<p><strong>ಕೋಲ್ಕತ್ತ</strong>: ಆರ್.ಜಿ. ಕರ್ ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮೃತಳ ತಾಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಕೋರಿಕೆ ವ್ಯಕ್ತಪಡಿಸಿದ್ದಾರೆ.</p><p>ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ.</p><p>'ಪ್ರಧಾನಿಯವರನ್ನು ಭೇಟಿಯಾಗಿ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡುವುದಾಗಿ' ಮೃತಳ ತಾಯಿ ತಿಳಿಸಿದ್ದಾರೆ. </p>.ಹಣಕ್ಕೆ ಒತ್ತಾಯಿಸಿ ಪತ್ನಿ, ಮಾವನ ಮೇಲೆ ಖಾರದ ಪುಡಿ ಎರಚಿ ಹಲ್ಲೆ.ರೌಡಿಶೀಟರ್ ಜಯರಾಮ್ ಕೊಲೆ: ನಾಲ್ವರ ಬಂಧನ. <p>'ನನ್ನ ಮಗಳು ದೊಡ್ಡ ಕನಸು ಕಂಡಿದ್ದಳು. ಅವಳು ಇಷ್ಟು ಬೇಗ ಮೃತಪಡುತ್ತಾಳೆ ಎಂದು ಊಹಿಸಿರಲಿಲ್ಲ. ಅವಳು ನನ್ನ ಬಿಟ್ಟು ಹೋಗಿ ಏಳು ತಿಂಗಳುಗಳಾಗಿವೆ. ಆದರೆ ನ್ಯಾಯ ಎಲ್ಲಿದೆ?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಪ್ರಧಾನಿಯನ್ನು ಭೇಟಿಯಾಗಬೇಕೆಂಬ ಮೃತ ತಾಯಿಯ ಕೋರಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್, 'ಪ್ರಧಾನಿಯವರನ್ನು ಭೇಟಿ ಮಾಡಲು ಪಡೆಯಲು ಒಂದು ಪ್ರಕ್ರಿಯೆ ಇದೆ. ನಮ್ಮ ಪ್ರಧಾನಿ ಅವರು ನಿಮ್ಮ ಸಮಸ್ಯೆಯನ್ನು ಖಂಡಿತ ಆಲಿಸುತ್ತಾರೆ' ಭರವಸೆ ನೀಡಿದ್ದಾರೆ.</p>.ಹಿರಿಯ ಅಧಿಕಾರಿಗಳ ಕಿರುಕುಳದ ಆರೋಪ: ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.ಪಶುವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸಿ: ICAR ಉಪ ಮಹಾನಿರ್ದೇಶಕ ರಾಘವೇಂದ್ರ ಭಟ್ಟ. <p>ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮಾತನಾಡಿ, 'ಈ ದೇಶದಲ್ಲಿ ಯಾರಿಗಾದರೂ ಪ್ರಧಾನಿ ಅವರನ್ನು ಭೇಟಿ ಮಾಡುವ ಹಕ್ಕಿದೆ. ಆದರೆ ಈ ಘಟನೆ ವಿರುದ್ಧ ಮಮತಾ ಬ್ಯಾನರ್ಜಿ ಕಠಿಣ ಕ್ರಮಕೈಗೊಂಡಿದ್ದರು. ಇದರಿಂದಾಗಿ ಅಪರಾಧಿಗೆ ಜೀವವಾಧಿ ಶಿಕ್ಷೆಯಾಗಿದೆ' ಎಂದು ತಿಳಿಸಿದ್ದಾರೆ.</p><p>ಕಳೆದ ವರ್ಷ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ ಕರ್ ಆಸ್ಪತ್ರೆಯ 31 ವರ್ಷದ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದರು. ದೇಶದಾದ್ಯಂತ ಈ ಘಟನೆ ಆಕ್ರೋಶಕ್ಕೆ ಕಾರಣವಾಗಿತ್ತು.</p>.ಕಾಡುಪ್ರಾಣಿಗಳಿಗೂ ಧಗೆ..! ರಕ್ಷಿತಾರಣ್ಯಗಳಲ್ಲಿ ಹೊಸ ಕೆರೆ, ನೀರಿನ ಹೊಂಡ ನಿರ್ಮಾಣ.ಸಮಾನಾಂತರ ಜಲಾಶಯ ಕುರಿತು ಚರ್ಚಿಸಲು ಚಂದ್ರಬಾಬು ನಾಯ್ಡು ಭೇಟಿ ಶೀಘ್ರ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಆರ್.