<p><strong>ನವದೆಹಲಿ:</strong> ದೆಹಲಿ ಪೊಲೀಸ್ ಇಲಾಖೆಯಲ್ಲಿನ ಪುರುಷ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ನಿವೃತ್ತ ಅಗ್ನಿವೀರರಿಗೆ ಶೇ.20ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸೋಮವಾರ ಹೇಳಿದ್ದಾರೆ.</p><p>ನಿವೃತ್ತ ಅಗ್ನಿವೀರರಿಗೆ ಪೊಲೀಸ್ ನೇಮಕಾತಿಯ ವೇಳೆ ದೈಹಿಕ ಪರೀಕ್ಷೆಯಿಂದ ಕೂಡ ವಿನಾಯಿತಿ ನೀಡಲಾಗುತ್ತದೆ. ಅವರಿಗೆ ವಯಸ್ಸಿನ ಮಿತಿಯನ್ನು 3 ವರ್ಷ ಸಡಿಲಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.</p><p>ನಿವೃತ್ತ ಅಗ್ನಿವೀರರಿಗೆ ಅವಕಾಶ ನೀಡುವ ಉದ್ದೇಶದಿಂದ ದೆಹಲಿ ಪೊಲೀಸ್ ನೇಮಕಾತಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p><p>ದೊಡ್ಡ ಸಂಖ್ಯೆಯ ನಿವೃತ್ತ ಅಗ್ನಿವೀರರು, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹರಿದ್ದಾರೆ. ಮೊದಲ ಬ್ಯಾಚ್ನ ಅಗ್ನಿವೀರರಿಗೆ ವಯಸ್ಸಿನ ಮಿತಿಯನ್ನು 5 ವರ್ಷ ಸಡಿಲಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಸೇನೆಯಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಗ್ನಿವೀರರಿಗೆ ದೇಶ ಸೇವೆಯ ನಂತರ ಸಮಾಜ ಸೇವೆ ಮಾಡಲು ಅವಕಾಶ ನೀಡಲಾಗಿದೆ. ಅವರ ಅನುಭವ ಮತ್ತು ಪೂರ್ವ ತರಬೇತಿಯು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ. </p><p>ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 42,451 ಹುದ್ದೆಗಳು ಖಾಲಿಯಿವೆ. ನೇಮಕಾತಿಗೆ 18 ರಿಂದ 25 ವರ್ಷಗಳ ವಯಸ್ಸಿನ ಮಿತಿಯಿದೆ ಎಂದು ತಿಳಿಸಿದ್ದಾರೆ.</p><p>ಭಾರತೀಯ ಸೇನೆಯಲ್ಲಿ ಯುವಕರಿಗೆ ಅವಕಾಶ ನೀಡುವ ಉದ್ದೇಶದಿಂದ 2022ರಲ್ಲಿ ಅಗ್ನಿವೀರ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಪೊಲೀಸ್ ಇಲಾಖೆಯಲ್ಲಿನ ಪುರುಷ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ನಿವೃತ್ತ ಅಗ್ನಿವೀರರಿಗೆ ಶೇ.20ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸೋಮವಾರ ಹೇಳಿದ್ದಾರೆ.</p><p>ನಿವೃತ್ತ ಅಗ್ನಿವೀರರಿಗೆ ಪೊಲೀಸ್ ನೇಮಕಾತಿಯ ವೇಳೆ ದೈಹಿಕ ಪರೀಕ್ಷೆಯಿಂದ ಕೂಡ ವಿನಾಯಿತಿ ನೀಡಲಾಗುತ್ತದೆ. ಅವರಿಗೆ ವಯಸ್ಸಿನ ಮಿತಿಯನ್ನು 3 ವರ್ಷ ಸಡಿಲಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.</p><p>ನಿವೃತ್ತ ಅಗ್ನಿವೀರರಿಗೆ ಅವಕಾಶ ನೀಡುವ ಉದ್ದೇಶದಿಂದ ದೆಹಲಿ ಪೊಲೀಸ್ ನೇಮಕಾತಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p><p>ದೊಡ್ಡ ಸಂಖ್ಯೆಯ ನಿವೃತ್ತ ಅಗ್ನಿವೀರರು, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹರಿದ್ದಾರೆ. ಮೊದಲ ಬ್ಯಾಚ್ನ ಅಗ್ನಿವೀರರಿಗೆ ವಯಸ್ಸಿನ ಮಿತಿಯನ್ನು 5 ವರ್ಷ ಸಡಿಲಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಸೇನೆಯಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಗ್ನಿವೀರರಿಗೆ ದೇಶ ಸೇವೆಯ ನಂತರ ಸಮಾಜ ಸೇವೆ ಮಾಡಲು ಅವಕಾಶ ನೀಡಲಾಗಿದೆ. ಅವರ ಅನುಭವ ಮತ್ತು ಪೂರ್ವ ತರಬೇತಿಯು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ. </p><p>ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 42,451 ಹುದ್ದೆಗಳು ಖಾಲಿಯಿವೆ. ನೇಮಕಾತಿಗೆ 18 ರಿಂದ 25 ವರ್ಷಗಳ ವಯಸ್ಸಿನ ಮಿತಿಯಿದೆ ಎಂದು ತಿಳಿಸಿದ್ದಾರೆ.</p><p>ಭಾರತೀಯ ಸೇನೆಯಲ್ಲಿ ಯುವಕರಿಗೆ ಅವಕಾಶ ನೀಡುವ ಉದ್ದೇಶದಿಂದ 2022ರಲ್ಲಿ ಅಗ್ನಿವೀರ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>