<p><strong>ನವದೆಹಲಿ:</strong> ದೇಶದ ಕೆಲ ನಗರಗಳು ಅಥವಾ ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳಲ್ಲಿ ಸ್ಥಿರತೆ ಕಂಡುಬರುತ್ತಿದೆ. ಆದರೂ, ಸೋಂಕು ಪ್ರಸರಣದ ಅಪಾಯ ಇದ್ದೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಅಧಿಕಾರಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.</p>.<p>‘ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವುದು ಹಾಗೂ ಸ್ಥಳೀಯ ಸ್ಥಿತಿಗೆ ಅನುಗುಣವಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಗಮನ ನೀಡುವುದು ಮುಖ್ಯ’ ಎಂದು ಅವರು ಹೇಳಿದ್ದಾರೆ.</p>.<p>ಡಾ.ಪೂನಮ್ ಅವರು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿಯಾಗಿದ್ದಾರೆ. ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಕೋವಿಡ್ ಪಿಡುಗಿನ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ.</p>.<p>ದೇಶದ ಕೆಲ ಭಾಗಗಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಇಲ್ಲ. ಸ್ಥಿರತೆಯ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇತ್ತೀಚೆಗೆ ಹೇಳಿದೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೋವಿಡ್–19ನ ಅಪಾಯ ಇನ್ನೂ ಅಧಿಕವಾಗಿಯೇ ಇದೆ. ಸೋಂಕು ಪ್ರಸರಣದ ವೇಗ ಯಾವ ಪ್ರಮಾಣದಲ್ಲಿಯೇ ಇದ್ದರೂ, ಯಾವ ದೇಶವೂ ಈ ವೈರಸ್ನ ಅಪಾಯದಿಂದ ಮುಕ್ತವಾಗಿಲ್ಲ’ ಎಂದು ಹೇಳಿದರು.</p>.<p>‘ಕೋವಿಡ್–19 ಪಿಡುಗು (ಪ್ಯಾಂಡೆಮಿಕ್) ಈಗ ದೇಶದಲ್ಲಿ ಸ್ಥಳೀಯವಾಗಿ ಪ್ರಸರಣವಾಗುವ ಕಾಯಿಲೆ ಹಂತ (ಎಂಡೆಮಿಕ್) ತಲುಪಿದೆಯೇ’ ಎಂಬ ಪ್ರಶ್ನೆಗೆ, ‘ಈಗಲೂ ಪಿಡುಗಿನ ಹಂತವೇ ಇದೆ. ಹೀಗಾಗಿ, ಸೋಂಕು ಪ್ರಸರಣ ತಡೆಯುವುದು ಹಾಗೂ ಜೀವಗಳನ್ನು ಉಳಿಸುವುದರತ್ತ ನಮ್ಮ ಗಮನ ಕೇಂದ್ರೀಕರಿಸಬೇಕಿದೆ’ ಎಂದು ಉತ್ತರಿಸಿದರು.</p>.<p>‘ಎಂಡೆಮಿಕ್ ಹಂತ ತಲುಪಿದೆ ಎಂದ ಮಾತ್ರಕ್ಕೆ ಕೊರೊನಾ ವೈರಸ್ನಿಂದ ಅಪಾಯ ಇಲ್ಲ ಎಂದು ಅರ್ಥವಲ್ಲ’ ಎಂದೂ ಅವರು ಹೇಳಿದರು.</p>.<p>ಕೋವಿಡ್ ಲಸಿಕೆ ಓಮೈಕ್ರಾನ್ ತಳಿ ಸೋಂಕಿನ ವಿರುದ್ಧ ಪರಿಣಾಮಕಾರಿ ಎಂಬುದು ಸಿದ್ಧವಾಗಿದೆ. ಬೂಸ್ಟರ್ ಡೋಸ್ ಪಡೆಯುವುದರಿಂದ ಇನ್ನೂ ಹೆಚ್ಚಿನ ರಕ್ಷಣೆ ಸಿಗಲಿದೆ</p>.<p><strong>- ಡಾ.