ಜಿ. ಕರ್ ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮೃತಳ ತಾಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಕೋರಿಕೆ ವ್ಯಕ್ತಪಡಿಸಿದ್ದಾರೆ.</p><p>ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ.</p><p>'ಪ್ರಧಾನಿಯವರನ್ನು ಭೇಟಿಯಾಗಿ ನನ್ನ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡುವುದಾಗಿ' ಮೃತಳ ತಾಯಿ ತಿಳಿಸಿದ್ದಾರೆ. </p>.ಹಣಕ್ಕೆ ಒತ್ತಾಯಿಸಿ ಪತ್ನಿ, ಮಾವನ ಮೇಲೆ ಖಾರದ ಪುಡಿ ಎರಚಿ ಹಲ್ಲೆ.ರೌಡಿಶೀಟರ್ ಜಯರಾಮ್ ಕೊಲೆ: ನಾಲ್ವರ ಬಂಧನ. <p>'ನನ್ನ ಮಗಳು ದೊಡ್ಡ ಕನಸು ಕಂಡಿದ್ದಳು. ಅವಳು ಇಷ್ಟು ಬೇಗ ಮೃತಪಡುತ್ತಾಳೆ ಎಂದು ಊಹಿಸಿರಲಿಲ್ಲ. ಅವಳು ನನ್ನ ಬಿಟ್ಟು ಹೋಗಿ ಏಳು ತಿಂಗಳುಗಳಾಗಿವೆ. ಆದರೆ ನ್ಯಾಯ ಎಲ್ಲಿದೆ?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಪ್ರಧಾನಿಯನ್ನು ಭೇಟಿಯಾಗಬೇಕೆಂಬ ಮೃತ ತಾಯಿಯ ಕೋರಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್, 'ಪ್ರಧಾನಿಯವರನ್ನು ಭೇಟಿ ಮಾಡಲು ಪಡೆಯಲು ಒಂದು ಪ್ರಕ್ರಿಯೆ ಇದೆ. ನಮ್ಮ ಪ್ರಧಾನಿ ಅವರು ನಿಮ್ಮ ಸಮಸ್ಯೆಯನ್ನು ಖಂಡಿತ ಆಲಿಸುತ್ತಾರೆ' ಭರವಸೆ ನೀಡಿದ್ದಾರೆ.</p>.ಹಿರಿಯ ಅಧಿಕಾರಿಗಳ ಕಿರುಕುಳದ ಆರೋಪ: ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.ಪಶುವೈದ್ಯಕೀಯ ಕಾಲೇಜು ಮೇಲ್ದರ್ಜೆಗೇರಿಸಿ: ICAR ಉಪ ಮಹಾನಿರ್ದೇಶಕ ರಾಘವೇಂದ್ರ ಭಟ್ಟ. <p>ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮಾತನಾಡಿ, 'ಈ ದೇಶದಲ್ಲಿ ಯಾರಿಗಾದರೂ ಪ್ರಧಾನಿ ಅವರನ್ನು ಭೇಟಿ ಮಾಡುವ ಹಕ್ಕಿದೆ. ಆದರೆ ಈ ಘಟನೆ ವಿರುದ್ಧ ಮಮತಾ ಬ್ಯಾನರ್ಜಿ ಕಠಿಣ ಕ್ರಮಕೈಗೊಂಡಿದ್ದರು. ಇದರಿಂದಾಗಿ ಅಪರಾಧಿಗೆ ಜೀವವಾಧಿ ಶಿಕ್ಷೆಯಾಗಿದೆ' ಎಂದು ತಿಳಿಸಿದ್ದಾರೆ.</p><p>ಕಳೆದ ವರ್ಷ ಆಗಸ್ಟ್ 9ರಂದು ಕೋಲ್ಕತ್ತದ ಆರ್.ಜಿ ಕರ್ ಆಸ್ಪತ್ರೆಯ 31 ವರ್ಷದ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದರು. ದೇಶದಾದ್ಯಂತ ಈ ಘಟನೆ ಆಕ್ರೋಶಕ್ಕೆ ಕಾರಣವಾಗಿತ್ತು.</p>.ಕಾಡುಪ್ರಾಣಿಗಳಿಗೂ ಧಗೆ..! ರಕ್ಷಿತಾರಣ್ಯಗಳಲ್ಲಿ ಹೊಸ ಕೆರೆ, ನೀರಿನ ಹೊಂಡ ನಿರ್ಮಾಣ.ಸಮಾನಾಂತರ ಜಲಾಶಯ ಕುರಿತು ಚರ್ಚಿಸಲು ಚಂದ್ರಬಾಬು ನಾಯ್ಡು ಭೇಟಿ ಶೀಘ್ರ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>