<p><strong>ಪಟ್ನಾ: </strong>ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಅವರು ಗುರುವಾರ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಪಕ್ಷವನ್ನು ತೊರೆದಿದ್ದಾರೆ. ಇದರಿಂದ ಬಿಹಾರ ವಿಧಾನಸಭೆ ಚುನಾವಣೆ ಸಿದ್ಧತೆಯಲ್ಲಿರುವ ಆರ್ಜೆಡಿಗೆ ಅಲ್ಪ ಹಿನ್ನಡೆ ಉಂಟಾಗಿದೆ.</p>.<p>ಈ ಸಂಬಂಧ ರಘುವಂಶ್ ಅವರು ಆರ್ಜೆಡಿ ನಾಯಕ ಲಾಲು ಪ್ರಸಾದ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.</p>.<p>‘ಜನ್ನಾಯಕ್ ಕರ್ಪೂರಿ ಠಾಕೂರ್ ಅವರ ನಿಧನದ ದಿನದಿಂದಲೂ (32 ವರ್ಷಗಳಿಂದ) ನಾನು ನಿಮ್ಮ ಬೆನ್ನಿಗೆ ನಿಂತಿದ್ದೇನೆ. ಇನ್ನು ಮುಂದೆ ಅದು ಸಾಧ್ಯವಿಲ್ಲ’ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ನನಗೆ ಜನ ಸಾಮಾನ್ಯರ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಅಪಾರ ಪ್ರೀತಿ ವಿಶ್ವಾಸ ಸಿಕ್ಕಿದೆ. ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ’ ಎಂದೂ ಅವರು ಬರೆದಿದ್ದಾರೆ.</p>.<p>74 ವರ್ಷ ವಯಸ್ಸಿನ ರಘುವಂಶ್ ಅವರು ಜೂನ್ನಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಲಾಲು ಪ್ರಸಾದ್ ಅವರು ಮನವೊಲಿಸಿದ ಬಳಿಕ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ: </strong>ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಅವರು ಗುರುವಾರ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಪಕ್ಷವನ್ನು ತೊರೆದಿದ್ದಾರೆ. ಇದರಿಂದ ಬಿಹಾರ ವಿಧಾನಸಭೆ ಚುನಾವಣೆ ಸಿದ್ಧತೆಯಲ್ಲಿರುವ ಆರ್ಜೆಡಿಗೆ ಅಲ್ಪ ಹಿನ್ನಡೆ ಉಂಟಾಗಿದೆ.</p>.<p>ಈ ಸಂಬಂಧ ರಘುವಂಶ್ ಅವರು ಆರ್ಜೆಡಿ ನಾಯಕ ಲಾಲು ಪ್ರಸಾದ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.</p>.<p>‘ಜನ್ನಾಯಕ್ ಕರ್ಪೂರಿ ಠಾಕೂರ್ ಅವರ ನಿಧನದ ದಿನದಿಂದಲೂ (32 ವರ್ಷಗಳಿಂದ) ನಾನು ನಿಮ್ಮ ಬೆನ್ನಿಗೆ ನಿಂತಿದ್ದೇನೆ. ಇನ್ನು ಮುಂದೆ ಅದು ಸಾಧ್ಯವಿಲ್ಲ’ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ನನಗೆ ಜನ ಸಾಮಾನ್ಯರ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಅಪಾರ ಪ್ರೀತಿ ವಿಶ್ವಾಸ ಸಿಕ್ಕಿದೆ. ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ’ ಎಂದೂ ಅವರು ಬರೆದಿದ್ದಾರೆ.</p>.<p>74 ವರ್ಷ ವಯಸ್ಸಿನ ರಘುವಂಶ್ ಅವರು ಜೂನ್ನಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಲಾಲು ಪ್ರಸಾದ್ ಅವರು ಮನವೊಲಿಸಿದ ಬಳಿಕ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>