ಪೂನಮ್ ಖೇತ್ರಪಾಲ್ ಸಿಂಗ್,</strong> ಡಬ್ಲ್ಯೂಎಚ್ಒದ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಕೆಲ ನಗರಗಳು ಅಥವಾ ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳಲ್ಲಿ ಸ್ಥಿರತೆ ಕಂಡುಬರುತ್ತಿದೆ. ಆದರೂ, ಸೋಂಕು ಪ್ರಸರಣದ ಅಪಾಯ ಇದ್ದೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಅಧಿಕಾರಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.</p>.<p>‘ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕುವುದು ಹಾಗೂ ಸ್ಥಳೀಯ ಸ್ಥಿತಿಗೆ ಅನುಗುಣವಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಗಮನ ನೀಡುವುದು ಮುಖ್ಯ’ ಎಂದು ಅವರು ಹೇಳಿದ್ದಾರೆ.</p>.<p>ಡಾ.ಪೂನಮ್ ಅವರು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿಯಾಗಿದ್ದಾರೆ. ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಕೋವಿಡ್ ಪಿಡುಗಿನ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ.</p>.<p>ದೇಶದ ಕೆಲ ಭಾಗಗಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಇಲ್ಲ. ಸ್ಥಿರತೆಯ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇತ್ತೀಚೆಗೆ ಹೇಳಿದೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೋವಿಡ್–19ನ ಅಪಾಯ ಇನ್ನೂ ಅಧಿಕವಾಗಿಯೇ ಇದೆ. ಸೋಂಕು ಪ್ರಸರಣದ ವೇಗ ಯಾವ ಪ್ರಮಾಣದಲ್ಲಿಯೇ ಇದ್ದರೂ, ಯಾವ ದೇಶವೂ ಈ ವೈರಸ್ನ ಅಪಾಯದಿಂದ ಮುಕ್ತವಾಗಿಲ್ಲ’ ಎಂದು ಹೇಳಿದರು.</p>.<p>‘ಕೋವಿಡ್–19 ಪಿಡುಗು (ಪ್ಯಾಂಡೆಮಿಕ್) ಈಗ ದೇಶದಲ್ಲಿ ಸ್ಥಳೀಯವಾಗಿ ಪ್ರಸರಣವಾಗುವ ಕಾಯಿಲೆ ಹಂತ (ಎಂಡೆಮಿಕ್) ತಲುಪಿದೆಯೇ’ ಎಂಬ ಪ್ರಶ್ನೆಗೆ, ‘ಈಗಲೂ ಪಿಡುಗಿನ ಹಂತವೇ ಇದೆ. ಹೀಗಾಗಿ, ಸೋಂಕು ಪ್ರಸರಣ ತಡೆಯುವುದು ಹಾಗೂ ಜೀವಗಳನ್ನು ಉಳಿಸುವುದರತ್ತ ನಮ್ಮ ಗಮನ ಕೇಂದ್ರೀಕರಿಸಬೇಕಿದೆ’ ಎಂದು ಉತ್ತರಿಸಿದರು.</p>.<p>‘ಎಂಡೆಮಿಕ್ ಹಂತ ತಲುಪಿದೆ ಎಂದ ಮಾತ್ರಕ್ಕೆ ಕೊರೊನಾ ವೈರಸ್ನಿಂದ ಅಪಾಯ ಇಲ್ಲ ಎಂದು ಅರ್ಥವಲ್ಲ’ ಎಂದೂ ಅವರು ಹೇಳಿದರು.</p>.<p>ಕೋವಿಡ್ ಲಸಿಕೆ ಓಮೈಕ್ರಾನ್ ತಳಿ ಸೋಂಕಿನ ವಿರುದ್ಧ ಪರಿಣಾಮಕಾರಿ ಎಂಬುದು ಸಿದ್ಧವಾಗಿದೆ. ಬೂಸ್ಟರ್ ಡೋಸ್ ಪಡೆಯುವುದರಿಂದ ಇನ್ನೂ ಹೆಚ್ಚಿನ ರಕ್ಷಣೆ ಸಿಗಲಿದೆ</p>.<p><strong>- ಡಾ.ಪೂನಮ್ ಖೇತ್ರಪಾಲ್ ಸಿಂಗ್,</strong> ಡಬ್ಲ್ಯೂಎಚ್ಒದ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>