ಜೈಪುರ: ಲೋಕಸಭಾ ಚುನಾವಣೆಯ ವೇಳೆ ಮೀಸಲಾತಿಗೆ ಸಂಬಂಧಿಸಿ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವುದರ ನಡುವೆಯೇ ರಾಜಸ್ಥಾನದ ಸಚಿವ ಅವಿನಾಶ್ ಗೆಹಲೋತ್ ಅವರು, ‘ರಾಜ್ಯದಲ್ಲಿ ಒಬಿಸಿ ಪ್ರವರ್ಗದ ಅಡಿಯಲ್ಲಿ ಕೆಲವು ಮುಸ್ಲಿಂ ಗುಂಪುಗಳಿಗೆ ಮೀಸಲಾತಿ ನೀಡಿರುವುದನ್ನು ಪರಿಶೀಲಿಸಲಾಗುವುದು’ ಎಂದಿದ್ದಾರೆ.