<p><strong>ನವದೆಹಲಿ:</strong> ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) 26ನೇ ಗವರ್ನರ್ ಆಗಿ ಬುಧವಾರ ಸಂಜಯ್ ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಿದರು.</p><p>ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ದೇಶದ ಜನರು ಏನನ್ನು ಎದುರು ನೋಡುತ್ತಿದ್ದಾರೆ ಎಂಬ ಸ್ಪಷ್ಟ ಅರಿವಿದೆ. ಅವರ ನಂಬಿಕೆ ಬಗ್ಗೆಯೂ ತಿಳಿದಿದೆ. ಯಾವುದು ಆರ್ಥಿಕ ಬೆಳವಣಿಗೆ, ಯಾವುದು ಸ್ಥಿರ ಹಾಗೂ ನಿಶ್ಚಿತ ನೀತಿ ಎನ್ನುವ ತಿಳಿವಳಿಕೆಯಿದೆ. ಆ ಗುರಿ ಸಾಧನೆಯ ಹಾದಿಯಲ್ಲಿ ಜನರ ಹಿತಾಸಕ್ತಿ ಕಾಪಾಡಲು ಒತ್ತು ನೀಡುತ್ತೇನೆ’ ಎಂದು ಭರವಸೆ ನೀಡಿದರು.</p><p>‘ಆರ್ಥಿಕ ಸ್ಥಿರತೆಗೆ ಆರ್ಬಿಐ ಒತ್ತು ನೀಡಿದೆ. ಇದಕ್ಕೆ ಸಂಬಂಧಿಸಿದ ನಿಲುವುಗಳನ್ನು ಮುಂದುವರಿಸಲಾಗುವುದು. ಪ್ರಸಕ್ತ ಜಾಗತಿಕ ಆರ್ಥಿಕತೆ ಮತ್ತು ಬಿಕ್ಕಟ್ಟಿನ ಬಗ್ಗೆ ಜಾಗರೂಕವಾಗಿದ್ದೇವೆ. ಬಿಕ್ಕಟ್ಟಿನಿಂದ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದ್ದೇವೆ’ ಎಂದು ಹೇಳಿದರು.</p><p>‘ಸೆಬಿ, ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಸೇರಿ ಎಲ್ಲಾ ಹಣಕಾಸು ಸಂಸ್ಥೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಟ್ಟಿಗೆ ನಿರಂತರವಾಗಿ ಸಂವಹನ ನಡೆಸಲಾಗುವುದು. ಆರ್ಬಿಐನ ಪರಂಪರೆಯನ್ನು ಮುಂದುವರಿಸುತ್ತೇನೆ’ ಎಂದು ಹೇಳಿದರು.</p><p>‘ನಾವು ಎಲ್ಲದರ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿಲ್ಲ. ಹಾಗಾಗಿ, ಎಲ್ಲಾ ವಲಯಗಳ ಪ್ರಮುಖರ ಜೊತೆಗೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p><p>ಈಗಾಗಲೇ, ಆರ್ಥಿಕ ಸೇರ್ಪಡೆಗೆ ಸಂಬಂಧಿಸಿದಂತೆ ಆರ್ಬಿಐ ಹಲವು ಕ್ರಮಕೈಗೊಂಡಿದೆ. ಇದನ್ನು ಮುಂದುವರಿಸಲು ವ್ಯಾಪಕವಾಗಿ ತಂತ್ರಜ್ಞಾನದ ನೆರವು ಪಡೆಯಲಾಗುವುದು’ ಎಂದು ತಿಳಿಸಿದರು.</p>.<p><strong>ನೂತನ ಗವರ್ನರ್ಗೆ ಸವಾಲುಗಳೇನು?</strong> </p><p>ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರ ಪ್ರಕಾರ ದೇಶದ ಆರ್ಥಿಕತೆ ಬೆಳವಣಿಗೆ ಮತ್ತು ಚಿಲ್ಲರೆ ಹಣದುಬ್ಬರದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಿದೆ. ಇಂತಹ ಸಂಧಿಕಾಲದಲ್ಲಿ ರಾಜಸ್ಥಾನ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಮಲ್ಹೋತ್ರಾ ಅವರು ಆರ್ಬಿಐನ ಸಾರಥ್ಯವಹಿಸಿದ್ದಾರೆ. </p><p> ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎರಡು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಅಕ್ಟೋಬರ್ನಲ್ಲಿ ಚಿಲ್ಲರೆ ಹಣದುಬ್ಬರವು ಶೇ 6.21ರಷ್ಟು ದಾಖಲಾಗಿದೆ. ಇದು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಶೇ 6ರ ಗುರಿಗಿಂತಲೂ ಹೆಚ್ಚಿದೆ. ಈ ನಡುವೆಯೇ ದಾಸ್ ಅಧ್ಯಕ್ಷತೆಯ ಹಣಕಾಸು ನೀತಿ ಸಮಿತಿ ಸಭೆಯು (ಎಂಪಿಸಿ) ಸತತ 11 ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಅಲ್ಲದೆ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಕನಿಷ್ಠಮಟ್ಟಕ್ಕೆ ಕುಸಿದಿದೆ. </p><p>ಇವುಗಳನ್ನು ಸಮರ್ಥವಾಗಿ ನಿಭಾಯಿಸುವ ಸವಾಲು ಮಲ್ಹೋತ್ರಾ ಅವರ ಮುಂದಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ಎಂಪಿಸಿ ಸಭೆಯಲ್ಲಿ ರೆಪೊ ದರ ಕಡಿತಗೊಳಿಸಬಹುದು ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಮಲ್ಹೋತ್ರಾ ಅವರ ನೇಮಕವು ಈ ಬಗ್ಗೆ ಮತ್ತಷ್ಟು ಆಶಾಭಾವ ಮೂಡಿಸಿದೆ ಎಂದು ಹೇಳಲಾಗಿದೆ.</p>.RBI: ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ 26ನೇ ಗವರ್ನರ್.ಜಿಡಿಪಿ ಕುಸಿತಕ್ಕೆ ರೆಪೊ ದರ ಯಥಾಸ್ಥಿತಿ ಕಾರಣವಲ್ಲ: ಶಕ್ತಿಕಾಂತ ದಾಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) 26ನೇ ಗವರ್ನರ್ ಆಗಿ ಬುಧವಾರ ಸಂಜಯ್ ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಿದರು.</p><p>ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ದೇಶದ ಜನರು ಏನನ್ನು ಎದುರು ನೋಡುತ್ತಿದ್ದಾರೆ ಎಂಬ ಸ್ಪಷ್ಟ ಅರಿವಿದೆ. ಅವರ ನಂಬಿಕೆ ಬಗ್ಗೆಯೂ ತಿಳಿದಿದೆ. ಯಾವುದು ಆರ್ಥಿಕ ಬೆಳವಣಿಗೆ, ಯಾವುದು ಸ್ಥಿರ ಹಾಗೂ ನಿಶ್ಚಿತ ನೀತಿ ಎನ್ನುವ ತಿಳಿವಳಿಕೆಯಿದೆ. ಆ ಗುರಿ ಸಾಧನೆಯ ಹಾದಿಯಲ್ಲಿ ಜನರ ಹಿತಾಸಕ್ತಿ ಕಾಪಾಡಲು ಒತ್ತು ನೀಡುತ್ತೇನೆ’ ಎಂದು ಭರವಸೆ ನೀಡಿದರು.</p><p>‘ಆರ್ಥಿಕ ಸ್ಥಿರತೆಗೆ ಆರ್ಬಿಐ ಒತ್ತು ನೀಡಿದೆ. ಇದಕ್ಕೆ ಸಂಬಂಧಿಸಿದ ನಿಲುವುಗಳನ್ನು ಮುಂದುವರಿಸಲಾಗುವುದು. ಪ್ರಸಕ್ತ ಜಾಗತಿಕ ಆರ್ಥಿಕತೆ ಮತ್ತು ಬಿಕ್ಕಟ್ಟಿನ ಬಗ್ಗೆ ಜಾಗರೂಕವಾಗಿದ್ದೇವೆ. ಬಿಕ್ಕಟ್ಟಿನಿಂದ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದ್ದೇವೆ’ ಎಂದು ಹೇಳಿದರು.</p><p>‘ಸೆಬಿ, ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಸೇರಿ ಎಲ್ಲಾ ಹಣಕಾಸು ಸಂಸ್ಥೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಟ್ಟಿಗೆ ನಿರಂತರವಾಗಿ ಸಂವಹನ ನಡೆಸಲಾಗುವುದು. ಆರ್ಬಿಐನ ಪರಂಪರೆಯನ್ನು ಮುಂದುವರಿಸುತ್ತೇನೆ’ ಎಂದು ಹೇಳಿದರು.