ನವದೆಹಲಿ: 26/11 ಮುಂಬೈ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥಹೇಮಂತ್ ಕರ್ಕರೆ ಸಾವನ್ನಪ್ಪಿದ್ದು ನನ್ನ ಶಾಪದಿಂದ ಎಂದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಐಪಿಎಸ್ ಅಧಿಕಾರಿಗಳ ಸಂಘ ಖಂಡಿಸಿದೆ.
ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್, ನೀನು ಸರ್ವನಾಶ ಆಗುತ್ತೀಯಾ ಎಂದು ನಾನು ಕರ್ಕರೆ ಅವರಿಗೆ ಶಪಿಸಿದ್ದೆ, ಆ ಶಾಪ ಅವರಿಗೆ ತಟ್ಟಿತು ಎಂಬ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯನ್ನು ಖಂಡಿಸಿದ ಇಂಡಿಯನ್ ಪೊಲೀಸ್ ಸರ್ವೀಸ್ ಅಸೋಸಿಯೇಷನ್, ಅಶೋಕ್ ಚಕ್ರ ಪುರಸ್ಕೃತ ಹೇಮಂತ್ ಕರ್ಕರೆಐಪಿಎಸ್ ಅವರುಉಗ್ರರೊಂದಿಗೆ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಹುತಾತ್ಮರ ಬಲಿದಾನವನ್ನು ಅವಮಾನಿಸಿದ ಅಭ್ಯರ್ಥಿಯ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದುಟ್ವೀಟಿಸಿದೆ.
Ashok Chakra awardee late Sri Hemant Karkare, IPS made the supreme sacrifice fighting terrorists. Those of us in uniform condemn the insulting statement made by a candidate and demand that sacrifices of all our martyrs be respected.