<p><strong>ಮುಂಬೈ:</strong> ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶನಿವಾರ ಉನ್ನತಮಟ್ಟದ ಸಮಿತಿ ಸಭೆ ನಡೆಸಿದರು.</p>.<p>ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಸಭೆ ನಿರ್ಧರಿಸಿತು.</p>.<p>ಗಡಿ ವಿವಾದ ಕುರಿತಾದ ವಿವಿಧ ಕಾನೂನು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎರಡು ವರ್ಷಗಳ ಬಳಿಕ ಮೊದಲ ಬಾರಿ ಗಡಿ ವಿವಾದ ಕುರಿತು ಸಭೆ ನಡೆಸಲಾಗಿದೆ.</p>.<p>ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರಿಗೆ ನೆರವಾಗಲು ಇನ್ನೊಬ್ಬ ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಫಡಣವೀಸ್ ತಿಳಿಸಿದ್ದಾರೆ.</p>.<p>ಹೊಸ ವಕೀಲರ ನೇಮಕದ ಬಳಿಕ ದೆಹಲಿಯಲ್ಲಿ ಸಭೆ ನಡೆಸಿ ಮುಂದಿನ ಕಾನೂನು ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>‘ಹಲವು ವಿಷಯಗಳ ಕುರಿತು ಸಕಾರಾತ್ಮಕವಾದ ಚರ್ಚೆ ನಡೆದಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ನೀಡುವ ಶೇಕಡ 16ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೂ ಕಲ್ಪಿಸಬೇಕು ಎಂದು ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಶನಿವಾರ ಉನ್ನತಮಟ್ಟದ ಸಮಿತಿ ಸಭೆ ನಡೆಸಿದರು.</p>.<p>ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಸಭೆ ನಿರ್ಧರಿಸಿತು.</p>.<p>ಗಡಿ ವಿವಾದ ಕುರಿತಾದ ವಿವಿಧ ಕಾನೂನು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎರಡು ವರ್ಷಗಳ ಬಳಿಕ ಮೊದಲ ಬಾರಿ ಗಡಿ ವಿವಾದ ಕುರಿತು ಸಭೆ ನಡೆಸಲಾಗಿದೆ.</p>.<p>ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಅವರಿಗೆ ನೆರವಾಗಲು ಇನ್ನೊಬ್ಬ ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಫಡಣವೀಸ್ ತಿಳಿಸಿದ್ದಾರೆ.</p>.<p>ಹೊಸ ವಕೀಲರ ನೇಮಕದ ಬಳಿಕ ದೆಹಲಿಯಲ್ಲಿ ಸಭೆ ನಡೆಸಿ ಮುಂದಿನ ಕಾನೂನು ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>‘ಹಲವು ವಿಷಯಗಳ ಕುರಿತು ಸಕಾರಾತ್ಮಕವಾದ ಚರ್ಚೆ ನಡೆದಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ನೀಡುವ ಶೇಕಡ 16ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ 865 ಗ್ರಾಮಗಳ ಯುವಕರಿಗೂ ಕಲ್ಪಿಸಬೇಕು ಎಂದು ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>