<p><strong>ನವದೆಹಲಿ</strong>: ‘ಲೇಖಕರು, ಚಿಂತಕರು ಸೇರಿ ಎಲ್ಲರ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ. ಆದರೆ, 'ವಾಟ್ಸ್ ಆ್ಯಪ್ ಯೂನಿವರ್ಸಿಟಿ'ಯಿಂದ ಬರುವ ಮಾಹಿತಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p><p>ಶಬರಿಮಲೆ ಸೇರಿದಂತೆ ದೇಶದ ವಿವಿಧೆಡೆ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನಡೆಸುತ್ತಿದೆ.</p><p>ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಬಿ.ವಿ ನಾಗರತ್ನ, ಎಂ.ಎಂ ಸುಂದರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಅಗಸ್ಟೀನ್ ಜಾರ್ಜ್ ಮಸೀಹ್, ಪ್ರಸನ್ನ ಬಿ. ವರಾಳೆ, ಆರ್.ಮಹಾದೇವನ್ ಅವರು ಈ ಪೀಠದಲ್ಲಿದ್ದಾರೆ. </p><p>ವಿಚಾರಣೆ ವೇಳೆ ದಾವುಡಿ ಬೋಹ್ರಾ ಸಮುದಾಯದ ಮುಖ್ಯಸ್ಥರ ಪರ ಹಾಜರಾದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್ ಅವರು, ಧಾರ್ಮಿಕ ನಂಬಿಕೆಗಳ ವಿಷಯಗಳಲ್ಲಿ ನ್ಯಾಯಾಂಗ ಸಂಯಮದಿಂದ ವರ್ತಿಸಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬರೆದ ಲೇಖನವೊಂದನ್ನು ಉಲ್ಲೇಖಿಸಿದರು.</p><p>ಇದಕ್ಕೆ ಸಿಜೆಐ ಸೂರ್ಯಕಾಂತ್ ಅವರು, ‘ನಾವು ಎಲ್ಲಾ ಗಣ್ಯ ವ್ಯಕ್ತಿಗಳು, ನ್ಯಾಯಶಾಸ್ತ್ರಜ್ಞರನ್ನು ಗೌರವಿಸುತ್ತೇವೆ. ಆದರೆ ವೈಯಕ್ತಿಕ ಅಭಿಪ್ರಾಯ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಾಗಿರುತ್ತದೆ’ ಎಂದು ಹೇಳಿದರು.</p><p>‘ಎಲ್ಲಾ ಮೂಲಗಳಿಂದಲೂ ಜ್ಞಾನವನ್ನು ಪಡೆದುಕೊಳ್ಳುವುದರಲ್ಲಿ ಯಾವುದೇ ಹಾನಿಯಿಲ್ಲ’ ಎಂದು ಕೌಲ್ ಪ್ರತಿಪಾದಿಸಿದರು. </p><p>‘ಜ್ಞಾನ ಮತ್ತು ಬುದ್ಧಿವಂತಿಕೆಯು ಯಾವುದೇ ಮೂಲದಿಂದ, ಯಾವುದೇ ದೇಶದಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಬಂದರೂ ಅದನ್ನು ಸ್ವಾಗತಿಸಬೇಕು’ ಎಂದು ಕೌಲ್ ತಮ್ಮ ವಾದ ಮುಂದುವರಿಸಿದರು.</p><p>ಅದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು, ‘ಆದರೆ, ವಾಟ್ಸ್ ಆ್ಯಪ್ ಯೂನಿವರ್ಸಿಟಿಯಿಂದ ಅಲ್ಲ’ ಎಂದು ಹಾಸ್ಯದ ಧಾಟಿಯಲ್ಲಿ ಹೇಳಿದರು. ಅದಕ್ಕೆ ಕೌಲ್, ಆ ವಿಷಯವನ್ನು ಇಲ್ಲಿ ಚರ್ಚಿಸುತ್ತಿಲ್ಲ ಎಂದು ಹೇಳಿದರು.</p><p>‘ಯಾವ ವಿಶ್ವವಿದ್ಯಾಲಯವು ಒಳ್ಳೆಯದು ಅಥವಾ ಕೆಟ್ಟದು ಎಂಬ ವಿಷಯಕ್ಕೆ ನಾನು ಹೋಗುತ್ತಿಲ್ಲ. ಅದು ಇಲ್ಲಿ ಅಪ್ರಸ್ತುತವಾಗಿದೆ. ಜ್ಞಾನ ಮತ್ತು ಮಾಹಿತಿ ಎಲ್ಲಿಂದ ಬಂದರೂ ಅದನ್ನು ಸ್ವೀಕರಿಸಬೇಕು ಎಂಬುದು ನನ್ನ ಅಂಶ’ ಎಂದು ತಿಳಿಸಿದರು.