ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಿದಾನಕ್ಕೆ ಗೌರವ ಕೊಡಿ: ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಅಧಿಕಾರಿಗಳ ಸಂಘ

Last Updated 9 ಮೇ 2019, 17:19 IST
ಅಕ್ಷರ ಗಾತ್ರ

ನವದೆಹಲಿ: 26/11 ಮುಂಬೈ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥಹೇಮಂತ್ ಕರ್ಕರೆ ಸಾವನ್ನಪ್ಪಿದ್ದು ನನ್ನ ಶಾಪದಿಂದ ಎಂದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಐಪಿಎಸ್ ಅಧಿಕಾರಿಗಳ ಸಂಘ ಖಂಡಿಸಿದೆ.

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್, ನೀನು ಸರ್ವನಾಶ ಆಗುತ್ತೀಯಾ ಎಂದು ನಾನು ಕರ್ಕರೆ ಅವರಿಗೆ ಶಪಿಸಿದ್ದೆ, ಆ ಶಾಪ ಅವರಿಗೆ ತಟ್ಟಿತು ಎಂಬ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ಖಂಡಿಸಿದ ಇಂಡಿಯನ್ ಪೊಲೀಸ್ ಸರ್ವೀಸ್ ಅಸೋಸಿಯೇಷನ್, ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆಐಪಿಎಸ್ ಅವರುಉಗ್ರರೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದುಟ್ವೀಟಿಸಿದೆ.

ಅಭ್ಯರ್ಥಿಯೊಬ್ಬರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಈ ರೀತಿ ಅವಮಾನಿಸಿರುವುದು ತುಂಬಾ ದುಃಖವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT