ನವದೆಹಲಿ: ಕರ್ನಾಟಕದಲ್ಲಿ ಕಾಡುಗೊಲ್ಲರು/ ಹಟ್ಟಿಗೊಲ್ಲರು/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರಿಗೆ ಡಿಸೆಂಬರ್ 21ರಂದು ಪತ್ರ ಬರೆದಿರುವ ಅವರು, ‘ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನೀವು ಸಲ್ಲಿಸಿರುವ ಮನವಿ ಸ್ವೀಕೃತವಾಗಿದೆ’ ಎಂದು ತಿಳಿಸಿದ್ದಾರೆ.
ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದರು.