ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಕಾರಣ ಅಯೋಧ್ಯೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ ಭಯೋತ್ಪಾದಕ ನಿಗ್ರಹ ದಳದ ಕಮಾಂಡೊಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಮೂರು ದಿನ ಮೊದಲ ಮಹಡಿ ಪ್ರವೇಶಿಸುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದೂ ತಿಳಿಸಿವೆ.