</p><p>‘ನಾವು ಎಲ್ಲದರ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿಲ್ಲ. ಹಾಗಾಗಿ, ಎಲ್ಲಾ ವಲಯಗಳ ಪ್ರಮುಖರ ಜೊತೆಗೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p><p>ಈಗಾಗಲೇ, ಆರ್ಥಿಕ ಸೇರ್ಪಡೆಗೆ ಸಂಬಂಧಿಸಿದಂತೆ ಆರ್ಬಿಐ ಹಲವು ಕ್ರಮಕೈಗೊಂಡಿದೆ. ಇದನ್ನು ಮುಂದುವರಿಸಲು ವ್ಯಾಪಕವಾಗಿ ತಂತ್ರಜ್ಞಾನದ ನೆರವು ಪಡೆಯಲಾಗುವುದು’ ಎಂದು ತಿಳಿಸಿದರು.</p>.<p><strong>ನೂತನ ಗವರ್ನರ್ಗೆ ಸವಾಲುಗಳೇನು?</strong> </p><p>ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರ ಪ್ರಕಾರ ದೇಶದ ಆರ್ಥಿಕತೆ ಬೆಳವಣಿಗೆ ಮತ್ತು ಚಿಲ್ಲರೆ ಹಣದುಬ್ಬರದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಿದೆ. ಇಂತಹ ಸಂಧಿಕಾಲದಲ್ಲಿ ರಾಜಸ್ಥಾನ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಮಲ್ಹೋತ್ರಾ ಅವರು ಆರ್ಬಿಐನ ಸಾರಥ್ಯವಹಿಸಿದ್ದಾರೆ. </p><p> ಒಟ್ಟು ಆಂತರಿಕ ಉತ್ಪನ್ನವು (ಜಿಡಿಪಿ) ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎರಡು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಅಕ್ಟೋಬರ್ನಲ್ಲಿ ಚಿಲ್ಲರೆ ಹಣದುಬ್ಬರವು ಶೇ 6.21ರಷ್ಟು ದಾಖಲಾಗಿದೆ. ಇದು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಶೇ 6ರ ಗುರಿಗಿಂತಲೂ ಹೆಚ್ಚಿದೆ. ಈ ನಡುವೆಯೇ ದಾಸ್ ಅಧ್ಯಕ್ಷತೆಯ ಹಣಕಾಸು ನೀತಿ ಸಮಿತಿ ಸಭೆಯು (ಎಂಪಿಸಿ) ಸತತ 11 ಬಾರಿ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಅಲ್ಲದೆ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಕನಿಷ್ಠಮಟ್ಟಕ್ಕೆ ಕುಸಿದಿದೆ. </p><p>ಇವುಗಳನ್ನು ಸಮರ್ಥವಾಗಿ ನಿಭಾಯಿಸುವ ಸವಾಲು ಮಲ್ಹೋತ್ರಾ ಅವರ ಮುಂದಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ಎಂಪಿಸಿ ಸಭೆಯಲ್ಲಿ ರೆಪೊ ದರ ಕಡಿತಗೊಳಿಸಬಹುದು ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಮಲ್ಹೋತ್ರಾ ಅವರ ನೇಮಕವು ಈ ಬಗ್ಗೆ ಮತ್ತಷ್ಟು ಆಶಾಭಾವ ಮೂಡಿಸಿದೆ ಎಂದು ಹೇಳಲಾಗಿದೆ.</p>.RBI: ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ 26ನೇ ಗವರ್ನರ್.ಜಿಡಿಪಿ ಕುಸಿತಕ್ಕೆ ರೆಪೊ ದರ ಯಥಾಸ್ಥಿತಿ ಕಾರಣವಲ್ಲ: ಶಕ್ತಿಕಾಂತ ದಾಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>