ್ ಅವರು, ‘ರಕ್ಷಣಾ ಕಾರ್ಯಗಳಿಗೆ 55 ಜನರ ತಂಡವನ್ನು ನಿಯೋಜಿಸಲಾಗಿದೆ. ನದಿ ಪಾತ್ರದಲ್ಲಿಯೂ ಹುಡುಕಾಟ ನಡೆದಿದ್ದು, ದೇಹಗಳು ಮಣ್ಣಿನಡಿ ಸಿಲುಕಿರುವ ಸಂಭವವಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಡುಕ್ಕಿ:</strong> ಇಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿದೆ. ಭೂಕುಸಿತದಲ್ಲಿ ಟೀ ಎಸ್ಟೇಟ್ ಕಾರ್ಮಿಕರ 20 ಮನೆಗಳು ನೆಲಸಮವಾಗಿವೆ.</p>.<p>ನಾಪತ್ತೆಯಾದವರ ಹುಡುಕಾಟ ಕಾರ್ಯದಲ್ಲಿ ಪೊಲೀಸ್, ಅಗ್ನಿಶಾಮಕ ಸೇವೆ ಸಿಬ್ಬಂದಿ ಜೊತೆಗೆ ಸ್ಥಳೀಯರೂ ಕೈಜೋಡಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ರಕ್ಷಣಾ ಪಡೆಯ (ಎನ್.ಡಿ.ಆರ್.ಎಫ್) ಎರಡು ತುಕಡಿಗಳನ್ನು ನಿಯೋಜಿಸಲಾಗಿದೆ.</p>.<p>ಭಾನುವಾರ ಮಧ್ಯಾಹ್ನದವರೆಗೂ 15ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಶನಿವಾರ 20 ಹಾಗೂಶುಕ್ರವಾರ 7 ಮೃತದೇಹಗಳನ್ನು ಹೊರತೆಗೆಯಲಾಗಿತ್ತು.ಇನ್ನೂ 20 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಳೆಯ ನಡುವೆಯೂ ಹುಡುಕಾಟ ನಡೆದಿದೆ.</p>.<p>ಶುಕ್ರವಾರ ರಕ್ಷಿಸಲಾಗಿದ್ದ 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಎಂದು ಜಿಲ್ಲಾಧಿಕಾರಿ ಎಚ್.ದಿನೇಶನ್ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾನುವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ.</p>.<p>ಪೆಟ್ಟಿಮುಡಿಯ ಆಕರ್ಷಕ ಭೌಗೋಳಿಕ ಪ್ರದೇಶದ ಚಿತ್ರಣವೇ ಈಗ ಬದಲಾಗಿದ್ದು, ಕುಸಿದಿರುವ ಮಣ್ಣಿನ ನಡುವೆ ಮನೆಯ ಅವಶೇಷಗಳು ಕಾಣಿಸುತ್ತಿವೆ. ಶುಕ್ರವಾರ ಬೆಳಗಿನ ಜಾವ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾಲು ಮನೆಗಳು ಕುಸಿದಿದ್ದವು.</p>.<p>ಎನ್.ಡಿ.ಆರ್.ಎಫ್.ನ ದಕ್ಷಿಣ ಭಾರತದ ಮುಖ್ಯಸ್ಥರಾದ ರೇಖಾ ನಂಬಿಯಾರ್ ಅವರು, ‘ರಕ್ಷಣಾ ಕಾರ್ಯಗಳಿಗೆ 55 ಜನರ ತಂಡವನ್ನು ನಿಯೋಜಿಸಲಾಗಿದೆ. ನದಿ ಪಾತ್ರದಲ್ಲಿಯೂ ಹುಡುಕಾಟ ನಡೆದಿದ್ದು, ದೇಹಗಳು ಮಣ್ಣಿನಡಿ ಸಿಲುಕಿರುವ ಸಂಭವವಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>