<p><strong>ಹೈದರಾಬಾದ್</strong>: ಹಿಂದಿನ ಬಿಆರ್ಎಸ್ ಪಕ್ಷದ ಆಡಳಿತವು ಫೋನ್ ಸಂಭಾಷಣೆಯ ಕದ್ದಾಲಿಕೆ ಮೂಲಕ ಉದ್ಯಮಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ದೂರಿದ್ದಾರೆ.</p>.<p>ಫೆ.11ರಂದು ನಡೆಯಲಿರುವ ಮುನ್ಸಿಪಲ್ ಚುನಾವಣೆ ಅಂಗವಾಗಿ ಜಯಶಂಕರ್ ಭೂಪಲಪಲ್ಲಿ ಜಿಲ್ಲೆಯ ಚೆಲ್ಪುರದಲ್ಲಿ ಭಾನುವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷವನ್ನು ‘ಬ್ಲ್ಯಾಕ್ಮೇಲ್ ರಾಜಕೀಯ ಸಮಿತಿ’ ಎಂದು ಲೇವಡಿ ಮಾಡಿದರು.</p>.<p>‘ಹಿಂದಿನ ಆಡಳಿತವು ಫೋನ್ ಕದ್ದಾಲಿಕೆಯಲ್ಲೇ ನಿರತವಾಗಿತ್ತು. ವಿರೋಧ ಪಕ್ಷದ ನಾಯಕರು, ಹೈಕೋರ್ಟ್ ನ್ಯಾಯಮೂರ್ತಿಗಳು, ಪತ್ರಕರ್ತರನ್ನು ಬಿಟ್ಟಿರಲಿಲ್ಲ. ಗಂಡ–ಹೆಂಡತಿಯ ಖಾಸಗಿ ಸಂಭಾಷಣೆಗಳನ್ನು ಕದ್ದಾಲಿಸಿದ್ದರು. ಈ ಭೂಮಿ ಮೇಲೆ ಇದಕ್ಕಿಂತ ಇನ್ನೇನಾದರೂ ಘೋರ ತಪ್ಪು ಇದೆಯಾ? ಅವರಿಗಿಂತ ದೊಡ್ಡ ಪಾಪಿ ಯಾರಿದ್ದಾರೆ?’ ಎಂದು ರೆಡ್ಡಿ ವಾಗ್ದಾಳಿ ನಡೆಸಿದರು.</p>.<p>ತೆಲಂಗಾಣ ಬಿಜೆಪಿ ಸಂಸದ ಕೊಂಡಾ ವಿಶ್ವೇಶ್ವರ ರೆಡ್ಡಿ ಸಹ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹಿಂದಿನ ಬಿಆರ್ಎಸ್ ಪಕ್ಷದ ಆಡಳಿತವು ಫೋನ್ ಸಂಭಾಷಣೆಯ ಕದ್ದಾಲಿಕೆ ಮೂಲಕ ಉದ್ಯಮಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ದೂರಿದ್ದಾರೆ.</p>.<p>ಫೆ.11ರಂದು ನಡೆಯಲಿರುವ ಮುನ್ಸಿಪಲ್ ಚುನಾವಣೆ ಅಂಗವಾಗಿ ಜಯಶಂಕರ್ ಭೂಪಲಪಲ್ಲಿ ಜಿಲ್ಲೆಯ ಚೆಲ್ಪುರದಲ್ಲಿ ಭಾನುವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷವನ್ನು ‘ಬ್ಲ್ಯಾಕ್ಮೇಲ್ ರಾಜಕೀಯ ಸಮಿತಿ’ ಎಂದು ಲೇವಡಿ ಮಾಡಿದರು.</p>.<p>‘ಹಿಂದಿನ ಆಡಳಿತವು ಫೋನ್ ಕದ್ದಾಲಿಕೆಯಲ್ಲೇ ನಿರತವಾಗಿತ್ತು. ವಿರೋಧ ಪಕ್ಷದ ನಾಯಕರು, ಹೈಕೋರ್ಟ್ ನ್ಯಾಯಮೂರ್ತಿಗಳು, ಪತ್ರಕರ್ತರನ್ನು ಬಿಟ್ಟಿರಲಿಲ್ಲ. ಗಂಡ–ಹೆಂಡತಿಯ ಖಾಸಗಿ ಸಂಭಾಷಣೆಗಳನ್ನು ಕದ್ದಾಲಿಸಿದ್ದರು. ಈ ಭೂಮಿ ಮೇಲೆ ಇದಕ್ಕಿಂತ ಇನ್ನೇನಾದರೂ ಘೋರ ತಪ್ಪು ಇದೆಯಾ? ಅವರಿಗಿಂತ ದೊಡ್ಡ ಪಾಪಿ ಯಾರಿದ್ದಾರೆ?’ ಎಂದು ರೆಡ್ಡಿ ವಾಗ್ದಾಳಿ ನಡೆಸಿದರು.</p>.<p>ತೆಲಂಗಾಣ ಬಿಜೆಪಿ ಸಂಸದ ಕೊಂಡಾ ವಿಶ್ವೇಶ್ವರ ರೆಡ್ಡಿ ಸಹ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>