<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಿದ್ದ ವಸತಿ ಕಟ್ಟಡವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಕಾನೂನುಬಾಹಿರ ಹಾಗೂ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕರಿಗೆ ಆಶ್ರಯ ಹಾಗೂ ಸಂಚಾರಕ್ಕೆ ಬೆಂಬಲ ನೀಡಿದ ಕಾರಣಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ರೆಬಾನ್ ರಾಮ್ಹಮ್ನಲ್ಲಿ ಒಂದು ಅಂತಸ್ತಿನ ಮನೆ, ಮೂರು ಕನಾಲ್ ಹಾಗೂ ಮೂರು ಮಾರ್ಲಾ ಜಾಗವನ್ನು ಒಳಗೊಂಡಿದೆ. ಈ ಆಸ್ತಿಯು ಉತ್ತರ ಕಾಶ್ಮೀರ ಜಿಲ್ಲೆಯ ಸೋಪೋರ್ನ ರೆಬಾನ್ ಪ್ರದೇಶದ ನಿವಾಸಿ ಜಾವೇದ್ ಅಹಮದ್ ದಾರ್ ಅವರ ಮಾಲೀಕತ್ವದಲ್ಲಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.</p>.<p>ಈ ಆಸ್ತಿಯನ್ನು ಉದ್ದೇಶಪೂರ್ವಕವಾಗಿ ಭಯೋತ್ಪಾದಕರಿಗೆ ಆಶ್ರಯ ನೀಡಲು ಹಾಗೂ ಅವರ ವಾಸ್ತವ್ಯಕ್ಕೆ ಅನುಕೂಲಕರವಾಗಿ ಬಳಸಿರುವುದು ತನಿಖೆ ಸಂದರ್ಭದಲ್ಲಿ ಗೊತ್ತಾಗಿದೆ. ಈ ಮೂಲಕ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಸಹಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಿದ್ದ ವಸತಿ ಕಟ್ಟಡವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಕಾನೂನುಬಾಹಿರ ಹಾಗೂ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕರಿಗೆ ಆಶ್ರಯ ಹಾಗೂ ಸಂಚಾರಕ್ಕೆ ಬೆಂಬಲ ನೀಡಿದ ಕಾರಣಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ರೆಬಾನ್ ರಾಮ್ಹಮ್ನಲ್ಲಿ ಒಂದು ಅಂತಸ್ತಿನ ಮನೆ, ಮೂರು ಕನಾಲ್ ಹಾಗೂ ಮೂರು ಮಾರ್ಲಾ ಜಾಗವನ್ನು ಒಳಗೊಂಡಿದೆ. ಈ ಆಸ್ತಿಯು ಉತ್ತರ ಕಾಶ್ಮೀರ ಜಿಲ್ಲೆಯ ಸೋಪೋರ್ನ ರೆಬಾನ್ ಪ್ರದೇಶದ ನಿವಾಸಿ ಜಾವೇದ್ ಅಹಮದ್ ದಾರ್ ಅವರ ಮಾಲೀಕತ್ವದಲ್ಲಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.</p>.<p>ಈ ಆಸ್ತಿಯನ್ನು ಉದ್ದೇಶಪೂರ್ವಕವಾಗಿ ಭಯೋತ್ಪಾದಕರಿಗೆ ಆಶ್ರಯ ನೀಡಲು ಹಾಗೂ ಅವರ ವಾಸ್ತವ್ಯಕ್ಕೆ ಅನುಕೂಲಕರವಾಗಿ ಬಳಸಿರುವುದು ತನಿಖೆ ಸಂದರ್ಭದಲ್ಲಿ ಗೊತ್ತಾಗಿದೆ. ಈ ಮೂಲಕ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಸಹಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>