<p><strong>ಔರಂಗಾಬಾದ್:</strong> ‘ಉದ್ಯೋಗಾವಕಾಶಗಳು ಇಲ್ಲದಿರುವಾಗ ಮೀಸಲಾತಿಯು ಉದ್ಯೋಗ ಭದ್ರತೆಯನ್ನು ಒದಗಿಸುವುದಿಲ್ಲ’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠಾ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಅವರು ಈ ರೀತಿ ಉತ್ತರಿಸಿದ್ದಾರೆ.</p>.<p>‘ಮೀಸಲಾತಿ ನೀಡಲಾಗಿದೆ ಎಂದು ಊಹಿಸೋಣ. ಆದರೆ, ಉದ್ಯೋಗ ಅವಕಾಶಗಳೇ ಇಲ್ಲ. ಬ್ಯಾಂಕಿಂಗ್ ವಲಯದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯಿಂದಾಗಿ ಉದ್ಯೋಗಾವಕಾಶಗಳು ಕ್ಷೀಣಿಸಿವೆ. ಸರ್ಕಾರದ ನೇಮಕಾತಿ ಪ್ರಕ್ರಿಯೆಗಳೂ ನಿಂತಿವೆ. ಇನ್ನೆಲ್ಲಿವೆ ಕೆಲಸಗಳು? ಎಂದು ಪ್ರಶ್ನಿಸಿದ್ದಾರೆ.</p>.<p>‘ಹಿಂದುಳಿದ ವರ್ಗಗಳಿಗಿರುವ ಮೀಸಲಾತಿ ಅಂಶವು ರಾಜಕೀಯ ಹಿತಾಸಕ್ತಿಗಾಗಿ ಬಳಕೆಯಾಗುತ್ತಿರುವುದು ಪ್ರಮುಖ ಸಮಸ್ಯೆ. ನಾನು ಹಿಂದುಳಿದವ ಎಂದು ಎಲ್ಲರೂ ಹೇಳುತ್ತಾರೆ. ಬಿಹಾರ, ಉತ್ತರಪ್ರದೇಶಗಳಲ್ಲಿ ಬ್ರಾಹ್ಮಣರು ಪ್ರಬಲರಾಗಿದ್ದು, ರಾಜಕೀಯದಲ್ಲಿ ಹಿಡಿತ ಸಾಧಿಸಿದ್ದಾರೆ. ಅಲ್ಲಿ ಅವರೂ ತಾವು ಹಿಂದುಳಿದವರು ಎಂದು ಹೇಳುತ್ತಾರೆ’</p>.<p>‘ಹಾಗಾಗಿ ಬಡವರು ಬಡವರಾಗಿಯೇ ಇದ್ದಾರೆ. ಅವರಿಗೆ ಯಾವುದೇ ಜಾತಿ, ಮತ ಅಥವಾ ಭಾಷೆ ಇಲ್ಲ. ಧರ್ಮ ಯಾವುದಾದರೂ ಸರಿ ಎಲ್ಲಾ ಸಮುದಾಯಗಳಲ್ಲಿ, ತೊಡಲು ಬಟ್ಟೆ ಇಲ್ಲದವರು, ತಿನ್ನಲು ಆಹಾರ ಇಲ್ಲದವರದ್ದೊಂದು ವರ್ಗ ಇದ್ದೇ ಇದೆ’ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಜವಾಬ್ದಾರಿಯುತ ರಾಜಕೀಯ ಪಕ್ಷಗಳು ಈ ಹೋರಾಟಕ್ಕೆತುಪ್ಪಸುರಿಯುವ ಕೆಲಸ ಮಾಡಬಾರದು ಎಂದು ಮನವಿ ಮಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೋರಾಟಗಾರರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಾಬಾದ್:</strong> ‘ಉದ್ಯೋಗಾವಕಾಶಗಳು ಇಲ್ಲದಿರುವಾಗ ಮೀಸಲಾತಿಯು ಉದ್ಯೋಗ ಭದ್ರತೆಯನ್ನು ಒದಗಿಸುವುದಿಲ್ಲ’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠಾ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಅವರು ಈ ರೀತಿ ಉತ್ತರಿಸಿದ್ದಾರೆ.</p>.<p>‘ಮೀಸಲಾತಿ ನೀಡಲಾಗಿದೆ ಎಂದು ಊಹಿಸೋಣ. ಆದರೆ, ಉದ್ಯೋಗ ಅವಕಾಶಗಳೇ ಇಲ್ಲ. ಬ್ಯಾಂಕಿಂಗ್ ವಲಯದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯಿಂದಾಗಿ ಉದ್ಯೋಗಾವಕಾಶಗಳು ಕ್ಷೀಣಿಸಿವೆ. ಸರ್ಕಾರದ ನೇಮಕಾತಿ ಪ್ರಕ್ರಿಯೆಗಳೂ ನಿಂತಿವೆ. ಇನ್ನೆಲ್ಲಿವೆ ಕೆಲಸಗಳು? ಎಂದು ಪ್ರಶ್ನಿಸಿದ್ದಾರೆ.</p>.<p>‘ಹಿಂದುಳಿದ ವರ್ಗಗಳಿಗಿರುವ ಮೀಸಲಾತಿ ಅಂಶವು ರಾಜಕೀಯ ಹಿತಾಸಕ್ತಿಗಾಗಿ ಬಳಕೆಯಾಗುತ್ತಿರುವುದು ಪ್ರಮುಖ ಸಮಸ್ಯೆ. ನಾನು ಹಿಂದುಳಿದವ ಎಂದು ಎಲ್ಲರೂ ಹೇಳುತ್ತಾರೆ. ಬಿಹಾರ, ಉತ್ತರಪ್ರದೇಶಗಳಲ್ಲಿ ಬ್ರಾಹ್ಮಣರು ಪ್ರಬಲರಾಗಿದ್ದು, ರಾಜಕೀಯದಲ್ಲಿ ಹಿಡಿತ ಸಾಧಿಸಿದ್ದಾರೆ. ಅಲ್ಲಿ ಅವರೂ ತಾವು ಹಿಂದುಳಿದವರು ಎಂದು ಹೇಳುತ್ತಾರೆ’</p>.<p>‘ಹಾಗಾಗಿ ಬಡವರು ಬಡವರಾಗಿಯೇ ಇದ್ದಾರೆ. ಅವರಿಗೆ ಯಾವುದೇ ಜಾತಿ, ಮತ ಅಥವಾ ಭಾಷೆ ಇಲ್ಲ. ಧರ್ಮ ಯಾವುದಾದರೂ ಸರಿ ಎಲ್ಲಾ ಸಮುದಾಯಗಳಲ್ಲಿ, ತೊಡಲು ಬಟ್ಟೆ ಇಲ್ಲದವರು, ತಿನ್ನಲು ಆಹಾರ ಇಲ್ಲದವರದ್ದೊಂದು ವರ್ಗ ಇದ್ದೇ ಇದೆ’ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಜವಾಬ್ದಾರಿಯುತ ರಾಜಕೀಯ ಪಕ್ಷಗಳು ಈ ಹೋರಾಟಕ್ಕೆತುಪ್ಪಸುರಿಯುವ ಕೆಲಸ ಮಾಡಬಾರದು ಎಂದು ಮನವಿ ಮಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೋರಾಟಗಾರರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>