<p><strong>ನವದೆಹಲಿ:</strong> ‘ಎಲ್ಲ ವರ್ಗಗಳ ಜನತೆ ಸರ್ಕಾರಿ ನೌಕರಿ ಪಡೆಯಲು ಸಮಾನ ಅವಕಾಶ ದೊರೆಯದ್ದರಿಂದ, ವಿಶೇ ಷವಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೀಸಲಾತಿ ಪದ್ಧತಿ ಜಾರಿಗೊಳಿಸಲಾಗಿದೆ. ಬಡ್ತಿ ನೀಡುವಾಗಲೂ ಇದೇ ಮಾದರಿ ಅನುಸರಿಸಲಾಗುತ್ತಿದೆ’ ಎಂದು ಹಿರಿಯ ವಕೀಲ ದಿನೇಶ್ ದ್ವಿವೇದಿ ಹೇಳಿದರು.</p>.<p>‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಸಲ್ಲಿಸಿರುವ ಮೇಲ್ಮನವಿಯ ಮುಂದುವರಿದ ವಿಚಾರಣೆ ವೇಳೆ ಅವರು ಪರಿಶಿಷ್ಟ ಜಾತ,ಪಂಗಡಗಳ ನೌಕರರ ಪರ ವಾದಿಸಿದರು.</p>.<p>ತತ್ಪರಿಣಾಮ ಜ್ಯೇಷ್ಠತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಕ್ಯಾಚ್ ಅಪ್’ ನಿಯಮ ಅಳವಡಿಸಿದೆ. ಇದಕ್ಕೆ ಸಂವಿಧಾನದ ಮಾನ್ಯತೆಯನ್ನು ಕಲ್ಪಿಸಲೆಂದೇ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಅವರು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠಕ್ಕೆ ತಿಳಿಸಿದರು.</p>.<p>‘ಕ್ಯಾಚ್ ಅಪ್’ ನಿಯಮದ ಉದ್ದೇಶವು ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವುದೇ ಆಗಿದೆ ಎಂದು ಅವರು ಪ್ರತಿಪಾದಿಸಿದರು. ಪ್ರಕರ ಣದ ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಎಲ್ಲ ವರ್ಗಗಳ ಜನತೆ ಸರ್ಕಾರಿ ನೌಕರಿ ಪಡೆಯಲು ಸಮಾನ ಅವಕಾಶ ದೊರೆಯದ್ದರಿಂದ, ವಿಶೇ ಷವಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೀಸಲಾತಿ ಪದ್ಧತಿ ಜಾರಿಗೊಳಿಸಲಾಗಿದೆ. ಬಡ್ತಿ ನೀಡುವಾಗಲೂ ಇದೇ ಮಾದರಿ ಅನುಸರಿಸಲಾಗುತ್ತಿದೆ’ ಎಂದು ಹಿರಿಯ ವಕೀಲ ದಿನೇಶ್ ದ್ವಿವೇದಿ ಹೇಳಿದರು.</p>.<p>‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಸಲ್ಲಿಸಿರುವ ಮೇಲ್ಮನವಿಯ ಮುಂದುವರಿದ ವಿಚಾರಣೆ ವೇಳೆ ಅವರು ಪರಿಶಿಷ್ಟ ಜಾತ,ಪಂಗಡಗಳ ನೌಕರರ ಪರ ವಾದಿಸಿದರು.</p>.<p>ತತ್ಪರಿಣಾಮ ಜ್ಯೇಷ್ಠತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಕ್ಯಾಚ್ ಅಪ್’ ನಿಯಮ ಅಳವಡಿಸಿದೆ. ಇದಕ್ಕೆ ಸಂವಿಧಾನದ ಮಾನ್ಯತೆಯನ್ನು ಕಲ್ಪಿಸಲೆಂದೇ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಅವರು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠಕ್ಕೆ ತಿಳಿಸಿದರು.</p>.<p>‘ಕ್ಯಾಚ್ ಅಪ್’ ನಿಯಮದ ಉದ್ದೇಶವು ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವುದೇ ಆಗಿದೆ ಎಂದು ಅವರು ಪ್ರತಿಪಾದಿಸಿದರು. ಪ್ರಕರ ಣದ ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>