<p><strong>ನವದೆಹಲಿ:</strong>ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ವರ್ಗಗಳನ್ನು ಗುರುತಿಸುವ ಮಾನದಂಡ ನಿಗದಿ ಪಡಿಸಲು ರಾಜ್ಯಗಳಿಗೆ ಮುಕ್ತ ಅವಕಾಶವಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.</p>.<p>ಸಂವಿಧಾನದ 124ನೇ ತಿದ್ದುಪಡಿ ಮಸೂದೆ–2019 ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ, ‘ಮೀಸಲಾತಿಗೆ ಮಾನದಂಡ ನಿಗದಿಪಡಿಸಲು ಸಂವಿಧಾನವು ರಾಜ್ಯಗಳಿಗೆ ಅಧಿಕಾರ ನೀಡಿದೆ’ ಎಂದು ಅವರು ಹೇಳಿದರು.</p>.<p>ಈ ಮೀಸಲಾತಿ ಪಡೆಯಲು ₹8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರಬೇಕು. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರಬಾರದು ಎಂದು ಸೋಮವಾರ ನಡೆದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ನಿಗದಿಪಡಿಸಲಾಗಿತ್ತು.</p>.<p><strong><a href="https://www.prajavani.net/stories/national/rajya-sabha-606299.html" target="_blank"><span style="color:#B22222;">ಇದನ್ನೂ ಓದಿ:</span>ಮೀಸಲು: ರಾಜ್ಯಸಭೆಯಲ್ಲಿ ಗದ್ದ</a></strong></p>.<p>ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ₹5 ಲಕ್ಷ ವಾರ್ಷಿಕ ಆದಾಯ ಮೀರಿರಬಾರದು ಎಂದು ರಾಜ್ಯಗಳು ಮಾನದಂಡ ರೂಪಿಸಬಹುದು. ಈ ಮೀಸಲಾತಿಯು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಕ್ಕೆ ಅನ್ವಯಿಸುತ್ತದೆ ಎಂದು ಪ್ರಸಾದ್ ಹೇಳಿದರು.</p>.<p>ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮಸೂದೆ ಮಂಡಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದವು.‘ಹೌದು ನಮ್ಮಿಂದ ತಡವಾಗಿರಬಹುದು, ಆದರೆ,ಈ ಮಸೂದೆ ಮಂಡಿಸಲು ನಾವು ಧೈರ್ಯ ಮಾಡಿದ್ದೇವೆ’ ಎಂದು ಸಚಿವರು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿ ವರ್ಗಗಳನ್ನು ಗುರುತಿಸುವ ಮಾನದಂಡ ನಿಗದಿ ಪಡಿಸಲು ರಾಜ್ಯಗಳಿಗೆ ಮುಕ್ತ ಅವಕಾಶವಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.</p>.<p>ಸಂವಿಧಾನದ 124ನೇ ತಿದ್ದುಪಡಿ ಮಸೂದೆ–2019 ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ, ‘ಮೀಸಲಾತಿಗೆ ಮಾನದಂಡ ನಿಗದಿಪಡಿಸಲು ಸಂವಿಧಾನವು ರಾಜ್ಯಗಳಿಗೆ ಅಧಿಕಾರ ನೀಡಿದೆ’ ಎಂದು ಅವರು ಹೇಳಿದರು.</p>.<p>ಈ ಮೀಸಲಾತಿ ಪಡೆಯಲು ₹8 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರಬೇಕು. ಐದು ಎಕರೆಗಿಂತ ಹೆಚ್ಚು ಭೂಮಿ ಹೊಂದಿರಬಾರದು ಎಂದು ಸೋಮವಾರ ನಡೆದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ನಿಗದಿಪಡಿಸಲಾಗಿತ್ತು.</p>.<p><strong><a href="https://www.prajavani.net/stories/national/rajya-sabha-606299.html" target="_blank"><span style="color:#B22222;">ಇದನ್ನೂ ಓದಿ:</span>ಮೀಸಲು: ರಾಜ್ಯಸಭೆಯಲ್ಲಿ ಗದ್ದ</a></strong></p>.<p>ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ₹5 ಲಕ್ಷ ವಾರ್ಷಿಕ ಆದಾಯ ಮೀರಿರಬಾರದು ಎಂದು ರಾಜ್ಯಗಳು ಮಾನದಂಡ ರೂಪಿಸಬಹುದು. ಈ ಮೀಸಲಾತಿಯು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಕ್ಕೆ ಅನ್ವಯಿಸುತ್ತದೆ ಎಂದು ಪ್ರಸಾದ್ ಹೇಳಿದರು.</p>.<p>ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮಸೂದೆ ಮಂಡಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದವು.‘ಹೌದು ನಮ್ಮಿಂದ ತಡವಾಗಿರಬಹುದು, ಆದರೆ,ಈ ಮಸೂದೆ ಮಂಡಿಸಲು ನಾವು ಧೈರ್ಯ ಮಾಡಿದ್ದೇವೆ’ ಎಂದು ಸಚಿವರು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>