<p><strong>ನವದೆಹಲಿ: </strong>ಆಮ್ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದು ಮಾಡಲು ಕೋರಿ 56 ಮಂದಿ ನಿವೃತ್ತ ಐಎಎಸ್, ಐಎಫ್ಎಸ್, ಐಪಿಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗುಜರಾತ್ ಚುನಾವಣೆಯಲ್ಲಿ ತನ್ನ ಪರವಾಗಿ ಕೆಲಸ ಮಾಡಿಸಿಕೊಳ್ಳಲು ಆಮ್ ಆದ್ಮಿ ಪಕ್ಷ (ಎಎಪಿ) ಪ್ರಚೋದಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.</p>.<p>ಪತ್ರಕ್ಕೆ ಕರ್ನಾಟಕದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಮದನ್ ಗೋಪಾಲ್, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆನಂದ್ ಬೋಸ್, ನಿವೃತ್ತ ರಾಯಭಾರಿ ನಿರಂಜನ್ ದೇಸಾಯಿ ಮತ್ತು ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಉಮೇಶ್ ಕುಮಾರ್ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ.</p>.<p>ಸೆಪ್ಟೆಂಬರ್ 3 ರಂದು ರಾಜ್ಕೋಟ್ನಲ್ಲಿ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನಡೆಸಿದ ಪತ್ರಿಕಾಗೋಷ್ಠಿ, ಅದರಲ್ಲಿ ಅವರು ಆಡಿದ್ದ ಮಾತುಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>’ವಿಧಾನಸಭಾ ಚುನಾವಣೆ ಗೆಲುವಿಗಾಗಿ ಗುಜರಾತ್ ಸರ್ಕಾರದ ಅಧಿಕಾರಿಗಳು ಎಎಪಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವಂತೆ ಕೇಜ್ರಿವಾಲ್ ಪದೇ ಪದೇ ಮನವಿ ಮಾಡಿದ್ದಾರೆ’ ಎಂದು ಆರೋಪಿಸಲಾಗಿದೆ.</p>.<p>‘ಸಾರ್ವಜನಿಕರ ಶ್ರೇಯೋಭಿವೃದ್ಧಿಗೆ, ಜನರ ಭದ್ರತೆಗೆ ಶ್ರಮಿಸುವುದು ಸಾರ್ವಜನಿಕ ಸೇವೆಯಲ್ಲಿ ತೊಡಗಿರುವವರ ಜವಾಬ್ದಾರಿಯಾಗಿದೆ’ ಎಂದು ನಿವೃತ್ತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸಾರ್ವಜನಿಕ ಸೇವೆಯಲ್ಲಿರುವವರು ರಾಜಕೀಯ ಪಕ್ಷಗಳಿಗೆ ಯಾವುದೇ ನಿಷ್ಠೆಯನ್ನು ಹೊಂದಿಲ್ಲ ಎಂಬುದನ್ನು ಎಎಪಿ ಮರೆತಂತಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.</p>.<p>‘ಇದು ಆಕಸ್ಮಿಕ ತಪ್ಪಲ್ಲ. ರಾಜಕೀಯ ಲಾಭಕ್ಕಾಗಿ ಸರ್ಕಾರಿ ಯಂತ್ರವನ್ನು ಬಳಸಿಕೊಳ್ಳುವ ಉದ್ದೇಶದಿಂದ ಎಎಪಿ ಮಾಡಿದ ಉದ್ದೇಶಪೂರ್ವಕ ಮತ್ತು ಲೆಕ್ಕಾಚಾರ’ ಎಂದು ನಿವೃತ್ತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>ಮಾದರಿ ನೀತಿ ಸಂಹಿತೆಯನ್ನು ಎಎಪಿ ಉಲ್ಲಂಘಿಸಿದೆ. ಪ್ರಜಾಪ್ರತಿನಿಧಿ ಕಾಯಿದೆ– 1951 ರ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ ಆ ಪಕ್ಷದ ಮಾನ್ಯತೆಯನ್ನು ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p><strong>ಇವುಗಳನ್ನೂ ಓದಿ</strong></p>.<p><a href="https://www.prajavani.net/india-news/inflation-wouldnt-exist-if-bjp-hadnt-spent-6300-cr-on-toppling-govts-says-kejriwal-967023.html" itemprop="url">ಸರ್ಕಾರಗಳನ್ನು ಉರುಳಿಸದೇ ಇದ್ದಿದ್ದರೆ ಹಣದುಬ್ಬರವೇ ಇರುತ್ತಿರಲಿಲ್ಲ: ಕೇಜ್ರಿವಾಲ್ </a></p>.<p><a href="https://www.prajavani.net/district/bengaluru-city/aam-aadmi-party-karnataka-govt-bengaluru-protest-shivananda-circle-967602.html" itemprop="url">40 ಪರ್ಸೆಂಟ್ ಕಮಿಷನ್ ಮೇಲ್ಸೇತುವೆ: ಎಎಪಿಯಿಂದ ನಾಮಫಲಕ ಅಳವಡಿಕೆ </a></p>.