<p><strong>ಮುಂಬೈ:</strong> 1 ರಿಂದ 5ನೇ ತರಗತಿಯವರೆಗೆ ಮೂರನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿದ್ದ ಮಹಾರಾಷ್ಟ್ರದ ದೇವೇಂದ್ರ ಫಡಣವೀಸ್ ನೇತೃತ್ವದ ಮಹಾಯುತಿ ಸರ್ಕಾರವು ಹಿಂದೆ ಸರಿಯಲು ನಿರ್ಧರಿಸಿದೆ.</p>.<p>ಮರಾಠಿ, ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿ ಕಲಿಕೆಯನ್ನು ಐಚ್ಛಿಕವಾಗಿಸಿದೆ.</p><p>‘ನೂತನ ಶಿಕ್ಷಣ ನೀತಿ–2020’ರ (ಎನ್ಇಪಿ) ಅಡಿಯಲ್ಲಿ ತ್ರಿಭಾಷಾ ಕಲಿಕೆ ವಿಚಾರವು ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದೆ. ಎನ್ಇಪಿ ಜಾರಿ ಮಾಡಿದ ‘ಮಹಾಯುತಿ’ ಸರ್ಕಾರದ ವಿರುದ್ಧ ‘ಮಹಾ ವಿಕಾಸ ಆಘಾಡಿ’ ಸಹ ಕಿಡಿಕಾರಿತ್ತು. ಇದರ ಬೆನ್ನಲ್ಲೇ, ಈ ನಿರ್ಧಾರ ತೆಗೆದುಕೊಂಡಿದೆ. </p><p>‘ಹಿಂದಿ ಕಲಿಕೆ ಕಡ್ಡಾಯವಲ್ಲ. ಎನ್ಇಪಿ ಪ್ರಕಾರ, ತ್ರಿಭಾಷಾ ಸೂತ್ರದಡಿ ಹಿಂದಿ ಕಲಿಕೆಯು ಐಚ್ಛಿಕವಾಗಿರಲಿದೆ’ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ದಾದಾಜಿ ಭುಸೆ ತಿಳಿಸಿದ್ದಾರೆ.</p><p>‘ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಮೂರನೇ ಭಾಷೆಯಾಗಿ ಯಾವುದನ್ನಾದರೂ ಅವರೇ ಆಯ್ಕೆ ಮಾಡಿಕೊಳ್ಳಬಹುದು’ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದರು.</p><p>‘ಶಾಲೆಗಳಲ್ಲಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಹಾಗೂ ಶಿವಸೇನೆ (ಉದ್ಧವ್ ಬಣ)ದ ಅಧ್ಯಕ್ಷ ಉದ್ಧವ್ ಠಾಕ್ರೆ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 1 ರಿಂದ 5ನೇ ತರಗತಿಯವರೆಗೆ ಮೂರನೇ ಭಾಷೆಯಾಗಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿದ್ದ ಮಹಾರಾಷ್ಟ್ರದ ದೇವೇಂದ್ರ ಫಡಣವೀಸ್ ನೇತೃತ್ವದ ಮಹಾಯುತಿ ಸರ್ಕಾರವು ಹಿಂದೆ ಸರಿಯಲು ನಿರ್ಧರಿಸಿದೆ.</p>.<p>ಮರಾಠಿ, ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿ ಕಲಿಕೆಯನ್ನು ಐಚ್ಛಿಕವಾಗಿಸಿದೆ.</p><p>‘ನೂತನ ಶಿಕ್ಷಣ ನೀತಿ–2020’ರ (ಎನ್ಇಪಿ) ಅಡಿಯಲ್ಲಿ ತ್ರಿಭಾಷಾ ಕಲಿಕೆ ವಿಚಾರವು ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದೆ. ಎನ್ಇಪಿ ಜಾರಿ ಮಾಡಿದ ‘ಮಹಾಯುತಿ’ ಸರ್ಕಾರದ ವಿರುದ್ಧ ‘ಮಹಾ ವಿಕಾಸ ಆಘಾಡಿ’ ಸಹ ಕಿಡಿಕಾರಿತ್ತು. ಇದರ ಬೆನ್ನಲ್ಲೇ, ಈ ನಿರ್ಧಾರ ತೆಗೆದುಕೊಂಡಿದೆ. </p><p>‘ಹಿಂದಿ ಕಲಿಕೆ ಕಡ್ಡಾಯವಲ್ಲ. ಎನ್ಇಪಿ ಪ್ರಕಾರ, ತ್ರಿಭಾಷಾ ಸೂತ್ರದಡಿ ಹಿಂದಿ ಕಲಿಕೆಯು ಐಚ್ಛಿಕವಾಗಿರಲಿದೆ’ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ದಾದಾಜಿ ಭುಸೆ ತಿಳಿಸಿದ್ದಾರೆ.</p><p>‘ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಮೂರನೇ ಭಾಷೆಯಾಗಿ ಯಾವುದನ್ನಾದರೂ ಅವರೇ ಆಯ್ಕೆ ಮಾಡಿಕೊಳ್ಳಬಹುದು’ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದರು.</p><p>‘ಶಾಲೆಗಳಲ್ಲಿ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಹಾಗೂ ಶಿವಸೇನೆ (ಉದ್ಧವ್ ಬಣ)ದ ಅಧ್ಯಕ್ಷ ಉದ್ಧವ್ ಠಾಕ್ರೆ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>