<p><strong>ಅಮರಾವತಿ(ಆಂಧ್ರಪ್ರದೇಶ):</strong> ‘ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ನೀಡುವ ವೇಳೆ ಕೆನೆಪದರ ನೀತಿಯನ್ನು ಅನ್ವಯಿಸಬೇಕು. ಇದನ್ನು ಈಗಲೂ ನಾನು ಬೆಂಬಲಿಸುತ್ತೇನೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಭಾನುವಾರ ಹೇಳಿದ್ದಾರೆ.</p>.<p>‘ಮೀಸಲಾತಿ ವಿಚಾರದಲ್ಲಿ, ಬಡ ಕೃಷಿ ಕೂಲಿಕಾರ್ಮಿಕನ ಮಕ್ಕಳು ಹಾಗೂ ಐಎಎಸ್ ಅಧಿಕಾರಿಯೊಬ್ಬನ ಮಕ್ಕಳನ್ನು ಸಮಾನವಾಗಿ ಕಾಣಲು ಸಾಧ್ಯ ಇಲ್ಲ’ ಎಂದು ಪ್ರತಿಪಾದಿಸಿದ್ದಾರೆ.</p>.<p>ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಇಂದ್ರಾ ಸಾಹ್ನಿ ವರ್ಸಸ್ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಉಲ್ಲೇಖಿಸಲಾದ ಕೆನೆಪದರ ನೀತಿಯನ್ನು ಪ್ರಸ್ತಾಪಿಸಿ, ತಮ್ಮ ವಾದವನ್ನು ಸಮರ್ಥಿಸಿಕೊಂಡರು.</p>.<p>‘ಈ ಪ್ರಕರಣದಲ್ಲಿ ಹೇಳಿರುವಂತೆ, ಒಬಿಸಿಗಳಿಗೆ ಮೀಸಲಾತಿ ನೀಡುವಾಗ ಕೆನೆಪದರ ನೀತಿಯನ್ನು ಅನ್ವಯಿಸಲಾಗುತ್ತಿದೆ. ಅದೇ ರೀತಿ ಪರಿಶಿಷ್ಟ ಜಾತಿಗಳಿಗೆ ನೀಡುವ ಮೀಸಲಾತಿಯಲ್ಲಿ ಕೂಡ ಈ ನೀತಿಯನ್ನು ಅನ್ವಯಿಸಬೇಕು. ಈ ವಿಚಾರವಾಗಿ ನಾನು ನೀಡಿದ ತೀರ್ಪಿಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು’ ಎಂದು ಸಿಜೆಐ ಗವಾಯಿ ಹೇಳಿದರು.</p>.<p>‘ಭಾರತದ ಸಂವಿಧಾನ ಸ್ಥಿರವಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಯಾವಾಗಲೂ ಈ ಮಾತನ್ನು ಹೇಳುತ್ತಿದ್ದರು. ಸಂವಿಧಾನವು ವಿಕಾಸ ಹೊಂದುತ್ತಿರುವ, ಸುವ್ಯವಸ್ಥಿತವಾದ ಜೀವಂತ ದಾಖಲೆಯಾಗಿದೆ. ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕೆ 368ನೇ ವಿಧಿಯಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>‘ನಿವೃತ್ತಿಗೂ ಮುನ್ನ ನಾನು ಪಾಲ್ಗೊಳ್ಳುತ್ತಿರುವ ಕೊನೆಯ ಕಾರ್ಯಕ್ರಮ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆಯುತ್ತಿದೆ. ನಾನು ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಪಾಲ್ಗೊಂಡಿದ್ದ ಮೊದಲ ಕಾರ್ಯಕ್ರಮ ನನ್ನ ಸ್ವಂತ ಊರಾದ, ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿತ್ತು’ ಎಂದು ಹೇಳಿದರು.</p>.<p><strong>ಈ ಹಿಂದೆಯೂ ಹೇಳಿದ್ದ ಸಿಜೆಐ:</strong> ‘ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ಮೀಸಲಾತಿ ನೀಡುವಾಗ ಕೆನೆಪದರು ಗುರುತಿಸುವುದಕ್ಕೆ ಸಂಬಂಧಿಸಿ ನೀತಿಯೊಂದರನ್ನು ರೂಪಿಸಬೇಕು. ಆ ಮೂಲಕ ಇದರ ವ್ಯಾಪ್ತಿಗೆ ಒಳಪಡುವವರಿಗೆ ಮೀಸಲಾತಿಯನ್ನು ನಿರಾಕರಿಸಬೇಕು ಎಂದು ಸಿಜೆಐ ಗವಾಯಿ ಅವರು ಕಳೆದ ವರ್ಷ ಹೇಳಿದ್ದರು.</p>.<div><blockquote>ದೇಶದಲ್ಲಿ ಸಮಾನತೆ ಹಾಗೂ ಮಹಿಳಾ ಸಬಲೀಕರಣ ಸಾಕಾರಗೊಳ್ಳುತ್ತಿದೆ. ಈ ವಿಚಾರದಲ್ಲಿ ತೋರಲಾಗುತ್ತಿರುವ ತಾರತಮ್ಯಕ್ಕೆ ಖಂಡನೆಯೂ ವ್ಯಕ್ತವಾಗುತ್ತಿದೆ.</blockquote><span class="attribution">ಬಿ.