<p><a href="https://www.prajavani.net/india-news/aap-delhi-mla-somnath-bharti-shares-chat-says-suspect-that-bjp-is-attempting-to-honeytrap-me-966434.html" itemprop="url">ಬಿಜೆಪಿಯಿಂದ ಹನಿಟ್ರ್ಯಾಪ್ ಸಂಚು ಆರೋಪ: ವಾಟ್ಸ್ಆ್ಯಪ್ ಸಂದೇಶ ಹಂಚಿಕೊಂಡ ಎಎಪಿ ಶಾಸಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಮ್ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದು ಮಾಡಲು ಕೋರಿ 56 ಮಂದಿ ನಿವೃತ್ತ ಐಎಎಸ್, ಐಎಫ್ಎಸ್, ಐಪಿಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗುಜರಾತ್ ಚುನಾವಣೆಯಲ್ಲಿ ತನ್ನ ಪರವಾಗಿ ಕೆಲಸ ಮಾಡಿಸಿಕೊಳ್ಳಲು ಆಮ್ ಆದ್ಮಿ ಪಕ್ಷ (ಎಎಪಿ) ಪ್ರಚೋದಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.</p>.<p>ಪತ್ರಕ್ಕೆ ಕರ್ನಾಟಕದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ. ಮದನ್ ಗೋಪಾಲ್, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆನಂದ್ ಬೋಸ್, ನಿವೃತ್ತ ರಾಯಭಾರಿ ನಿರಂಜನ್ ದೇಸಾಯಿ ಮತ್ತು ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಉಮೇಶ್ ಕುಮಾರ್ ಸೇರಿದಂತೆ ಹಲವರು ಸಹಿ ಮಾಡಿದ್ದಾರೆ.</p>.<p>ಸೆಪ್ಟೆಂಬರ್ 3 ರಂದು ರಾಜ್ಕೋಟ್ನಲ್ಲಿ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನಡೆಸಿದ ಪತ್ರಿಕಾಗೋಷ್ಠಿ, ಅದರಲ್ಲಿ ಅವರು ಆಡಿದ್ದ ಮಾತುಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>’ವಿಧಾನಸಭಾ ಚುನಾವಣೆ ಗೆಲುವಿಗಾಗಿ ಗುಜರಾತ್ ಸರ್ಕಾರದ ಅಧಿಕಾರಿಗಳು ಎಎಪಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವಂತೆ ಕೇಜ್ರಿವಾಲ್ ಪದೇ ಪದೇ ಮನವಿ ಮಾಡಿದ್ದಾರೆ’ ಎಂದು ಆರೋಪಿಸಲಾಗಿದೆ.</p>.<p>‘ಸಾರ್ವಜನಿಕರ ಶ್ರೇಯೋಭಿವೃದ್ಧಿಗೆ, ಜನರ ಭದ್ರತೆಗೆ ಶ್ರಮಿಸುವುದು ಸಾರ್ವಜನಿಕ ಸೇವೆಯಲ್ಲಿ ತೊಡಗಿರುವವರ ಜವಾಬ್ದಾರಿಯಾಗಿದೆ’ ಎಂದು ನಿವೃತ್ತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸಾರ್ವಜನಿಕ ಸೇವೆಯಲ್ಲಿರುವವರು ರಾಜಕೀಯ ಪಕ್ಷಗಳಿಗೆ ಯಾವುದೇ ನಿಷ್ಠೆಯನ್ನು ಹೊಂದಿಲ್ಲ ಎಂಬುದನ್ನು ಎಎಪಿ ಮರೆತಂತಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.</p>.<p>‘ಇದು ಆಕಸ್ಮಿಕ ತಪ್ಪಲ್ಲ. ರಾಜಕೀಯ ಲಾಭಕ್ಕಾಗಿ ಸರ್ಕಾರಿ ಯಂತ್ರವನ್ನು ಬಳಸಿಕೊಳ್ಳುವ ಉದ್ದೇಶದಿಂದ ಎಎಪಿ ಮಾಡಿದ ಉದ್ದೇಶಪೂರ್ವಕ ಮತ್ತು ಲೆಕ್ಕಾಚಾರ’ ಎಂದು ನಿವೃತ್ತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.</p>.<p>ಮಾದರಿ ನೀತಿ ಸಂಹಿತೆಯನ್ನು ಎಎಪಿ ಉಲ್ಲಂಘಿಸಿದೆ. ಪ್ರಜಾಪ್ರತಿನಿಧಿ ಕಾಯಿದೆ– 1951 ರ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ ಆ ಪಕ್ಷದ ಮಾನ್ಯತೆಯನ್ನು ರದ್ದು ಮಾಡಬೇಕು ಎಂದು ಅವರು ಒತ್ತಾಯಿಸಿದರು.</p>.<p><strong>ಇವುಗಳನ್ನೂ ಓದಿ</strong></p>.<p><a href="https://www.prajavani.net/india-news/inflation-wouldnt-exist-if-bjp-hadnt-spent-6300-cr-on-toppling-govts-says-kejriwal-967023.html" itemprop="url">ಸರ್ಕಾರಗಳನ್ನು ಉರುಳಿಸದೇ ಇದ್ದಿದ್ದರೆ ಹಣದುಬ್ಬರವೇ ಇರುತ್ತಿರಲಿಲ್ಲ: ಕೇಜ್ರಿವಾಲ್ </a></p>.<p><a href="https://www.prajavani.net/district/bengaluru-city/aam-aadmi-party-karnataka-govt-bengaluru-protest-shivananda-circle-967602.html" itemprop="url">40 ಪರ್ಸೆಂಟ್ ಕಮಿಷನ್ ಮೇಲ್ಸೇತುವೆ: ಎಎಪಿಯಿಂದ ನಾಮಫಲಕ ಅಳವಡಿಕೆ </a></p>.<p><a href="https://www.prajavani.net/india-news/aap-delhi-mla-somnath-bharti-shares-chat-says-suspect-that-bjp-is-attempting-to-honeytrap-me-966434.html" itemprop="url">ಬಿಜೆಪಿಯಿಂದ ಹನಿಟ್ರ್ಯಾಪ್ ಸಂಚು ಆರೋಪ: ವಾಟ್ಸ್ಆ್ಯಪ್ ಸಂದೇಶ ಹಂಚಿಕೊಂಡ ಎಎಪಿ ಶಾಸಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>