</p><p>ಋತುಸ್ರಾವದ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ಏರಿ, ದೇವಸ್ಥಾನ ಪ್ರವೇಶಿಸಲು ಹಕ್ಕಿದೆ ಎಂದು 2018ರಲ್ಲಿ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಬಹುಮತದ ತೀರ್ಪು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಲೇಖಕರು, ಚಿಂತಕರು ಸೇರಿ ಎಲ್ಲರ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ. ಆದರೆ, 'ವಾಟ್ಸ್ ಆ್ಯಪ್ ಯೂನಿವರ್ಸಿಟಿ'ಯಿಂದ ಬರುವ ಮಾಹಿತಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p><p>ಶಬರಿಮಲೆ ಸೇರಿದಂತೆ ದೇಶದ ವಿವಿಧೆಡೆ ಪೂಜಾ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನಡೆಸುತ್ತಿದೆ.</p><p>ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಬಿ.ವಿ ನಾಗರತ್ನ, ಎಂ.ಎಂ ಸುಂದರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಅಗಸ್ಟೀನ್ ಜಾರ್ಜ್ ಮಸೀಹ್, ಪ್ರಸನ್ನ ಬಿ. ವರಾಳೆ, ಆರ್.ಮಹಾದೇವನ್ ಅವರು ಈ ಪೀಠದಲ್ಲಿದ್ದಾರೆ. </p><p>ವಿಚಾರಣೆ ವೇಳೆ ದಾವುಡಿ ಬೋಹ್ರಾ ಸಮುದಾಯದ ಮುಖ್ಯಸ್ಥರ ಪರ ಹಾಜರಾದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್ ಅವರು, ಧಾರ್ಮಿಕ ನಂಬಿಕೆಗಳ ವಿಷಯಗಳಲ್ಲಿ ನ್ಯಾಯಾಂಗ ಸಂಯಮದಿಂದ ವರ್ತಿಸಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬರೆದ ಲೇಖನವೊಂದನ್ನು ಉಲ್ಲೇಖಿಸಿದರು.</p><p>ಇದಕ್ಕೆ ಸಿಜೆಐ ಸೂರ್ಯಕಾಂತ್ ಅವರು, ‘ನಾವು ಎಲ್ಲಾ ಗಣ್ಯ ವ್ಯಕ್ತಿಗಳು, ನ್ಯಾಯಶಾಸ್ತ್ರಜ್ಞರನ್ನು ಗೌರವಿಸುತ್ತೇವೆ. ಆದರೆ ವೈಯಕ್ತಿಕ ಅಭಿಪ್ರಾಯ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಾಗಿರುತ್ತದೆ’ ಎಂದು ಹೇಳಿದರು.</p><p>‘ಎಲ್ಲಾ ಮೂಲಗಳಿಂದಲೂ ಜ್ಞಾನವನ್ನು ಪಡೆದುಕೊಳ್ಳುವುದರಲ್ಲಿ ಯಾವುದೇ ಹಾನಿಯಿಲ್ಲ’ ಎಂದು ಕೌಲ್ ಪ್ರತಿಪಾದಿಸಿದರು. </p><p>‘ಜ್ಞಾನ ಮತ್ತು ಬುದ್ಧಿವಂತಿಕೆಯು ಯಾವುದೇ ಮೂಲದಿಂದ, ಯಾವುದೇ ದೇಶದಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಬಂದರೂ ಅದನ್ನು ಸ್ವಾಗತಿಸಬೇಕು’ ಎಂದು ಕೌಲ್ ತಮ್ಮ ವಾದ ಮುಂದುವರಿಸಿದರು.</p><p>ಅದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು, ‘ಆದರೆ, ವಾಟ್ಸ್ ಆ್ಯಪ್ ಯೂನಿವರ್ಸಿಟಿಯಿಂದ ಅಲ್ಲ’ ಎಂದು ಹಾಸ್ಯದ ಧಾಟಿಯಲ್ಲಿ ಹೇಳಿದರು. ಅದಕ್ಕೆ ಕೌಲ್, ಆ ವಿಷಯವನ್ನು ಇಲ್ಲಿ ಚರ್ಚಿಸುತ್ತಿಲ್ಲ ಎಂದು ಹೇಳಿದರು.</p><p>‘ಯಾವ ವಿಶ್ವವಿದ್ಯಾಲಯವು ಒಳ್ಳೆಯದು ಅಥವಾ ಕೆಟ್ಟದು ಎಂಬ ವಿಷಯಕ್ಕೆ ನಾನು ಹೋಗುತ್ತಿಲ್ಲ. ಅದು ಇಲ್ಲಿ ಅಪ್ರಸ್ತುತವಾಗಿದೆ. ಜ್ಞಾನ ಮತ್ತು ಮಾಹಿತಿ ಎಲ್ಲಿಂದ ಬಂದರೂ ಅದನ್ನು ಸ್ವೀಕರಿಸಬೇಕು ಎಂಬುದು ನನ್ನ ಅಂಶ’ ಎಂದು ತಿಳಿಸಿದರು.</p><p>ಋತುಸ್ರಾವದ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ಏರಿ, ದೇವಸ್ಥಾನ ಪ್ರವೇಶಿಸಲು ಹಕ್ಕಿದೆ ಎಂದು 2018ರಲ್ಲಿ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಬಹುಮತದ ತೀರ್ಪು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>