ಆರ್. ಗವಾಯಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ(ಆಂಧ್ರಪ್ರದೇಶ):</strong> ‘ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ನೀಡುವ ವೇಳೆ ಕೆನೆಪದರ ನೀತಿಯನ್ನು ಅನ್ವಯಿಸಬೇಕು. ಇದನ್ನು ಈಗಲೂ ನಾನು ಬೆಂಬಲಿಸುತ್ತೇನೆ’ ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಭಾನುವಾರ ಹೇಳಿದ್ದಾರೆ.</p>.<p>‘ಮೀಸಲಾತಿ ವಿಚಾರದಲ್ಲಿ, ಬಡ ಕೃಷಿ ಕೂಲಿಕಾರ್ಮಿಕನ ಮಕ್ಕಳು ಹಾಗೂ ಐಎಎಸ್ ಅಧಿಕಾರಿಯೊಬ್ಬನ ಮಕ್ಕಳನ್ನು ಸಮಾನವಾಗಿ ಕಾಣಲು ಸಾಧ್ಯ ಇಲ್ಲ’ ಎಂದು ಪ್ರತಿಪಾದಿಸಿದ್ದಾರೆ.</p>.<p>ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಇಂದ್ರಾ ಸಾಹ್ನಿ ವರ್ಸಸ್ ಕೇಂದ್ರ ಸರ್ಕಾರ ಪ್ರಕರಣದಲ್ಲಿ ಉಲ್ಲೇಖಿಸಲಾದ ಕೆನೆಪದರ ನೀತಿಯನ್ನು ಪ್ರಸ್ತಾಪಿಸಿ, ತಮ್ಮ ವಾದವನ್ನು ಸಮರ್ಥಿಸಿಕೊಂಡರು.</p>.<p>‘ಈ ಪ್ರಕರಣದಲ್ಲಿ ಹೇಳಿರುವಂತೆ, ಒಬಿಸಿಗಳಿಗೆ ಮೀಸಲಾತಿ ನೀಡುವಾಗ ಕೆನೆಪದರ ನೀತಿಯನ್ನು ಅನ್ವಯಿಸಲಾಗುತ್ತಿದೆ. ಅದೇ ರೀತಿ ಪರಿಶಿಷ್ಟ ಜಾತಿಗಳಿಗೆ ನೀಡುವ ಮೀಸಲಾತಿಯಲ್ಲಿ ಕೂಡ ಈ ನೀತಿಯನ್ನು ಅನ್ವಯಿಸಬೇಕು. ಈ ವಿಚಾರವಾಗಿ ನಾನು ನೀಡಿದ ತೀರ್ಪಿಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು’ ಎಂದು ಸಿಜೆಐ ಗವಾಯಿ ಹೇಳಿದರು.</p>.<p>‘ಭಾರತದ ಸಂವಿಧಾನ ಸ್ಥಿರವಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಯಾವಾಗಲೂ ಈ ಮಾತನ್ನು ಹೇಳುತ್ತಿದ್ದರು. ಸಂವಿಧಾನವು ವಿಕಾಸ ಹೊಂದುತ್ತಿರುವ, ಸುವ್ಯವಸ್ಥಿತವಾದ ಜೀವಂತ ದಾಖಲೆಯಾಗಿದೆ. ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕೆ 368ನೇ ವಿಧಿಯಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>‘ನಿವೃತ್ತಿಗೂ ಮುನ್ನ ನಾನು ಪಾಲ್ಗೊಳ್ಳುತ್ತಿರುವ ಕೊನೆಯ ಕಾರ್ಯಕ್ರಮ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆಯುತ್ತಿದೆ. ನಾನು ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಪಾಲ್ಗೊಂಡಿದ್ದ ಮೊದಲ ಕಾರ್ಯಕ್ರಮ ನನ್ನ ಸ್ವಂತ ಊರಾದ, ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿತ್ತು’ ಎಂದು ಹೇಳಿದರು.</p>.<p><strong>ಈ ಹಿಂದೆಯೂ ಹೇಳಿದ್ದ ಸಿಜೆಐ:</strong> ‘ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ಮೀಸಲಾತಿ ನೀಡುವಾಗ ಕೆನೆಪದರು ಗುರುತಿಸುವುದಕ್ಕೆ ಸಂಬಂಧಿಸಿ ನೀತಿಯೊಂದರನ್ನು ರೂಪಿಸಬೇಕು. ಆ ಮೂಲಕ ಇದರ ವ್ಯಾಪ್ತಿಗೆ ಒಳಪಡುವವರಿಗೆ ಮೀಸಲಾತಿಯನ್ನು ನಿರಾಕರಿಸಬೇಕು ಎಂದು ಸಿಜೆಐ ಗವಾಯಿ ಅವರು ಕಳೆದ ವರ್ಷ ಹೇಳಿದ್ದರು.</p>.<div><blockquote>ದೇಶದಲ್ಲಿ ಸಮಾನತೆ ಹಾಗೂ ಮಹಿಳಾ ಸಬಲೀಕರಣ ಸಾಕಾರಗೊಳ್ಳುತ್ತಿದೆ. ಈ ವಿಚಾರದಲ್ಲಿ ತೋರಲಾಗುತ್ತಿರುವ ತಾರತಮ್ಯಕ್ಕೆ ಖಂಡನೆಯೂ ವ್ಯಕ್ತವಾಗುತ್ತಿದೆ.</blockquote><span class="attribution">ಬಿ.ಆರ್. ಗವಾಯಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>