<p><strong>ನವದೆಹಲಿ</strong>: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ ಜಯಂತ್ ಸಿಂಗ್, ಇಂಡಿಯಾ ಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರ್ಪಡೆಗೊಂಡಿದ್ದಾರೆ.</p><p>ಮೈತ್ರಿಕೂಟ ಸೇರಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಜಯಂತ್ ಸಿಂಗ್ ಔಪಚಾರಿಕವಾಗಿ ಭೇಟಿಯಾಗಿದ್ದಾರೆ.</p><p>‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ದಿಯತ್ತ ಸಾಗುತ್ತಿದೆ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಜಯಂತ್ ಸಿಂಗ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.</p><p>ಉತ್ತರ ಪ್ರದೇಶದ ಎರಡು ಸ್ಥಾನಗಳಲ್ಲಿ ಆರ್ಎಲ್ಡಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.</p><p>ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್ ಸಿಂಗ್ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್ ಎನ್ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿದ್ದವು.</p><p>ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ಈ ಹಿಂದೆ ಹೇಳಿದ್ದ ಜಯಂತ್ ಸಿಂಗ್, ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದೇ ತಮ್ಮ ನಿರ್ಧಾರಕ್ಕೆ ಪ್ರಮುಖ ಕಾರಣವೆಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ ಜಯಂತ್ ಸಿಂಗ್, ಇಂಡಿಯಾ ಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರ್ಪಡೆಗೊಂಡಿದ್ದಾರೆ.</p><p>ಮೈತ್ರಿಕೂಟ ಸೇರಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಜಯಂತ್ ಸಿಂಗ್ ಔಪಚಾರಿಕವಾಗಿ ಭೇಟಿಯಾಗಿದ್ದಾರೆ.</p><p>‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ದಿಯತ್ತ ಸಾಗುತ್ತಿದೆ. ದೇಶದ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಜಯಂತ್ ಸಿಂಗ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.</p><p>ಉತ್ತರ ಪ್ರದೇಶದ ಎರಡು ಸ್ಥಾನಗಳಲ್ಲಿ ಆರ್ಎಲ್ಡಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.</p><p>ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್ ಸಿಂಗ್ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್ ಎನ್ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿದ್ದವು.</p><p>ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದೊಂದಿಗೆ ಕೈಜೋಡಿಸುವುದಾಗಿ ಈ ಹಿಂದೆ ಹೇಳಿದ್ದ ಜಯಂತ್ ಸಿಂಗ್, ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದೇ ತಮ್ಮ ನಿರ್ಧಾರಕ್ಕೆ ಪ್ರಮುಖ ಕಾರಣವೆಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>